ಮೈಸೂರು

ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು ಈಗಲೂ ಸುಳ್ಳು ಹೇಳಿದ್ದಾರೆ : ಸಿದ್ದರಾಮಯ್ಯ ಆರೋಪ

ಮೈಸೂರು : ನಮ್ಮ ರಾಜ್ಯದ ವಿಚಾರ ಬಂದಾಗ ಕೇಂದ್ರ‌ ಸಚಿವರಾದ ನಿರ್ಮಲಾ ಸೀತಾರಾಮನ್‌ ಹಾಗೂ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಸುಳ್ಳು ಹೇಳಿದ್ದರು ಈಗಲೂ ಹೇಳಿದ್ದಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಆರೋಪಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಹೆಚ್.ಡಿ.ಕುಮಾರಸ್ವಾಮಿ ಮತ್ತು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ ಅನುದಾನವನ್ನು ನಾವು ಕೂಡಿಸುತ್ತೇವೆ ಎಂದು ಪ್ರಸ್ತಾಪ ಮಾಡಬಹುದಿತ್ತು. ಕೇಂದ್ರ ಸಚಿವರ ಕ್ಷೇತ್ರ ರಾಮನಗರಕ್ಕೂ ಏನಾದರೂ ಹೊಸದು ಯೋಜನೆ ಬಂದಿದೆಯೇ? ಕೈಗಾರಿಕಾ ಕಾರಿಡಾರ್ ಬಂದಿದೆಯೇ? ಮೇಕೆದಾಟು, ಕೈಗಾರಿಕೆ ಹಾಗೂ ಕೇಳಿದ ಅನುದಾನ ಕೊಟ್ಟಿಲ್ಲ. ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು ಈಗಲೂ ಸುಳ್ಳು ಹೇಳಿದ್ದಾರೆ ಎಂದರು.

ರಾಯಚೂರಿಗೆ ಏಮ್ಸ್ ಸ್ಥಾಪಿಸುವಂತೆ ಕೋರಿದ್ದೆವು. ಆದರೆ ಯಾವುದೇ ಪ್ರಸ್ತಾಪವಾಗಿಲ್ಲ. ಮೈಸೂರು ಅಥವಾ ಹಾಸನಕ್ಕೆ ಐ ಐ ಟಿ ಮಂಜೂರು ಮಾಡಲು ಮನವಿ ಮಾಡಿದ್ದೆವು ಅದೂ ಕೂಡ ಆಗಿಲ್ಲ ಹಾಗಾದರೆ ಅನ್ಯಾಯವಾಗಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದರು.

ಕೇಂದ್ರದ ನೀತಿ , ಕಾರ್ಯಕ್ರಮಗಳಿಂದ ಶೇ 31% ದೇಶಕ್ಕೆ ಬರುತ್ತಿರುವ ಎಫ್.ಡಿ.ಐ ಕಡಿಮೆಯಾಗಿದೆ : 15 ನೇ ಹಣಕಾಸು ಯೋಜನೆಯಲ್ಲಿ ಅತಿ ಹೆಚ್ಚು ಅನ್ಯಾಯವಾಗಿರುವ ರಾಜ್ಯ ಕರ್ನಾಟಕ. ರಾಜ್ಯದಿಂದ ರಾಜ್ಯ ಸಭಾ ಸದಸ್ಯರಾಗಿರುವ ಅವರು ಕೈಗಾರಿಕೆಗಳೆಲ್ಲಾ ಬೇರೆ ರಾಜ್ಯಕ್ಕೆ ಹೋಗುತ್ತಿವೆ ಎಂದೂ ಹೇಳಿದ್ದಾರೆ.

ಆದರೆ ನಮ್ಮ ಕೇಂದ್ರ ಸರ್ಕಾರದ ಹಣಕಾಸು ಸಚಿವರ ನೀತಿ , ಕಾರ್ಯಕ್ರಮಗಳಿಂದ ಶೇ 31% ನಮ್ಮ ದೇಶಕ್ಕೆ ಬರುತ್ತಿರುವ ಎಫ್.ಡಿ.ಐ ಕಡಿಮೆಯಾಗಿದೆ. ಕೇಂದ್ರಕ್ಕೆ ತೆರಿಗೆ ನೀಡುವಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಕರ್ನಾಟಕ 2 ನೇ ಸ್ಥಾನದಲ್ಲಿದೆ ಇನ್ನೇನು ಕೊಡುಗೆ ಕೊಡಬೇಕು? ಎಂದು ಪ್ರಶ್ನಿಸಿದರು.

ಅವರೇ 2023-24 ನೇ ಬಜೆಟ್ ನಲ್ಲಿ ಹೇಳಿದಂತೆ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ 5300 ಕೋಟಿಗಳನ್ನು ಕೊಟ್ಟಿಲ್ಲ . ಅವರ ಘೋಷಣೆ ನೋಡಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಬಜೆಟ್ ನಲ್ಲಿ ಪುನರುಚ್ಚರಿಸಿದ್ದರು ಎಂದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

31 mins ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

33 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

35 mins ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

37 mins ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

39 mins ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

42 mins ago