ಮೈಸೂರು: ಹೊಸ ವರ್ಷ ಸಂಭ್ರಮಾಚರಣೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಡೆಯುವ ನಿಟ್ಟಿನಲ್ಲಿ 36 ವಿಶೇಷ ಕಾರ್ಯಪಡೆಗಳನ್ನು ರಚಿಸಲಾಗಿದ್ದು, ಮಹಿಳೆಯರ ಸುರಕ್ಷತೆಗಾಗಿ 8 ಸುರಕ್ಷತಾ ಪಿಂಕ್ ಗರುಡಾ (ಚಾಮುಂಡಿ ಪಡೆ) ಪಡೆಗಳನ್ನು ರಚಿಸಲಾಗಿದೆ ಎಂದ ನಗರ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಹೇಳಿದ್ದಾರೆ.
ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ವರ್ಷ ಸಂಭ್ರಮಾಚರಣೆ ಕಾರ್ಯಕ್ರಮಗಳನ್ನು ಮಧ್ಯರಾತ್ರಿ 1 ಗಂಟೆ ಒಳಗಾಗಿ ಮುಕ್ತಾಯಗೊಳಿಸಬೇಕು. ಸಾರ್ವಜನಿಕರಿಗೆ ಬಲವಂತವಾಗಿ ಶುಭ ಕೋರಿ ಕಿರಿಕಿರಿ ನೀಡಬಾರದು, ಅಶ್ಲೀಲ, ಅರಬೆತ್ತಲೆ ವರ್ತನೆ, ಮಾದಕ ವಸ್ತು ಸೇವನೆ, ಜೂಜಾಟಗಳನ್ನು ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ತಪಾಸಣೆಗಾಗಿ ಶ್ವಾನ ದಳ, ವಿಧ್ವಂಸಕ ಕೃತ್ಯ ತಡೆಯಲು ನಾಲ್ಕು ತಂಡಗಳನ್ನು ರಚಿಸಲಾಗಿದೆ. ಡ್ರ್ಯಾಗ್ ರೇಸ್, ವ್ಹೀಲಿಂಗ್ಮ ಕರ್ಕಶ ಶಬ್ದ ತಡೆಯಲು ಕ್ಷಿಪ್ರ ಕಾರ್ಯಾಚರಣೆ ತಂಡ ರಚಿಸಿದ್ದೇವೆ. ಮಾದಕ ವಸ್ತು ಸಾಗಾಟ ಪತ್ತೆಹಚ್ಚಲು ಸಿಸಿಬಿ ತಂಡ ಕಾರ್ಯಪ್ರವೃತರಾಗಿದ್ದಾರೆ ಎಂದರು.
ರೆಸ್ಟೋರೆಂಟ್, ಮದ್ಯಪಾನ ಸರಬರಾಜು ಮಾಡುವ ಹೋಟೆಲ್ಗಳು ಅಬಕಾರಿ ಇಲಾಖೆ ಜೊತೆ ಪೊಲೀಸ್ ಇಲಾಖೆಯಿಂದಲೂ ಅನುಮತಿ ಪಡೆಯಬೇಕು. ಧ್ವನಿ ವರ್ಧಕ ಅಳವಡಿಸುವವರು ನಿರ್ದಿಷ್ಟ ಡೆಸಿಬಲ್ ಮೀರದಂತೆ ಕಾರ್ಯಕ್ರಮ ನಡೆಸಬೇಕು. ಡಿ 31ರ ರಾತ್ರಿ 7 ಗಂಟೆ ನಂತರ ಉತ್ತನಹಳ್ಳಿ ಕ್ರಾಸ್ ಗೇಟ್, ದೈವಿವನ ಗೇಟ್, ಚಾಮುಂಡಿ ಪಾದ ಗೇಟ್, ಲಲಿತ್ ಮಹಲ್ ಗೇಟ್ ಮೂಲಕ ನಿರ್ಬಂಧ ಮಾಡಲಾಗುವುದು. ರಾತ್ರಿ 9 ಗಂಟೆ ನಂತರ ಬೆಟ್ಟಕ್ಕೆ ಬೆಟ್ಟದಿಂದ ಬರುವವರು ತಾವರೆಕಟ್ಟೆ ಗೇಟ್ ಮೂಲಕ ಬರಬೇಕು ಎಂದು ಸೂಚಿಸಿದರು.
ಡಿಸಿಪಿಗಳಾದ ಎಂ. ಮುತ್ತುರಾಜ್ ಹಾಗೂ ಎಸ್. ಜಾನ್ಹವಿ ಜೊತೆಯಲ್ಲಿದ್ದರು.
ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು…
ಕೊಡಗು: ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…