ಮೈಸೂರು

ಫೆ.10 ರಿಂದ 13 ರವರೆಗೆ ಕುಂಭಮೇಳ: ಟಿ.ನರಸೀಪುರಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದ ನಿರ್ಮಲಾನಂದ ಸ್ವಾಮೀಜಿ

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಗುಂಜನರಸೀಪುರ ದೇವಾಲಯದ ಬಳಿ ಇರುವ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಕುಂಭಮೇಳದ ಸ್ಥಳವನ್ನು ಪರಿಶೀಲಿಸಿದ್ದಾರೆ.

ಟಿ.ನರಸೀಪುರದಲ್ಲಿ ಇದೇ ಫೆಬ್ರವರಿ.10 ರಿಂದ 13 ರವರೆಗೆ 13 ವರ್ಷಗಳಿಗೊಮ್ಮೆ ನಡೆಯುವ ಕುಂಭಮೇಳ ಜರುಗಲಿದೆ. ಈ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮಕ್ಕೆ ನಿರ್ಮಲಾನಂದನಾಥ ಸ್ವಾಮೀಜಿಗಳು ಭೇಟಿ ಸ್ಥಳವನ್ನು ಪರಿಶೀಲಿಸಿದ್ದರು. ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಕುಂಭಮೇಳಕ್ಕೆ ಆಗಮಿಸುತ್ತಾರೆ. ಹೀಗಾಗಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ನೀಡಬೇಕು ಎಂದು ಹೇಳಿದರು.

ಇನ್ನೂ ಈ ಕುಂಭಮೇಳ ಯಶಸ್ವಿಯಾಗಬೇಕೆಂದರೆ ಅಧಿಕಾರಿಗಳು ಮತ್ತು ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ. ಹಾಗಾಗಿ ಯಾವುದೇ ರೀತಿಯ ಲೋಪದೋಷಗಳು ಆಗದಂತೆ ಕ್ರಮವಹಿಸಿ, ಮುಜಾಗ್ರತಾ ಕ್ರಮ ಕೈಗೊಳ್ಳಿ ಎಂದರು.

ಅರ್ಚನ ಎಸ್‌ ಎಸ್

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

13 mins ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

3 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

4 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

6 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

11 hours ago