ಮೈಸೂರು

ಹೊಸ ತಲೆಮಾರಿನ ಕಲಾವಿದರ ಪ್ರೋತ್ಸಾಹ ಅಗತ್ಯ : ಪ್ರೊ.ಜಯಪ್ರಕಾಶ್‌ಗೌಡ

ಮೈಸೂರು: ಹೊಸ ತಲೆಮಾರಿನ ಜಾನಪದ ಕಲಾವಿದರಿಗೆ ಪ್ರೋತ್ಸಾಹ ನೀಡಿದರೆ ಮಾತ್ರ ಕಲೆಯನ್ನು ಉಳಿಸಲು ಸಾಧ್ಯ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಜಯಪ್ರಕಾಶ್‌ಗೌಡ ಹೇಳಿದರು.

ರಂಗಾಯಣದ ಭೂಮಿಗೀತದಲ್ಲಿ ಕರ್ನಾಟಕ ಬಯಲಾಟ ಅಕಾಡೆಮಿ, ಮೈಸೂರು ರಂಗಾಯಣ ಮತ್ತು ಮಹಾರಾಜ ಕಾಲೇಜು ಜಾನಪದ ವಿಭಾಗಗಳ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಮೂಡಲಪಾಯ, ಬಯಲಾಟದ ಹೊಸ ಸಾಧ್ಯತೆಗಳು’ ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಂಡ್ಯದ ಕಾಲೇಜಿನಲ್ಲಿ ನಾನು ಪ್ರಾಧ್ಯಾಪಕನಾಗಿದ್ದಾಗ ಜಾನಪದ ಹಾಗೂ ಎಲ್ಲ ಕಲೆಗಳನ್ನು ವಿದ್ಯಾರ್ಥಿ ಗಳಿಗೆ ಕಲಿಸುವ ಕೆಲಸ ಮಾಡಿದ್ದೆ. ಬಳಿಕ ಕಾಲೇಜಿನಲ್ಲಿ ಕಲೆಗಳನ್ನು ಪ್ರದರ್ಶಿಸುವುದಲ್ಲದೇ, ವೃತ್ತಿ ಕಲಾವಿದ ರೊಂದಿಗೆ ಸೇರಿ ಹಳ್ಳಿಗಳಲ್ಲಿ ಕಲೆಗಳನ್ನು ವ್ಯವಸ್ಥಿತವಾಗಿ ಪ್ರದರ್ಶನ ಮಾಡುವ ಕೆಲಸ ಮಾಡುತ್ತಿದ್ದೆವು ಎಂದು ತಿಳಿಸಿದರು.

ಅಂತಾರಾಷ್ಟ್ರೀಯ ಮಟ್ಟದ್ದಲ್ಲಿ ಪರಿಗಣಿಸಬಹುದಾದ ಜಾನಪದದ  ಬಗ್ಗೆ ಎಲ್ಲರೂ ಮಾತನಾಡುತ್ತಾರೆ. ಆದರೆ,  ಅದರ ಒಳ ಹೊಕ್ಕುವ ಪ್ರಯತ್ನವಾಗಲೀ, ಅದನ್ನು ಮುಂದು ವರಿಸುವ ಕೆಲಸವಾಗಲಿ ಯಾರಿಂದಲೂ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಜಾನಪದ ಕಲೆಗಳು ಅಳಿವಿನ ಅಂಚಿನ ಹಾದಿ ಹಿಡಿದಿವೆ. ಪ್ರಯೋಗಶೀಲತೆಯಾದಾಗ ಮಾತ್ರ ಯಾವುದೇ ಕಲೆ ಉಳಿಯಲು ಸಾಧ್ಯ. ಒಂದು ತಮಟೆಯ ಶಬ್ಧ ಪ್ರತಿಯೊಬ್ಬರನ್ನೂ ಎಚ್ಚರಿಸುವ ಕೆಲಸ ಮಾಡುತ್ತದೆ. ಕಲೆ ಉಳಿಯಲು ಕೇವಲ ಪಠ್ಯ ಶಿಕ್ಷಣ ಸಾಲದು ಪ್ರಾಯೋಗಿಕ ಶಿಕ್ಷಣ ಬಹಳ ಮುಖ್ಯ. ಅಂತಹ ಕೆಲಸಗಳನ್ನು ಯಾವ ಅಕಾಡೆಮಿಗಳಾಗಲಿ, ವಿಶ್ವವಿದ್ಯಾನಿಲಯಗಳಾಗಲಿ ಮಾಡುತ್ತಿಲ್ಲ ಎಂದು ತಿಳಿಸಿದರು.

ಪ್ರೊ.ಡಿ.ಕೆ.ರಾಜೇಂದ್ರ, ಪ್ರೊ.ನಂಜಯ್ಯ ಹೊಂಗನೂರು, ಡಾ.ಮೈಲಹಳ್ಳಿ ರೇವಣ್ಣ, ಡಿ.ತಿಪ್ಪಣ್ಣ, ಪ್ರೊ. ಎಚ್.ಆರ್.ಚೇತನ, ಪ್ರೊ.ವಿಜಯಲಕ್ಷ್ಮೀ ಮನಾಪುರ, ಮರಿಯಯ್ಯ ಮತ್ತಿತರರು ಉಪಸ್ಥಿತರಿದ್ದರು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

9 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

9 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

9 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

9 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

9 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

9 hours ago