ಮೈಸೂರು

ಗ್ರಾಹಕರಿಗೆ ಶೇ.15ರಷ್ಟು ರಿಯಾಯಿತಿ ಘೋಷಿಸಿದ ಮೈಮುಲ್‌

ಮೈಸೂರು: ನಂದಿನಿ ಗ್ರಾಹಕರಿಗೆ ಶೇ.15ರಷ್ಟು ರಿಯಾಯಿತಿಯಡಿಯಲ್ಲಿ ಹಲವು ಉತ್ಪನ್ನಗಳನ್ನು ನೀಡಲಾಗುತ್ತಿದ್ದು, ಇದರ ಸದುಪಯೋಗಪಡಿಸಿಕೊಳ್ಳುವಂತೆ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ( ಮೈಮುಲ್) ಅಧ್ಯಕ್ಷ ಆರ್.ಚೆಲುವರಾಜು‌ ಹೇಳಿದರು.

ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ( ಮೈಮುಲ್)ದಿಂದ ಮೊಟ್ಟ ಮೊದಲ ಬಾರಿಗೆ ಆನೆಯ ಮೆರವಣಿಗೆ ಮೂಲಕ ವಿಶ್ವ ಹಾಲು ದಿನವನ್ನು ಆಚರಿಸಿ ಗಮನ ಸೆಳೆದರು. ಬಳಿಕ ನಡೆದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಶ್ವಸಂಸ್ಥೆ 2001ರಲ್ಲಿ ಆಹಾರ ಮತ್ತು ಕೃಷಿ ಸಂಸ್ಥೆಯಿಂದ ವಿಶ್ವ ಮಟ್ಟದಲ್ಲಿ ಹಾಲು ದಿನ ಆಚರಿಸುತ್ತಿದ್ದೇವೆ. ವಿಶ್ವ ಹಾಗೂ ರಾಜ್ಯದ ಮಟ್ಟದಲ್ಲಿ ಹಾಲಿನ ಉತ್ಪನ್ನಗಳು ತನ್ನದೇ ಆದ ರೀತಿಯಲ್ಲಿ ಪ್ರಚಾರ ಪಡೆದುಕೊಂಡಿವೆ. ನಂದಿನಿಯ 68 ಉತ್ಪನ್ನಗಳ ಜತೆಗೆ ಅನೇಕ ಉತ್ಪನ್ನಗಳನ್ನು ಬಿಡುಗಡೆ ಮಾಡಿದ್ದೇವೆ. ಇಡೀ ದೇಶದಲ್ಲಿ ನಂದಿನಿ ಮಾರಾಟ ಮಾಡುತ್ತಿದ್ದೇವೆ. ದೇಶದಲ್ಲಿ ಎಷ್ಟು ಉತ್ಪನ್ನಗಳಿವೆಯೋ ಅದೆಲ್ಲದಕ್ಕಿಂತಲೂ ಕಡಿಮೆ ದರದಲ್ಲಿ ನಂದಿನಿ ಹಾಲಿನ ದರವಿದೆ. ಯಾವುದೇ ಅತಿಯಾದ ಲಾಭದ ಆಸೆ ಇಲ್ಲದೆ, ಗ್ರಾಹಕರು ಹಾಗೂ ರೈತರ ಹಿತದೃಷ್ಠಿಯಿಂದ ಕೆಎಂಎಫ್‌ ನಿಭಾಯಿಸಿಕೊಂಡು ಹೋಗುತ್ತಿದೆ ಎಂದರು.

ಎಲ್ಲರೂ ನಂದಿನಿ ಉತ್ಪನ್ನಗಳ ಬಳಕೆಗೆ ತಿಳಿಸಬೇಕು. ಇದಕ್ಕಾಗಿಯೇ ಇಂದಿನಿಂದ ಗ್ರಾಹಕರಿಗಾಗಿ ಮ್ಯಾಂಗೋಲಸ್ಸಿ, ರಾಗಿ ಅಂಬಲಿ, ಬಯೋಟಿಕ್‌ ಮಜ್ಜಿಗೆ, ಪ್ರೊ ಬಯೋಟಿಕ್‌ ಮೊಸರು, ಬರ್ಫಿ, ಸಮೃದ್ಧಿ ಹಾಲು, ಸಿಹಿ ಲಸ್ಸಿ, ಗೋಧಿ ಲಡ್ಡು ಇಷ್ಟು ಉತ್ಪನ್ನಗಳ ಮೇಲೆ ಶೇ.15ರಷ್ಟು ರಿಯಾಯಿತಿ ನೀಡುತ್ತಿದ್ದೇವೆ. ಸಾರ್ವಜನಿಕರು ಹಾಗೂ ಗ್ರಾಹಕರು ಇದರ ಸದುಪಯೋಪಡಿಸಿಕೊಂಡು ಬೇರೆ ಉತ್ಪನ್ನಗಳ ಮೇಲೆ ವ್ಯಾಮೋಹ ಆಗದೇ ನಂದಿನಿ ಉತ್ಪನ್ನಗಳನ್ನೇ ಹೆಚ್ಚೆಚ್ಚು ಬಳಸಿ ಎಂದು ಕರೆ ನೀಡಿದರು.

ಜಿಲ್ಲಾ ಹಾಲು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್.ಸುರೇಶ್ ನಾಯ್ಕ್ ಪ್ರಸ್ತಾವಿಕವಾಗಿ ಮಾತನಾಡಿ, ಈಗಾಗಲೇ ಮೈಮುಲ್‌ ರೈತ ಹಾಗೂ ಗ್ರಾಹಕ ಸ್ನೇಹಿಯಾಗಿ ಅನೇಕ ರಿಯಾಯಿತಿಗಳನ್ನು ಘೋಷಣೆ ಮಾಡಿದೆ. ಈಗ ನೂತನ ಉತ್ಪನ್ನಗಳನ್ನು ಸಹ ವಿಶ್ವ ಹಾಲು ದಿನದಂದು ಬಿಡುಗಡೆ ಮಾಡಿದ್ದು, ಗ್ರಾಹಕರು ಇದರ ಸದುಪಯೋಗಪಡಿಸಿಕೊಂಡು ರೈತರನ್ನು ಪ್ರೋತ್ಸಾಹಿಸುವ ಕೆಲಸ ಮಾಡಬೇಕೆಂದು ಹೇಳಿದರು.

ಕೆ.ಆರ್.ನಗರ ಪಶುವೈದ್ಯಾಧಿಕಾರಿ ಡಾ.ಮಂಜುನಾಥ್, ಅಪೊಲೋ ಆಸ್ಪತ್ರೆ ಪ್ರಸೂತಿ ತಜ್ಞೆ ಕವಿತಾ, ಕಾವೇರಿ‌ ಮಲ್ಟಿಸೆಷಾಲಿಟಿ ಆಸ್ಪತ್ರೆಯ ಪೌಷ್ಠಿಕ ತಜ್ಞೆ ಶಶಿಕಲಾ ಹಾಲಿನ ಮಹತ್ವ ಕುರಿತು ಮಾತನಾಡಿದರು. ನಿರ್ದೇಶಕರಾದ ಎ.ಟಿ.ಸೋಮಶೇಖರ್, ಕೆ.ಜಿ.ಮಹೇಶ್, ಕೆ.ಉಮಾಶಂಕರ್, ಸಿ.ಓಂ.ಪ್ರಕಾಶ್, ಕೆ.ಈರೇಗೌಡ, ದ್ರಾಕ್ಷಯಿಣಿ ಬಸವರಾಜಪ್ಪ, ಲೀಲಾ ಬಿ.ಕೆ.ನಾಗರಾಜು, ನೀಲಾಂಬಿಕೆ ಮಹೇಶ್ ಕುರಹಟ್ಟಿ, ಶಿವಗಾಮಿ ಷಣ್ಮುಗಂ, ಗುರುಸ್ವಾಮಿ ಬಿ, ಬಿ.ಎ. ಪ್ರಕಾಶ್, ಎ.ಬಿ. ಮಲ್ಲಿಕಾ ರವಿಕುಮಾರ್, ಪಶುಸಂಗೋಪನಾ ಇಲಾಖೆ ನಿರ್ದೇಶಕ ಮತ್ತು ಮೈಮುಲ್‌ ಪದನಿಮಿತ್ತ ನಿರ್ದೇಶಕ ಡಾ.ನಾಗರಾಜು, ಒಕ್ಕೂಟದ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಬಾವಿ ನೀರಿಗಾಗಿ ಅನಸೂಯ ಅವಿಸ್ಮರಣೀಯ ಹೋರಾಟ

ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…

52 mins ago

ಆಂದೋಲನ ಸಂಪಾದಕೀಯ | ರೈಲ್ವೆ ಇಲಾಖೆಗೆ ಕನ್ನಡ, ಕನ್ನಡಿಗರ ಬಗ್ಗೆ ತಾತ್ಸಾರ ಸಲ್ಲದು

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…

1 hour ago

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…

2 hours ago

ಗ್ಯಾಸ್‌ ಸಿಲಿಂಡರ್ ಅಭಾವ : ಗ್ರಾಹಕರ ಕಿಸೆಗೆ ಕತ್ತರಿ

ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ   • ಚಿರಂಜೀವಿ ಸಿ…

2 hours ago

ಶತಮಾನ ಕಳೆದರೂ ಹೊಸತನ ಮೆರೆವ ಶಾಲೆ!

• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…

2 hours ago

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

12 hours ago