ಪ್ರಶಾಂತ್ ಎನ್.ಮಲ್ಲಿಕ್
ಮೈಸೂರು: ಯುಗಾದಿ ಹಬ್ಬದ ಹೊಸ ತೊಡಕು ಹಿನ್ನೆಲೆ ನಗರದ ಹಲವೆಡೆ ಮಾಂಸ ಮಾರಾಟ ಜೋರಾಗಿದ್ದು, ಅದರಲ್ಲೂ ಗುಡ್ಡೆ ಮಾಂಸದ ಭರಾಟೆ ನಡೆದಿದೆ.
ಯುಗಾದಿ ಹಬ್ಬದ ಮಾರನೆ ದಿನ ಸೋಮವಾರವಿದ್ದ ಕಾರಣ ಇಂದು(ಏಪ್ರಿಲ್.1) ನೂರಾರು ಮೇಕೆ ಮತ್ತು ಕುರಿಗಳನ್ನು ಕಡಿದು ಗುಡ್ಡೆ ಮಾಂಸ ಮಾರಾಟ ಮಾಡಿದ್ದಾರೆ. ಈ ಗುಡ್ಡೆ ಮಾಂಸವನ್ನು ನಗರದ ಕೆ.ಜಿ ಕೊಪ್ಪಲು, ಕುಂಬಾರಕೊಪ್ಪಲು, ಒಂಟಿಕೊಪ್ಪಲು, ಪಡುವಾರಹಳ್ಳಿ ಸೇರಿದಂತೆ ಹಲವೆಡೆ ಭರ್ಜರಿ ಮಾರಾಟ ಮಾಡಲಾಗಿದ್ದು, ಒಂದು ಕೆ.ಜಿ.ಗುಡ್ಡೆ ಮಾಂಸಕ್ಕೆ 700 ರೂ ನಿಗಧಿ ಮಾಡಲಾಗಿದೆ.
ಯುಗಾದಿ, ಆಯುಧಪೂಜೆ, ಗೌರಿ ಹಾಗೂ ದೀಪಾವಳಿ ಹಬ್ಬಗಳ ಮಾರನೇ ದಿನ ಹೊಸ ತೊಡಕು ಎಂದು ಮಾಂಸದೂಟ ಮಾಡುವ ವಾಡಿಕೆ ಇದೆ. ಅಂತೆಯೇ ಮೈಸೂರಿನ ಸುತ್ತಮುತ್ತಲಿನ ಜನರು ಹಲವಾರು ವರ್ಷಗಳಿಂದ ಬಂದಿರುವ ಗುಡ್ಡೆ ಮಾಂಸ ಮಾರಾಟ ಮಾಡುವ ಸಂಪ್ರದಾಯವನ್ನು ಮುಂದುವರಿಸಿಕೊಂಡು ಬಂದಿದ್ದಾರೆ. ಹೀಗಾಗಿ ಇಂದು ನಗರದ ಜನರು ಗುಡ್ಡೆ ಮಾಂಸ ಖರೀದಿಗೆ ಮುಗಿಬಿದ್ದಿದ್ದು, ಭರ್ಜರಿ ಬಾಡೂಟ ಸೇವನೆ ಮಾಡಲಿದ್ದಾರೆ.
ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…
ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…
ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು…
ಬೆಂಗಳೂರಿನ ಯಶವಂತಪುರ, ಎಸ್ಎಂವಿಟಿ, ಕೆ.ಆರ್.ಪುರಂ, ರೈಲ್ವೆ ನಿಲ್ದಾಣಗಳಿಂದ ಚಾಮರಾಜನಗರ, ಮೈಸೂರು, ಶಿವಮೊಗ್ಗ, ಕಡೂರು, ತಾಳಗುಪ್ಪ , ಹಾಸನ , ಉಡುಪಿ,…
ಮೈಸೂರು: ಕಲಿಯುಗದ ಕಾಮಧೇನು ಶ್ರೀ ಗುರುರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಗುಡ್ನ್ಯೂಸ್ ಸಿಕ್ಕಿದ್ದು, ಕಾಕಿನಾಡ-ಮೈಸೂರು ಬೈ ವೀಕ್ಲಿ ಎಕ್ಸ್ಪ್ರೆಸ್ಗೆ ಅನುಮೋದನೆ…
ಹೇಮಂತ್ಕುಮಾರ್ ರೈತ ಸಂಘ-ಕೆಆರ್ಎಸ್ ಪಕ್ಷ, ಎಸ್ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…