ಮೈಸೂರು: ಅಲ್ಪಸಂಖ್ಯಾತರ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿ ಎಂದು ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್ ಅಹಮ್ಮದ್ ತಿಳಿಸಿದ್ದಾರೆ.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು(ಜನವರಿ.21) ಆಯೋಜಿಸಿದ್ದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಅಲ್ಪಸಂಖ್ಯಾತರ ಅಭಿವೃದ್ಧಿಯ ಸಂಬಂಧ 2024-25 ನೇ ಸಾಲಿನ ಜಿಲ್ಲಾ ಮಟ್ಟದ ತ್ರೈಮಾಸಿಕ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಅಲ್ಲದೇ ಸರ್ಕಾರಿ ಉರ್ದು ಶಾಲೆಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಎಷ್ಟು ಜನ ಶಾಲೆ ಬಿಟ್ಟಿದ್ದಾರೆ ಎಂಬುದನ್ನು ಪತ್ತೆ ಹಚ್ಚಬೇಕು. ಜೊತೆಗೆ ಆ ವಿದ್ಯಾರ್ಥಿಗಳು ಶಾಲೆ ಬಿಡಲು ಕಾರಣಗಳು ಏನೆಂಬುದನ್ನು ಶಿಕ್ಷಣ ಇಲಾಖೆಯ ಅಧಿಕಾರಿಗಳು ಸರ್ವೇ ಮಾಡಬೇಕು ಎಂದರು.
ಈ ವಿದ್ಯಾರ್ಥಿಗಳು ಮತ್ತೆ ಶಾಲೆಗೆ ತರಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜಿಲ್ಲಾ ನಗರಾಭಿವೃದ್ಧಿ ಕೋಸದ ವತಿಯಿಂದ ವಾಜಪೇಯಿ ನಗರ ವಸತಿ ಯೋಜನೆಯಡಿ ವಸತಿ ವ್ಯವಸ್ಥೆ ಕಲ್ಪಿಸಲು ಯೋಜನೆಯಿದ್ದು, ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಸೂಚಿಸಿದರು.
ಇನ್ನೂ ಜಿಲ್ಲಾ ಉದ್ಯೋಗ ಹಾಗೂ ವಿನಿಮಯ ಕೇಂದ್ರದ ವತಿಯಿಂದ ವಿವಿಧ ಕಂಪೆನಿ ಮತ್ತು ಕಾರ್ಖಾನೆಗಳಿಗೆ ಅಗತ್ಯವಿರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದು ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು. ತೋಟಗಾರಿಗೆ ಇಲಾಖೆಯಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಗಳಡಿ ಅಲ್ಪಸಂಖ್ಯಾತರಿಗೆ ಇರುವ ಸೌಲಭ್ಯಗಳನ್ನು ಅರ್ಹರಿಗೆ ನೀಡಬೇಕು. ಅಲ್ಪಸಂಖ್ಯಾತರು ಕೃಷಿ ಮಾಡುತ್ತಿರುವ ಸಂಖ್ಯೆಯ ಮಾಹಿತಿಯನ್ನು ಪಡೆದುಕೊಳ್ಳಿ. ಆ ನಂತರ ಅವರಿಗೆ ಸೌಲಭ್ಯ ನೀಡಬೇಕು ಎಂದು ಸಲಹೆ ನೀಡಿದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…