ಮೈಸೂರು

ಹೊಸ ತಲೆಮಾರಿನ ಕಲಾವಿದರ ಪ್ರೋತ್ಸಾಹ ಅಗತ್ಯ : ಪ್ರೊ.ಜಯಪ್ರಕಾಶ್‌ಗೌಡ

ಮೈಸೂರು: ಹೊಸ ತಲೆಮಾರಿನ ಜಾನಪದ ಕಲಾವಿದರಿಗೆ ಪ್ರೋತ್ಸಾಹ ನೀಡಿದರೆ ಮಾತ್ರ ಕಲೆಯನ್ನು ಉಳಿಸಲು ಸಾಧ್ಯ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಜಯಪ್ರಕಾಶ್‌ಗೌಡ ಹೇಳಿದರು.

ರಂಗಾಯಣದ ಭೂಮಿಗೀತದಲ್ಲಿ ಕರ್ನಾಟಕ ಬಯಲಾಟ ಅಕಾಡೆಮಿ, ಮೈಸೂರು ರಂಗಾಯಣ ಮತ್ತು ಮಹಾರಾಜ ಕಾಲೇಜು ಜಾನಪದ ವಿಭಾಗಗಳ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಮೂಡಲಪಾಯ, ಬಯಲಾಟದ ಹೊಸ ಸಾಧ್ಯತೆಗಳು’ ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಂಡ್ಯದ ಕಾಲೇಜಿನಲ್ಲಿ ನಾನು ಪ್ರಾಧ್ಯಾಪಕನಾಗಿದ್ದಾಗ ಜಾನಪದ ಹಾಗೂ ಎಲ್ಲ ಕಲೆಗಳನ್ನು ವಿದ್ಯಾರ್ಥಿ ಗಳಿಗೆ ಕಲಿಸುವ ಕೆಲಸ ಮಾಡಿದ್ದೆ. ಬಳಿಕ ಕಾಲೇಜಿನಲ್ಲಿ ಕಲೆಗಳನ್ನು ಪ್ರದರ್ಶಿಸುವುದಲ್ಲದೇ, ವೃತ್ತಿ ಕಲಾವಿದ ರೊಂದಿಗೆ ಸೇರಿ ಹಳ್ಳಿಗಳಲ್ಲಿ ಕಲೆಗಳನ್ನು ವ್ಯವಸ್ಥಿತವಾಗಿ ಪ್ರದರ್ಶನ ಮಾಡುವ ಕೆಲಸ ಮಾಡುತ್ತಿದ್ದೆವು ಎಂದು ತಿಳಿಸಿದರು.

ಅಂತಾರಾಷ್ಟ್ರೀಯ ಮಟ್ಟದ್ದಲ್ಲಿ ಪರಿಗಣಿಸಬಹುದಾದ ಜಾನಪದದ  ಬಗ್ಗೆ ಎಲ್ಲರೂ ಮಾತನಾಡುತ್ತಾರೆ. ಆದರೆ,  ಅದರ ಒಳ ಹೊಕ್ಕುವ ಪ್ರಯತ್ನವಾಗಲೀ, ಅದನ್ನು ಮುಂದು ವರಿಸುವ ಕೆಲಸವಾಗಲಿ ಯಾರಿಂದಲೂ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಜಾನಪದ ಕಲೆಗಳು ಅಳಿವಿನ ಅಂಚಿನ ಹಾದಿ ಹಿಡಿದಿವೆ. ಪ್ರಯೋಗಶೀಲತೆಯಾದಾಗ ಮಾತ್ರ ಯಾವುದೇ ಕಲೆ ಉಳಿಯಲು ಸಾಧ್ಯ. ಒಂದು ತಮಟೆಯ ಶಬ್ಧ ಪ್ರತಿಯೊಬ್ಬರನ್ನೂ ಎಚ್ಚರಿಸುವ ಕೆಲಸ ಮಾಡುತ್ತದೆ. ಕಲೆ ಉಳಿಯಲು ಕೇವಲ ಪಠ್ಯ ಶಿಕ್ಷಣ ಸಾಲದು ಪ್ರಾಯೋಗಿಕ ಶಿಕ್ಷಣ ಬಹಳ ಮುಖ್ಯ. ಅಂತಹ ಕೆಲಸಗಳನ್ನು ಯಾವ ಅಕಾಡೆಮಿಗಳಾಗಲಿ, ವಿಶ್ವವಿದ್ಯಾನಿಲಯಗಳಾಗಲಿ ಮಾಡುತ್ತಿಲ್ಲ ಎಂದು ತಿಳಿಸಿದರು.

ಪ್ರೊ.ಡಿ.ಕೆ.ರಾಜೇಂದ್ರ, ಪ್ರೊ.ನಂಜಯ್ಯ ಹೊಂಗನೂರು, ಡಾ.ಮೈಲಹಳ್ಳಿ ರೇವಣ್ಣ, ಡಿ.ತಿಪ್ಪಣ್ಣ, ಪ್ರೊ. ಎಚ್.ಆರ್.ಚೇತನ, ಪ್ರೊ.ವಿಜಯಲಕ್ಷ್ಮೀ ಮನಾಪುರ, ಮರಿಯಯ್ಯ ಮತ್ತಿತರರು ಉಪಸ್ಥಿತರಿದ್ದರು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

10 hours ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

11 hours ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

11 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

11 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

11 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

12 hours ago