Mysore
25
haze

Social Media

ಶನಿವಾರ, 06 ಡಿಸೆಂಬರ್ 2025
Light
Dark

ಫೆ.10 ರಿಂದ 13 ರವರೆಗೆ ಕುಂಭಮೇಳ: ಟಿ.ನರಸೀಪುರಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದ ನಿರ್ಮಲಾನಂದ ಸ್ವಾಮೀಜಿ

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಗುಂಜನರಸೀಪುರ ದೇವಾಲಯದ ಬಳಿ ಇರುವ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಕುಂಭಮೇಳದ ಸ್ಥಳವನ್ನು ಪರಿಶೀಲಿಸಿದ್ದಾರೆ.

ಟಿ.ನರಸೀಪುರದಲ್ಲಿ ಇದೇ ಫೆಬ್ರವರಿ.10 ರಿಂದ 13 ರವರೆಗೆ 13 ವರ್ಷಗಳಿಗೊಮ್ಮೆ ನಡೆಯುವ ಕುಂಭಮೇಳ ಜರುಗಲಿದೆ. ಈ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮಕ್ಕೆ ನಿರ್ಮಲಾನಂದನಾಥ ಸ್ವಾಮೀಜಿಗಳು ಭೇಟಿ ಸ್ಥಳವನ್ನು ಪರಿಶೀಲಿಸಿದ್ದರು. ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಕುಂಭಮೇಳಕ್ಕೆ ಆಗಮಿಸುತ್ತಾರೆ. ಹೀಗಾಗಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ನೀಡಬೇಕು ಎಂದು ಹೇಳಿದರು.

ಇನ್ನೂ ಈ ಕುಂಭಮೇಳ ಯಶಸ್ವಿಯಾಗಬೇಕೆಂದರೆ ಅಧಿಕಾರಿಗಳು ಮತ್ತು ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ. ಹಾಗಾಗಿ ಯಾವುದೇ ರೀತಿಯ ಲೋಪದೋಷಗಳು ಆಗದಂತೆ ಕ್ರಮವಹಿಸಿ, ಮುಜಾಗ್ರತಾ ಕ್ರಮ ಕೈಗೊಳ್ಳಿ ಎಂದರು.

Tags:
error: Content is protected !!