ಮೈಸೂರು : ಇನ್ನ ೨ ವರ್ಷದಲ್ಲಿ ವರುಣ ಕ್ಷೇತ್ರದಲ್ಲಿ ಯಾವುದೇ ಶಿಥಿಲ ವ್ಯವಸ್ಥೆಯ ಶಾಲಾ ಕೊಠಡಿಗಳು ಇರುವುದಿಲ್ಲ. ಅಷ್ಟರ ಮಟ್ಟಿಗೆ ಶೈಕ್ಷಣಿಕ ಪ್ರಗತಿ ಕೈಗೊಳ್ಳುತ್ತೇವೆ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹದಿನಾರು ಗ್ರಾಮದಲ್ಲಿ ತಾಂಡವಪುರ ಕೈಗಾರಿಕಾ ಪ್ರದೇಶದಲ್ಲಿರುವ ಐಟಿಸಿ ಕಂಪನಿ ವತಿಯಿಂದ ಎರಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿತ್ತು. ಈ ಶಾಲಾ ಕೊಠಡಿಗಳನ್ನು ಹಾಗೂ ಅಂಗನವಾಡಿ ಕೊಣೆಗಳ ಬೀಗದ ಕೀ ಯನ್ನು ಶಾಲೆಯ ಮುಖ್ಯ ಶಿಕ್ಷಕರಿಗೆ ಕೊಡುವ ಮೂಲಕ ಡಾ.ಯತೀಂದ್ರ ಸಿದ್ದರಾಮಯ್ಯ ಕೊಠಡಿ ಉದ್ಘಾಟನೆ ಮಾಡಿದರು.
ಬಳಿಕ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ನಮ್ಮ ವರುಣ ಕ್ಷೇತ್ರದಲ್ಲಿರುವ ಕೈಗಾರಿಕಾ ಪ್ರದೇಶದ ಕಂಪನಿಗಳ ಮಾಲೀಕರು ಹಾಗೂ ದಾನಿಗಳು ಶೈಕ್ಷಣಿಕ ಪ್ರಗತಿಗೆ ಹೆಚ್ಚು ಸಹಕಾರ ನೀಡುತ್ತಿರುವುದು ಬಹಳ ಒಳ್ಳೆಯ ಕೆಲಸ ಎಂದು ಕಂಪನಿಗಳ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಅಲ್ಲದೆ ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಎಲ್ಲ ಗ್ರಾಮಗಳಲ್ಲೂ ಶಿಥಿಲ ವ್ಯವಸ್ಥೆಯಲ್ಲಿರುವ ಶಾಲಾ ಕೊಠಡಿಗಳನ್ನು ಕೆಡವಿ ಸರ್ಕಾರ ಮತ್ತು ದಾನಿಗಳ ಸಹಕಾರದಿಂದ ಇನ್ನು ಎರಡು ವರ್ಷಗಳಲ್ಲಿ ಹೊಸ ಶಾಲಾ ಕೊಠಡಿಗಳನ್ನ ನಿರ್ಮಿಸಿಕೊಡುತ್ತೇವೆ ಎಂದು ಭರವಸೆ ನೀಡಿದರು.
ಇದೇ ವೇಳೆ ಐಟಿಸಿ ಕಂಪನಿ ವತಿಯಿಂದ ಡಾ.ಯತೀಂದ್ರ ಸಿದ್ರಾಮಯ್ಯನವರನ್ನು ಸನ್ಮಾನಿಸಲಾಯಿತು.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…