ಮೈಸೂರು: ಹೊಸ ತಲೆಮಾರಿನ ಜಾನಪದ ಕಲಾವಿದರಿಗೆ ಪ್ರೋತ್ಸಾಹ ನೀಡಿದರೆ ಮಾತ್ರ ಕಲೆಯನ್ನು ಉಳಿಸಲು ಸಾಧ್ಯ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಜಯಪ್ರಕಾಶ್ಗೌಡ ಹೇಳಿದರು.
ರಂಗಾಯಣದ ಭೂಮಿಗೀತದಲ್ಲಿ ಕರ್ನಾಟಕ ಬಯಲಾಟ ಅಕಾಡೆಮಿ, ಮೈಸೂರು ರಂಗಾಯಣ ಮತ್ತು ಮಹಾರಾಜ ಕಾಲೇಜು ಜಾನಪದ ವಿಭಾಗಗಳ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಮೂಡಲಪಾಯ, ಬಯಲಾಟದ ಹೊಸ ಸಾಧ್ಯತೆಗಳು’ ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಂಡ್ಯದ ಕಾಲೇಜಿನಲ್ಲಿ ನಾನು ಪ್ರಾಧ್ಯಾಪಕನಾಗಿದ್ದಾಗ ಜಾನಪದ ಹಾಗೂ ಎಲ್ಲ ಕಲೆಗಳನ್ನು ವಿದ್ಯಾರ್ಥಿ ಗಳಿಗೆ ಕಲಿಸುವ ಕೆಲಸ ಮಾಡಿದ್ದೆ. ಬಳಿಕ ಕಾಲೇಜಿನಲ್ಲಿ ಕಲೆಗಳನ್ನು ಪ್ರದರ್ಶಿಸುವುದಲ್ಲದೇ, ವೃತ್ತಿ ಕಲಾವಿದ ರೊಂದಿಗೆ ಸೇರಿ ಹಳ್ಳಿಗಳಲ್ಲಿ ಕಲೆಗಳನ್ನು ವ್ಯವಸ್ಥಿತವಾಗಿ ಪ್ರದರ್ಶನ ಮಾಡುವ ಕೆಲಸ ಮಾಡುತ್ತಿದ್ದೆವು ಎಂದು ತಿಳಿಸಿದರು.
ಅಂತಾರಾಷ್ಟ್ರೀಯ ಮಟ್ಟದ್ದಲ್ಲಿ ಪರಿಗಣಿಸಬಹುದಾದ ಜಾನಪದದ ಬಗ್ಗೆ ಎಲ್ಲರೂ ಮಾತನಾಡುತ್ತಾರೆ. ಆದರೆ, ಅದರ ಒಳ ಹೊಕ್ಕುವ ಪ್ರಯತ್ನವಾಗಲೀ, ಅದನ್ನು ಮುಂದು ವರಿಸುವ ಕೆಲಸವಾಗಲಿ ಯಾರಿಂದಲೂ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಜಾನಪದ ಕಲೆಗಳು ಅಳಿವಿನ ಅಂಚಿನ ಹಾದಿ ಹಿಡಿದಿವೆ. ಪ್ರಯೋಗಶೀಲತೆಯಾದಾಗ ಮಾತ್ರ ಯಾವುದೇ ಕಲೆ ಉಳಿಯಲು ಸಾಧ್ಯ. ಒಂದು ತಮಟೆಯ ಶಬ್ಧ ಪ್ರತಿಯೊಬ್ಬರನ್ನೂ ಎಚ್ಚರಿಸುವ ಕೆಲಸ ಮಾಡುತ್ತದೆ. ಕಲೆ ಉಳಿಯಲು ಕೇವಲ ಪಠ್ಯ ಶಿಕ್ಷಣ ಸಾಲದು ಪ್ರಾಯೋಗಿಕ ಶಿಕ್ಷಣ ಬಹಳ ಮುಖ್ಯ. ಅಂತಹ ಕೆಲಸಗಳನ್ನು ಯಾವ ಅಕಾಡೆಮಿಗಳಾಗಲಿ, ವಿಶ್ವವಿದ್ಯಾನಿಲಯಗಳಾಗಲಿ ಮಾಡುತ್ತಿಲ್ಲ ಎಂದು ತಿಳಿಸಿದರು.
ಪ್ರೊ.ಡಿ.ಕೆ.ರಾಜೇಂದ್ರ, ಪ್ರೊ.ನಂಜಯ್ಯ ಹೊಂಗನೂರು, ಡಾ.ಮೈಲಹಳ್ಳಿ ರೇವಣ್ಣ, ಡಿ.ತಿಪ್ಪಣ್ಣ, ಪ್ರೊ. ಎಚ್.ಆರ್.ಚೇತನ, ಪ್ರೊ.ವಿಜಯಲಕ್ಷ್ಮೀ ಮನಾಪುರ, ಮರಿಯಯ್ಯ ಮತ್ತಿತರರು ಉಪಸ್ಥಿತರಿದ್ದರು.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…
ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…
ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…
ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…