ಮೈಸೂರು : ಇನ್ನ ೨ ವರ್ಷದಲ್ಲಿ ವರುಣ ಕ್ಷೇತ್ರದಲ್ಲಿ ಯಾವುದೇ ಶಿಥಿಲ ವ್ಯವಸ್ಥೆಯ ಶಾಲಾ ಕೊಠಡಿಗಳು ಇರುವುದಿಲ್ಲ. ಅಷ್ಟರ ಮಟ್ಟಿಗೆ ಶೈಕ್ಷಣಿಕ ಪ್ರಗತಿ ಕೈಗೊಳ್ಳುತ್ತೇವೆ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹದಿನಾರು ಗ್ರಾಮದಲ್ಲಿ ತಾಂಡವಪುರ ಕೈಗಾರಿಕಾ ಪ್ರದೇಶದಲ್ಲಿರುವ ಐಟಿಸಿ ಕಂಪನಿ ವತಿಯಿಂದ ಎರಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿತ್ತು. ಈ ಶಾಲಾ ಕೊಠಡಿಗಳನ್ನು ಹಾಗೂ ಅಂಗನವಾಡಿ ಕೊಣೆಗಳ ಬೀಗದ ಕೀ ಯನ್ನು ಶಾಲೆಯ ಮುಖ್ಯ ಶಿಕ್ಷಕರಿಗೆ ಕೊಡುವ ಮೂಲಕ ಡಾ.ಯತೀಂದ್ರ ಸಿದ್ದರಾಮಯ್ಯ ಕೊಠಡಿ ಉದ್ಘಾಟನೆ ಮಾಡಿದರು.
ಬಳಿಕ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ನಮ್ಮ ವರುಣ ಕ್ಷೇತ್ರದಲ್ಲಿರುವ ಕೈಗಾರಿಕಾ ಪ್ರದೇಶದ ಕಂಪನಿಗಳ ಮಾಲೀಕರು ಹಾಗೂ ದಾನಿಗಳು ಶೈಕ್ಷಣಿಕ ಪ್ರಗತಿಗೆ ಹೆಚ್ಚು ಸಹಕಾರ ನೀಡುತ್ತಿರುವುದು ಬಹಳ ಒಳ್ಳೆಯ ಕೆಲಸ ಎಂದು ಕಂಪನಿಗಳ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಅಲ್ಲದೆ ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಎಲ್ಲ ಗ್ರಾಮಗಳಲ್ಲೂ ಶಿಥಿಲ ವ್ಯವಸ್ಥೆಯಲ್ಲಿರುವ ಶಾಲಾ ಕೊಠಡಿಗಳನ್ನು ಕೆಡವಿ ಸರ್ಕಾರ ಮತ್ತು ದಾನಿಗಳ ಸಹಕಾರದಿಂದ ಇನ್ನು ಎರಡು ವರ್ಷಗಳಲ್ಲಿ ಹೊಸ ಶಾಲಾ ಕೊಠಡಿಗಳನ್ನ ನಿರ್ಮಿಸಿಕೊಡುತ್ತೇವೆ ಎಂದು ಭರವಸೆ ನೀಡಿದರು.
ಇದೇ ವೇಳೆ ಐಟಿಸಿ ಕಂಪನಿ ವತಿಯಿಂದ ಡಾ.ಯತೀಂದ್ರ ಸಿದ್ರಾಮಯ್ಯನವರನ್ನು ಸನ್ಮಾನಿಸಲಾಯಿತು.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…
ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…