ಮೈಸೂರು

ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು ಈಗಲೂ ಸುಳ್ಳು ಹೇಳಿದ್ದಾರೆ : ಸಿದ್ದರಾಮಯ್ಯ ಆರೋಪ

ಮೈಸೂರು : ನಮ್ಮ ರಾಜ್ಯದ ವಿಚಾರ ಬಂದಾಗ ಕೇಂದ್ರ‌ ಸಚಿವರಾದ ನಿರ್ಮಲಾ ಸೀತಾರಾಮನ್‌ ಹಾಗೂ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಸುಳ್ಳು ಹೇಳಿದ್ದರು ಈಗಲೂ ಹೇಳಿದ್ದಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಆರೋಪಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಹೆಚ್.ಡಿ.ಕುಮಾರಸ್ವಾಮಿ ಮತ್ತು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ ಅನುದಾನವನ್ನು ನಾವು ಕೂಡಿಸುತ್ತೇವೆ ಎಂದು ಪ್ರಸ್ತಾಪ ಮಾಡಬಹುದಿತ್ತು. ಕೇಂದ್ರ ಸಚಿವರ ಕ್ಷೇತ್ರ ರಾಮನಗರಕ್ಕೂ ಏನಾದರೂ ಹೊಸದು ಯೋಜನೆ ಬಂದಿದೆಯೇ? ಕೈಗಾರಿಕಾ ಕಾರಿಡಾರ್ ಬಂದಿದೆಯೇ? ಮೇಕೆದಾಟು, ಕೈಗಾರಿಕೆ ಹಾಗೂ ಕೇಳಿದ ಅನುದಾನ ಕೊಟ್ಟಿಲ್ಲ. ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು ಈಗಲೂ ಸುಳ್ಳು ಹೇಳಿದ್ದಾರೆ ಎಂದರು.

ರಾಯಚೂರಿಗೆ ಏಮ್ಸ್ ಸ್ಥಾಪಿಸುವಂತೆ ಕೋರಿದ್ದೆವು. ಆದರೆ ಯಾವುದೇ ಪ್ರಸ್ತಾಪವಾಗಿಲ್ಲ. ಮೈಸೂರು ಅಥವಾ ಹಾಸನಕ್ಕೆ ಐ ಐ ಟಿ ಮಂಜೂರು ಮಾಡಲು ಮನವಿ ಮಾಡಿದ್ದೆವು ಅದೂ ಕೂಡ ಆಗಿಲ್ಲ ಹಾಗಾದರೆ ಅನ್ಯಾಯವಾಗಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದರು.

ಕೇಂದ್ರದ ನೀತಿ , ಕಾರ್ಯಕ್ರಮಗಳಿಂದ ಶೇ 31% ದೇಶಕ್ಕೆ ಬರುತ್ತಿರುವ ಎಫ್.ಡಿ.ಐ ಕಡಿಮೆಯಾಗಿದೆ : 15 ನೇ ಹಣಕಾಸು ಯೋಜನೆಯಲ್ಲಿ ಅತಿ ಹೆಚ್ಚು ಅನ್ಯಾಯವಾಗಿರುವ ರಾಜ್ಯ ಕರ್ನಾಟಕ. ರಾಜ್ಯದಿಂದ ರಾಜ್ಯ ಸಭಾ ಸದಸ್ಯರಾಗಿರುವ ಅವರು ಕೈಗಾರಿಕೆಗಳೆಲ್ಲಾ ಬೇರೆ ರಾಜ್ಯಕ್ಕೆ ಹೋಗುತ್ತಿವೆ ಎಂದೂ ಹೇಳಿದ್ದಾರೆ.

ಆದರೆ ನಮ್ಮ ಕೇಂದ್ರ ಸರ್ಕಾರದ ಹಣಕಾಸು ಸಚಿವರ ನೀತಿ , ಕಾರ್ಯಕ್ರಮಗಳಿಂದ ಶೇ 31% ನಮ್ಮ ದೇಶಕ್ಕೆ ಬರುತ್ತಿರುವ ಎಫ್.ಡಿ.ಐ ಕಡಿಮೆಯಾಗಿದೆ. ಕೇಂದ್ರಕ್ಕೆ ತೆರಿಗೆ ನೀಡುವಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಕರ್ನಾಟಕ 2 ನೇ ಸ್ಥಾನದಲ್ಲಿದೆ ಇನ್ನೇನು ಕೊಡುಗೆ ಕೊಡಬೇಕು? ಎಂದು ಪ್ರಶ್ನಿಸಿದರು.

ಅವರೇ 2023-24 ನೇ ಬಜೆಟ್ ನಲ್ಲಿ ಹೇಳಿದಂತೆ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ 5300 ಕೋಟಿಗಳನ್ನು ಕೊಟ್ಟಿಲ್ಲ . ಅವರ ಘೋಷಣೆ ನೋಡಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಬಜೆಟ್ ನಲ್ಲಿ ಪುನರುಚ್ಚರಿಸಿದ್ದರು ಎಂದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

9 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

9 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

9 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

9 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

9 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

9 hours ago