ಮೈಸೂರು

ರಾಜ್ಯದಲ್ಲಿ ಮೈತ್ರಿ ಪರ ಒಲವಿದೆ, ನಿಖಿಲ್‌ ಗೆಲ್ತಾರೆ: ಎಂಎಲ್‌ಸಿ ಮಂಜೇಗೌಡ

ಮೈಸೂರು: ಚನ್ನಪಟ್ಟಣದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೆ ಗೆಲುವು ಖಚಿತ ಎಂದು ವಿಧಾನಪರಿಷತ್ ಸದಸ್ಯ ಮಂಜೇಗೌಡ ಹೇಳಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಭಾರೀ ಮತಗಳ ಅಂತರದಿಂದ ಗೆದ್ದು ಜಯಗಳಿಸಿದ ಬಳಿಕ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಬಳಿಕ ಅವರು ತಾವು ಪ್ರತಿನಿಧಿಸಿ ಗೆಲುವು ಸಾಧಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಭಾರೀ ಪೈಪೋಟಿಗಿಳಿದಿದ್ದಾರೆ.

ಒಂದು ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಚನ್ನಪಟ್ಟಣ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇನ್ನೊಂದೆಡೆ ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್ ಚನ್ನಪಟ್ಟಣ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.

ಇನ್ನು ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿಯನ್ನು ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾಡಬೇಕು ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ.

ಚನ್ನಪಟ್ಟಣ ಉಪಚುನಾವಣೆ ಸಂಬಂಧ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ವಿಧಾನಪರಿಷತ್ ಸದಸ್ಯ ಮಂಜೇಗೌಡ ಅವರು, ಚನ್ನಪಟ್ಟಣ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿಯನ್ನು ಅಭ್ಯರ್ಥಿಯನ್ನಾಗಿ ಮಾಡಬೇಕು. ಆ ಕ್ಷೇತ್ರದ ಜನರೆಲ್ಲಾ ಡಿಕೆಶಿಯನ್ನು ತಿರಸ್ಕರಿಸಿದ್ದಾರೆ. ಈಗ ಜನತೆ ಮೈತ್ರಿ ಪರ ಭಾರೀ ಒಲವು ತೋರಿದ್ದಾರೆ ಎಂದರು.

andolana

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

1 hour ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

1 hour ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

1 hour ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

2 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

2 hours ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

2 hours ago