ಮೈಸೂರು: ಹೊಸ ವರ್ಷ ಸಂಭ್ರಮಾಚರಣೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಡೆಯುವ ನಿಟ್ಟಿನಲ್ಲಿ 36 ವಿಶೇಷ ಕಾರ್ಯಪಡೆಗಳನ್ನು ರಚಿಸಲಾಗಿದ್ದು, ಮಹಿಳೆಯರ ಸುರಕ್ಷತೆಗಾಗಿ 8 ಸುರಕ್ಷತಾ ಪಿಂಕ್ ಗರುಡಾ (ಚಾಮುಂಡಿ ಪಡೆ) ಪಡೆಗಳನ್ನು ರಚಿಸಲಾಗಿದೆ ಎಂದ ನಗರ ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಹೇಳಿದ್ದಾರೆ.
ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ವರ್ಷ ಸಂಭ್ರಮಾಚರಣೆ ಕಾರ್ಯಕ್ರಮಗಳನ್ನು ಮಧ್ಯರಾತ್ರಿ 1 ಗಂಟೆ ಒಳಗಾಗಿ ಮುಕ್ತಾಯಗೊಳಿಸಬೇಕು. ಸಾರ್ವಜನಿಕರಿಗೆ ಬಲವಂತವಾಗಿ ಶುಭ ಕೋರಿ ಕಿರಿಕಿರಿ ನೀಡಬಾರದು, ಅಶ್ಲೀಲ, ಅರಬೆತ್ತಲೆ ವರ್ತನೆ, ಮಾದಕ ವಸ್ತು ಸೇವನೆ, ಜೂಜಾಟಗಳನ್ನು ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ತಪಾಸಣೆಗಾಗಿ ಶ್ವಾನ ದಳ, ವಿಧ್ವಂಸಕ ಕೃತ್ಯ ತಡೆಯಲು ನಾಲ್ಕು ತಂಡಗಳನ್ನು ರಚಿಸಲಾಗಿದೆ. ಡ್ರ್ಯಾಗ್ ರೇಸ್, ವ್ಹೀಲಿಂಗ್ಮ ಕರ್ಕಶ ಶಬ್ದ ತಡೆಯಲು ಕ್ಷಿಪ್ರ ಕಾರ್ಯಾಚರಣೆ ತಂಡ ರಚಿಸಿದ್ದೇವೆ. ಮಾದಕ ವಸ್ತು ಸಾಗಾಟ ಪತ್ತೆಹಚ್ಚಲು ಸಿಸಿಬಿ ತಂಡ ಕಾರ್ಯಪ್ರವೃತರಾಗಿದ್ದಾರೆ ಎಂದರು.
ರೆಸ್ಟೋರೆಂಟ್, ಮದ್ಯಪಾನ ಸರಬರಾಜು ಮಾಡುವ ಹೋಟೆಲ್ಗಳು ಅಬಕಾರಿ ಇಲಾಖೆ ಜೊತೆ ಪೊಲೀಸ್ ಇಲಾಖೆಯಿಂದಲೂ ಅನುಮತಿ ಪಡೆಯಬೇಕು. ಧ್ವನಿ ವರ್ಧಕ ಅಳವಡಿಸುವವರು ನಿರ್ದಿಷ್ಟ ಡೆಸಿಬಲ್ ಮೀರದಂತೆ ಕಾರ್ಯಕ್ರಮ ನಡೆಸಬೇಕು. ಡಿ 31ರ ರಾತ್ರಿ 7 ಗಂಟೆ ನಂತರ ಉತ್ತನಹಳ್ಳಿ ಕ್ರಾಸ್ ಗೇಟ್, ದೈವಿವನ ಗೇಟ್, ಚಾಮುಂಡಿ ಪಾದ ಗೇಟ್, ಲಲಿತ್ ಮಹಲ್ ಗೇಟ್ ಮೂಲಕ ನಿರ್ಬಂಧ ಮಾಡಲಾಗುವುದು. ರಾತ್ರಿ 9 ಗಂಟೆ ನಂತರ ಬೆಟ್ಟಕ್ಕೆ ಬೆಟ್ಟದಿಂದ ಬರುವವರು ತಾವರೆಕಟ್ಟೆ ಗೇಟ್ ಮೂಲಕ ಬರಬೇಕು ಎಂದು ಸೂಚಿಸಿದರು.
ಡಿಸಿಪಿಗಳಾದ ಎಂ. ಮುತ್ತುರಾಜ್ ಹಾಗೂ ಎಸ್. ಜಾನ್ಹವಿ ಜೊತೆಯಲ್ಲಿದ್ದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…