ಮೈಸೂರು

ಗ್ರಾಹಕರಿಗೆ ಶೇ.15ರಷ್ಟು ರಿಯಾಯಿತಿ ಘೋಷಿಸಿದ ಮೈಮುಲ್‌

ಮೈಸೂರು: ನಂದಿನಿ ಗ್ರಾಹಕರಿಗೆ ಶೇ.15ರಷ್ಟು ರಿಯಾಯಿತಿಯಡಿಯಲ್ಲಿ ಹಲವು ಉತ್ಪನ್ನಗಳನ್ನು ನೀಡಲಾಗುತ್ತಿದ್ದು, ಇದರ ಸದುಪಯೋಗಪಡಿಸಿಕೊಳ್ಳುವಂತೆ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ( ಮೈಮುಲ್) ಅಧ್ಯಕ್ಷ ಆರ್.ಚೆಲುವರಾಜು‌ ಹೇಳಿದರು.

ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ( ಮೈಮುಲ್)ದಿಂದ ಮೊಟ್ಟ ಮೊದಲ ಬಾರಿಗೆ ಆನೆಯ ಮೆರವಣಿಗೆ ಮೂಲಕ ವಿಶ್ವ ಹಾಲು ದಿನವನ್ನು ಆಚರಿಸಿ ಗಮನ ಸೆಳೆದರು. ಬಳಿಕ ನಡೆದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಶ್ವಸಂಸ್ಥೆ 2001ರಲ್ಲಿ ಆಹಾರ ಮತ್ತು ಕೃಷಿ ಸಂಸ್ಥೆಯಿಂದ ವಿಶ್ವ ಮಟ್ಟದಲ್ಲಿ ಹಾಲು ದಿನ ಆಚರಿಸುತ್ತಿದ್ದೇವೆ. ವಿಶ್ವ ಹಾಗೂ ರಾಜ್ಯದ ಮಟ್ಟದಲ್ಲಿ ಹಾಲಿನ ಉತ್ಪನ್ನಗಳು ತನ್ನದೇ ಆದ ರೀತಿಯಲ್ಲಿ ಪ್ರಚಾರ ಪಡೆದುಕೊಂಡಿವೆ. ನಂದಿನಿಯ 68 ಉತ್ಪನ್ನಗಳ ಜತೆಗೆ ಅನೇಕ ಉತ್ಪನ್ನಗಳನ್ನು ಬಿಡುಗಡೆ ಮಾಡಿದ್ದೇವೆ. ಇಡೀ ದೇಶದಲ್ಲಿ ನಂದಿನಿ ಮಾರಾಟ ಮಾಡುತ್ತಿದ್ದೇವೆ. ದೇಶದಲ್ಲಿ ಎಷ್ಟು ಉತ್ಪನ್ನಗಳಿವೆಯೋ ಅದೆಲ್ಲದಕ್ಕಿಂತಲೂ ಕಡಿಮೆ ದರದಲ್ಲಿ ನಂದಿನಿ ಹಾಲಿನ ದರವಿದೆ. ಯಾವುದೇ ಅತಿಯಾದ ಲಾಭದ ಆಸೆ ಇಲ್ಲದೆ, ಗ್ರಾಹಕರು ಹಾಗೂ ರೈತರ ಹಿತದೃಷ್ಠಿಯಿಂದ ಕೆಎಂಎಫ್‌ ನಿಭಾಯಿಸಿಕೊಂಡು ಹೋಗುತ್ತಿದೆ ಎಂದರು.

ಎಲ್ಲರೂ ನಂದಿನಿ ಉತ್ಪನ್ನಗಳ ಬಳಕೆಗೆ ತಿಳಿಸಬೇಕು. ಇದಕ್ಕಾಗಿಯೇ ಇಂದಿನಿಂದ ಗ್ರಾಹಕರಿಗಾಗಿ ಮ್ಯಾಂಗೋಲಸ್ಸಿ, ರಾಗಿ ಅಂಬಲಿ, ಬಯೋಟಿಕ್‌ ಮಜ್ಜಿಗೆ, ಪ್ರೊ ಬಯೋಟಿಕ್‌ ಮೊಸರು, ಬರ್ಫಿ, ಸಮೃದ್ಧಿ ಹಾಲು, ಸಿಹಿ ಲಸ್ಸಿ, ಗೋಧಿ ಲಡ್ಡು ಇಷ್ಟು ಉತ್ಪನ್ನಗಳ ಮೇಲೆ ಶೇ.15ರಷ್ಟು ರಿಯಾಯಿತಿ ನೀಡುತ್ತಿದ್ದೇವೆ. ಸಾರ್ವಜನಿಕರು ಹಾಗೂ ಗ್ರಾಹಕರು ಇದರ ಸದುಪಯೋಪಡಿಸಿಕೊಂಡು ಬೇರೆ ಉತ್ಪನ್ನಗಳ ಮೇಲೆ ವ್ಯಾಮೋಹ ಆಗದೇ ನಂದಿನಿ ಉತ್ಪನ್ನಗಳನ್ನೇ ಹೆಚ್ಚೆಚ್ಚು ಬಳಸಿ ಎಂದು ಕರೆ ನೀಡಿದರು.

ಜಿಲ್ಲಾ ಹಾಲು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್.ಸುರೇಶ್ ನಾಯ್ಕ್ ಪ್ರಸ್ತಾವಿಕವಾಗಿ ಮಾತನಾಡಿ, ಈಗಾಗಲೇ ಮೈಮುಲ್‌ ರೈತ ಹಾಗೂ ಗ್ರಾಹಕ ಸ್ನೇಹಿಯಾಗಿ ಅನೇಕ ರಿಯಾಯಿತಿಗಳನ್ನು ಘೋಷಣೆ ಮಾಡಿದೆ. ಈಗ ನೂತನ ಉತ್ಪನ್ನಗಳನ್ನು ಸಹ ವಿಶ್ವ ಹಾಲು ದಿನದಂದು ಬಿಡುಗಡೆ ಮಾಡಿದ್ದು, ಗ್ರಾಹಕರು ಇದರ ಸದುಪಯೋಗಪಡಿಸಿಕೊಂಡು ರೈತರನ್ನು ಪ್ರೋತ್ಸಾಹಿಸುವ ಕೆಲಸ ಮಾಡಬೇಕೆಂದು ಹೇಳಿದರು.

ಕೆ.ಆರ್.ನಗರ ಪಶುವೈದ್ಯಾಧಿಕಾರಿ ಡಾ.ಮಂಜುನಾಥ್, ಅಪೊಲೋ ಆಸ್ಪತ್ರೆ ಪ್ರಸೂತಿ ತಜ್ಞೆ ಕವಿತಾ, ಕಾವೇರಿ‌ ಮಲ್ಟಿಸೆಷಾಲಿಟಿ ಆಸ್ಪತ್ರೆಯ ಪೌಷ್ಠಿಕ ತಜ್ಞೆ ಶಶಿಕಲಾ ಹಾಲಿನ ಮಹತ್ವ ಕುರಿತು ಮಾತನಾಡಿದರು. ನಿರ್ದೇಶಕರಾದ ಎ.ಟಿ.ಸೋಮಶೇಖರ್, ಕೆ.ಜಿ.ಮಹೇಶ್, ಕೆ.ಉಮಾಶಂಕರ್, ಸಿ.ಓಂ.ಪ್ರಕಾಶ್, ಕೆ.ಈರೇಗೌಡ, ದ್ರಾಕ್ಷಯಿಣಿ ಬಸವರಾಜಪ್ಪ, ಲೀಲಾ ಬಿ.ಕೆ.ನಾಗರಾಜು, ನೀಲಾಂಬಿಕೆ ಮಹೇಶ್ ಕುರಹಟ್ಟಿ, ಶಿವಗಾಮಿ ಷಣ್ಮುಗಂ, ಗುರುಸ್ವಾಮಿ ಬಿ, ಬಿ.ಎ. ಪ್ರಕಾಶ್, ಎ.ಬಿ. ಮಲ್ಲಿಕಾ ರವಿಕುಮಾರ್, ಪಶುಸಂಗೋಪನಾ ಇಲಾಖೆ ನಿರ್ದೇಶಕ ಮತ್ತು ಮೈಮುಲ್‌ ಪದನಿಮಿತ್ತ ನಿರ್ದೇಶಕ ಡಾ.ನಾಗರಾಜು, ಒಕ್ಕೂಟದ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

6 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

7 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

7 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

8 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

8 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

9 hours ago