ಮೈಸೂರು: ಹೊಸ ವರ್ಷ ಸಂಭ್ರಮಾಚರಣೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಡೆಯುವ ನಿಟ್ಟಿನಲ್ಲಿ 36 ವಿಶೇಷ ಕಾರ್ಯಪಡೆಗಳನ್ನು ರಚಿಸಲಾಗಿದ್ದು, ಮಹಿಳೆಯರ ಸುರಕ್ಷತೆಗಾಗಿ 8 ಸುರಕ್ಷತಾ ಪಿಂಕ್ ಗರುಡಾ (ಚಾಮುಂಡಿ ಪಡೆ) ಪಡೆಗಳನ್ನು ರಚಿಸಲಾಗಿದೆ ಎಂದ ನಗರ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಹೇಳಿದ್ದಾರೆ.
ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ವರ್ಷ ಸಂಭ್ರಮಾಚರಣೆ ಕಾರ್ಯಕ್ರಮಗಳನ್ನು ಮಧ್ಯರಾತ್ರಿ 1 ಗಂಟೆ ಒಳಗಾಗಿ ಮುಕ್ತಾಯಗೊಳಿಸಬೇಕು. ಸಾರ್ವಜನಿಕರಿಗೆ ಬಲವಂತವಾಗಿ ಶುಭ ಕೋರಿ ಕಿರಿಕಿರಿ ನೀಡಬಾರದು, ಅಶ್ಲೀಲ, ಅರಬೆತ್ತಲೆ ವರ್ತನೆ, ಮಾದಕ ವಸ್ತು ಸೇವನೆ, ಜೂಜಾಟಗಳನ್ನು ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ತಪಾಸಣೆಗಾಗಿ ಶ್ವಾನ ದಳ, ವಿಧ್ವಂಸಕ ಕೃತ್ಯ ತಡೆಯಲು ನಾಲ್ಕು ತಂಡಗಳನ್ನು ರಚಿಸಲಾಗಿದೆ. ಡ್ರ್ಯಾಗ್ ರೇಸ್, ವ್ಹೀಲಿಂಗ್ಮ ಕರ್ಕಶ ಶಬ್ದ ತಡೆಯಲು ಕ್ಷಿಪ್ರ ಕಾರ್ಯಾಚರಣೆ ತಂಡ ರಚಿಸಿದ್ದೇವೆ. ಮಾದಕ ವಸ್ತು ಸಾಗಾಟ ಪತ್ತೆಹಚ್ಚಲು ಸಿಸಿಬಿ ತಂಡ ಕಾರ್ಯಪ್ರವೃತರಾಗಿದ್ದಾರೆ ಎಂದರು.
ರೆಸ್ಟೋರೆಂಟ್, ಮದ್ಯಪಾನ ಸರಬರಾಜು ಮಾಡುವ ಹೋಟೆಲ್ಗಳು ಅಬಕಾರಿ ಇಲಾಖೆ ಜೊತೆ ಪೊಲೀಸ್ ಇಲಾಖೆಯಿಂದಲೂ ಅನುಮತಿ ಪಡೆಯಬೇಕು. ಧ್ವನಿ ವರ್ಧಕ ಅಳವಡಿಸುವವರು ನಿರ್ದಿಷ್ಟ ಡೆಸಿಬಲ್ ಮೀರದಂತೆ ಕಾರ್ಯಕ್ರಮ ನಡೆಸಬೇಕು. ಡಿ 31ರ ರಾತ್ರಿ 7 ಗಂಟೆ ನಂತರ ಉತ್ತನಹಳ್ಳಿ ಕ್ರಾಸ್ ಗೇಟ್, ದೈವಿವನ ಗೇಟ್, ಚಾಮುಂಡಿ ಪಾದ ಗೇಟ್, ಲಲಿತ್ ಮಹಲ್ ಗೇಟ್ ಮೂಲಕ ನಿರ್ಬಂಧ ಮಾಡಲಾಗುವುದು. ರಾತ್ರಿ 9 ಗಂಟೆ ನಂತರ ಬೆಟ್ಟಕ್ಕೆ ಬೆಟ್ಟದಿಂದ ಬರುವವರು ತಾವರೆಕಟ್ಟೆ ಗೇಟ್ ಮೂಲಕ ಬರಬೇಕು ಎಂದು ಸೂಚಿಸಿದರು.
ಡಿಸಿಪಿಗಳಾದ ಎಂ. ಮುತ್ತುರಾಜ್ ಹಾಗೂ ಎಸ್. ಜಾನ್ಹವಿ ಜೊತೆಯಲ್ಲಿದ್ದರು.
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ…
ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…