ಮೈಸೂರು

ಹೊಸ ವರ್ಷಾಚರಣೆ: ಮೈಸೂರಲ್ಲಿ ಮಹಿಳೆಯರ ಸುರಕ್ಷತೆಗಾಗಿ 8 ಪಿಂಕ್‌ ಪಡೆ

ಮೈಸೂರು: ಹೊಸ ವರ್ಷ ಸಂಭ್ರಮಾಚರಣೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಡೆಯುವ ನಿಟ್ಟಿನಲ್ಲಿ 36 ವಿಶೇಷ ಕಾರ್ಯಪಡೆಗಳನ್ನು ರಚಿಸಲಾಗಿದ್ದು, ಮಹಿಳೆಯರ ಸುರಕ್ಷತೆಗಾಗಿ 8 ಸುರಕ್ಷತಾ ಪಿಂಕ್‌ ಗರುಡಾ (ಚಾಮುಂಡಿ ಪಡೆ) ಪಡೆಗಳನ್ನು ರಚಿಸಲಾಗಿದೆ ಎಂದ ನಗರ ಪೊಲೀಸ್‌ ಕಮಿಷನರ್‌ ರಮೇಶ್‌ ಬಾನೋತ್‌ ಹೇಳಿದ್ದಾರೆ.

ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ವರ್ಷ ಸಂಭ್ರಮಾಚರಣೆ ಕಾರ್ಯಕ್ರಮಗಳನ್ನು ಮಧ್ಯರಾತ್ರಿ 1 ಗಂಟೆ ಒಳಗಾಗಿ ಮುಕ್ತಾಯಗೊಳಿಸಬೇಕು. ಸಾರ್ವಜನಿಕರಿಗೆ ಬಲವಂತವಾಗಿ ಶುಭ ಕೋರಿ ಕಿರಿಕಿರಿ ನೀಡಬಾರದು, ಅಶ್ಲೀಲ, ಅರಬೆತ್ತಲೆ ವರ್ತನೆ, ಮಾದಕ ವಸ್ತು ಸೇವನೆ, ಜೂಜಾಟಗಳನ್ನು ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ತಪಾಸಣೆಗಾಗಿ ಶ್ವಾನ ದಳ, ವಿಧ್ವಂಸಕ ಕೃತ್ಯ ತಡೆಯಲು ನಾಲ್ಕು ತಂಡಗಳನ್ನು ರಚಿಸಲಾಗಿದೆ. ಡ್ರ್ಯಾಗ್‌ ರೇಸ್‌, ವ್ಹೀಲಿಂಗ್‌ಮ ಕರ್ಕಶ ಶಬ್ದ ತಡೆಯಲು ಕ್ಷಿಪ್ರ ಕಾರ್ಯಾಚರಣೆ ತಂಡ ರಚಿಸಿದ್ದೇವೆ. ಮಾದಕ ವಸ್ತು ಸಾಗಾಟ ಪತ್ತೆಹಚ್ಚಲು ಸಿಸಿಬಿ ತಂಡ ಕಾರ್ಯಪ್ರವೃತರಾಗಿದ್ದಾರೆ ಎಂದರು.

ರೆಸ್ಟೋರೆಂಟ್‌, ಮದ್ಯಪಾನ ಸರಬರಾಜು ಮಾಡುವ ಹೋಟೆಲ್‌ಗಳು ಅಬಕಾರಿ ಇಲಾಖೆ ಜೊತೆ ಪೊಲೀಸ್‌ ಇಲಾಖೆಯಿಂದಲೂ ಅನುಮತಿ ಪಡೆಯಬೇಕು. ಧ್ವನಿ ವರ್ಧಕ ಅಳವಡಿಸುವವರು ನಿರ್ದಿಷ್ಟ ಡೆಸಿಬಲ್‌ ಮೀರದಂತೆ ಕಾರ್ಯಕ್ರಮ ನಡೆಸಬೇಕು. ಡಿ 31ರ ರಾತ್ರಿ 7 ಗಂಟೆ ನಂತರ ಉತ್ತನಹಳ್ಳಿ ಕ್ರಾಸ್‌ ಗೇಟ್‌, ದೈವಿವನ ಗೇಟ್‌, ಚಾಮುಂಡಿ ಪಾದ ಗೇಟ್‌, ಲಲಿತ್‌ ಮಹಲ್‌ ಗೇಟ್‌ ಮೂಲಕ ನಿರ್ಬಂಧ ಮಾಡಲಾಗುವುದು. ರಾತ್ರಿ 9 ಗಂಟೆ ನಂತರ ಬೆಟ್ಟಕ್ಕೆ ಬೆಟ್ಟದಿಂದ ಬರುವವರು ತಾವರೆಕಟ್ಟೆ ಗೇಟ್‌ ಮೂಲಕ ಬರಬೇಕು ಎಂದು ಸೂಚಿಸಿದರು.

ಡಿಸಿಪಿಗಳಾದ ಎಂ. ಮುತ್ತುರಾಜ್‌ ಹಾಗೂ ಎಸ್‌. ಜಾನ್ಹವಿ ಜೊತೆಯಲ್ಲಿದ್ದರು.

andolanait

Recent Posts

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

49 mins ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

54 mins ago

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

5 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

5 hours ago

ಓದುಗರ ಪತ್ರ: ಕಾಲಾವಕಾಶ ನೀಡಬೇಕು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…

5 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಜೆಪಿ ಷಡ್ಯಂತ್ರದಿಂದ ಹಲವು ಪಕ್ಷಗಳು ಒಡಕಿನತ್ತ?

ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…

5 hours ago