ಮೈಸೂರು

ನಿಜಶರಣ ಹಡಪದ ಅಪ್ಪಣ್ಣನವರು ನಮ್ಮ ನಾಡಿನ ಆಸ್ತಿ: ಮೈಸೂರು ಜಿಲ್ಲಾಧ್ಯಕ್ಷ ಎನ್.ಆರ್.ನಾಗೇಶ್

ಎಚ್.ಡಿ.ಕೋಟೆ: ನಿಜಶರಣ ಹಡಪದ ಅಪ್ಪಣ್ಣನವರು ನಮ್ಮ ನಾಡಿನ ಆಸ್ತಿ, ಬಸವಾದಿ ಕಾಲದ ಎಲ್ಲ ಶರಣರು ಸಮ ಸಮಾಜವನ್ನು ನಿರ್ಮಿಸುವಲ್ಲಿ ಬಹಳಷ್ಟು ಶ್ರಮಿಸಿದ್ದಾರೆ ಎಂದು ಮೈಸೂರು ಜಿಲ್ಲಾಧ್ಯಕ್ಷ ಎನ್.ಆರ್.ನಾಗೇಶ್ ಹೇಳಿದರು.

ಎಚ್.ಡಿ.ಕೋಟೆ ಪಟ್ಟಣದ ತಾಲ್ಲೂಕು ಮಿನಿವಿಧಾನ ಸೌಧದ ಮುಂಭಾಗ ಶಿವಶರಣ ನಿಜಲಿಂಗಿ ಯೋಗಿ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶರಣರ ತತ್ವಾದರ್ಶ, ಅವರ ವಚನಗಳ ಸಾರವನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು. ಶರಣರು ತೋರಿಸಿದ ಜ್ಞಾನ ಪಥದಲ್ಲಿ ನಡೆದು ಜೀವನ ಸಾರ್ಥಕ ಪಡಿಸಿಕೊಳ್ಳಬೇಕು ಎಂದರು.

ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಬೇಕು, ಶಿವಶರಣರ ವಚನಗಳ ಪುಸ್ತಕಗಳನ್ನು ಓದುವಂತಾಗಬೇಕು. ವಚನ ಸಂಸ್ಕೃತಿಯನ್ನು ಮನೆ-ಮನೆಗಳಿಗೆ ತಲುಪಿಸುವಂತಾಗಬೇಕು. ಅವರ ವಿಚಾರಧಾರೆಗಳು ಸಮರ್ಪಕವಾಗಿ ಅನುಷ್ಠಾನಗೊಂಡಲ್ಲಿ ಮಾತ್ರ ಶರಣರಿಗೆ ಸಂದ ಗೌರವ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸವಿತ ಸಮಾಜದ ತಾಲ್ಲೂಕು ಅಧ್ಯಕ್ಷ ನರಸಿಂಹ, ಕೋಟೆ ಟೌನ್ ಅಧ್ಯಕ್ಷ ರೇವಣ್ಣ ಹ್ಯಾಡ್ ಪೋಸ್ಟ್. ಅಧ್ಯಕ್ಷ ಸುರೇಶ್, ಗೌರವ ಅಧ್ಯಕ್ಷ ಸಿದ್ದರಾಜು, ಕಾರ್ಯದರ್ಶಿ ಬಸವಣ್ಣ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ದೈಹಿಕ ಶಿಕ್ಷಣ ಶಿಕ್ಷಕರ ಕೊರತೆಯ ನಡುವೆ ಮಕ್ಕಳ ಕ್ರೀಡಾಭ್ಯಾಸ

ಎಂ.ಬಿ.ರಂಗಸ್ವಾಮಿ ಮೂಗೂರು: ಗ್ರಾಮದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಬಾಲಕ, ಬಾಲಕಿಯರ ಶಾಲೆಯಲ್ಲಿ ದೈಹಿಕ ಶಿಕ್ಷಣದ ಶಿಕ್ಷಕರ…

2 mins ago

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

7 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

9 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

10 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

12 hours ago