ಮೈಸೂರು

ಗ್ರಾಹಕರಿಗೆ ಶೇ.15ರಷ್ಟು ರಿಯಾಯಿತಿ ಘೋಷಿಸಿದ ಮೈಮುಲ್‌

ಮೈಸೂರು: ನಂದಿನಿ ಗ್ರಾಹಕರಿಗೆ ಶೇ.15ರಷ್ಟು ರಿಯಾಯಿತಿಯಡಿಯಲ್ಲಿ ಹಲವು ಉತ್ಪನ್ನಗಳನ್ನು ನೀಡಲಾಗುತ್ತಿದ್ದು, ಇದರ ಸದುಪಯೋಗಪಡಿಸಿಕೊಳ್ಳುವಂತೆ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ( ಮೈಮುಲ್) ಅಧ್ಯಕ್ಷ ಆರ್.ಚೆಲುವರಾಜು‌ ಹೇಳಿದರು.

ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ( ಮೈಮುಲ್)ದಿಂದ ಮೊಟ್ಟ ಮೊದಲ ಬಾರಿಗೆ ಆನೆಯ ಮೆರವಣಿಗೆ ಮೂಲಕ ವಿಶ್ವ ಹಾಲು ದಿನವನ್ನು ಆಚರಿಸಿ ಗಮನ ಸೆಳೆದರು. ಬಳಿಕ ನಡೆದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಶ್ವಸಂಸ್ಥೆ 2001ರಲ್ಲಿ ಆಹಾರ ಮತ್ತು ಕೃಷಿ ಸಂಸ್ಥೆಯಿಂದ ವಿಶ್ವ ಮಟ್ಟದಲ್ಲಿ ಹಾಲು ದಿನ ಆಚರಿಸುತ್ತಿದ್ದೇವೆ. ವಿಶ್ವ ಹಾಗೂ ರಾಜ್ಯದ ಮಟ್ಟದಲ್ಲಿ ಹಾಲಿನ ಉತ್ಪನ್ನಗಳು ತನ್ನದೇ ಆದ ರೀತಿಯಲ್ಲಿ ಪ್ರಚಾರ ಪಡೆದುಕೊಂಡಿವೆ. ನಂದಿನಿಯ 68 ಉತ್ಪನ್ನಗಳ ಜತೆಗೆ ಅನೇಕ ಉತ್ಪನ್ನಗಳನ್ನು ಬಿಡುಗಡೆ ಮಾಡಿದ್ದೇವೆ. ಇಡೀ ದೇಶದಲ್ಲಿ ನಂದಿನಿ ಮಾರಾಟ ಮಾಡುತ್ತಿದ್ದೇವೆ. ದೇಶದಲ್ಲಿ ಎಷ್ಟು ಉತ್ಪನ್ನಗಳಿವೆಯೋ ಅದೆಲ್ಲದಕ್ಕಿಂತಲೂ ಕಡಿಮೆ ದರದಲ್ಲಿ ನಂದಿನಿ ಹಾಲಿನ ದರವಿದೆ. ಯಾವುದೇ ಅತಿಯಾದ ಲಾಭದ ಆಸೆ ಇಲ್ಲದೆ, ಗ್ರಾಹಕರು ಹಾಗೂ ರೈತರ ಹಿತದೃಷ್ಠಿಯಿಂದ ಕೆಎಂಎಫ್‌ ನಿಭಾಯಿಸಿಕೊಂಡು ಹೋಗುತ್ತಿದೆ ಎಂದರು.

ಎಲ್ಲರೂ ನಂದಿನಿ ಉತ್ಪನ್ನಗಳ ಬಳಕೆಗೆ ತಿಳಿಸಬೇಕು. ಇದಕ್ಕಾಗಿಯೇ ಇಂದಿನಿಂದ ಗ್ರಾಹಕರಿಗಾಗಿ ಮ್ಯಾಂಗೋಲಸ್ಸಿ, ರಾಗಿ ಅಂಬಲಿ, ಬಯೋಟಿಕ್‌ ಮಜ್ಜಿಗೆ, ಪ್ರೊ ಬಯೋಟಿಕ್‌ ಮೊಸರು, ಬರ್ಫಿ, ಸಮೃದ್ಧಿ ಹಾಲು, ಸಿಹಿ ಲಸ್ಸಿ, ಗೋಧಿ ಲಡ್ಡು ಇಷ್ಟು ಉತ್ಪನ್ನಗಳ ಮೇಲೆ ಶೇ.15ರಷ್ಟು ರಿಯಾಯಿತಿ ನೀಡುತ್ತಿದ್ದೇವೆ. ಸಾರ್ವಜನಿಕರು ಹಾಗೂ ಗ್ರಾಹಕರು ಇದರ ಸದುಪಯೋಪಡಿಸಿಕೊಂಡು ಬೇರೆ ಉತ್ಪನ್ನಗಳ ಮೇಲೆ ವ್ಯಾಮೋಹ ಆಗದೇ ನಂದಿನಿ ಉತ್ಪನ್ನಗಳನ್ನೇ ಹೆಚ್ಚೆಚ್ಚು ಬಳಸಿ ಎಂದು ಕರೆ ನೀಡಿದರು.

ಜಿಲ್ಲಾ ಹಾಲು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್.ಸುರೇಶ್ ನಾಯ್ಕ್ ಪ್ರಸ್ತಾವಿಕವಾಗಿ ಮಾತನಾಡಿ, ಈಗಾಗಲೇ ಮೈಮುಲ್‌ ರೈತ ಹಾಗೂ ಗ್ರಾಹಕ ಸ್ನೇಹಿಯಾಗಿ ಅನೇಕ ರಿಯಾಯಿತಿಗಳನ್ನು ಘೋಷಣೆ ಮಾಡಿದೆ. ಈಗ ನೂತನ ಉತ್ಪನ್ನಗಳನ್ನು ಸಹ ವಿಶ್ವ ಹಾಲು ದಿನದಂದು ಬಿಡುಗಡೆ ಮಾಡಿದ್ದು, ಗ್ರಾಹಕರು ಇದರ ಸದುಪಯೋಗಪಡಿಸಿಕೊಂಡು ರೈತರನ್ನು ಪ್ರೋತ್ಸಾಹಿಸುವ ಕೆಲಸ ಮಾಡಬೇಕೆಂದು ಹೇಳಿದರು.

ಕೆ.ಆರ್.ನಗರ ಪಶುವೈದ್ಯಾಧಿಕಾರಿ ಡಾ.ಮಂಜುನಾಥ್, ಅಪೊಲೋ ಆಸ್ಪತ್ರೆ ಪ್ರಸೂತಿ ತಜ್ಞೆ ಕವಿತಾ, ಕಾವೇರಿ‌ ಮಲ್ಟಿಸೆಷಾಲಿಟಿ ಆಸ್ಪತ್ರೆಯ ಪೌಷ್ಠಿಕ ತಜ್ಞೆ ಶಶಿಕಲಾ ಹಾಲಿನ ಮಹತ್ವ ಕುರಿತು ಮಾತನಾಡಿದರು. ನಿರ್ದೇಶಕರಾದ ಎ.ಟಿ.ಸೋಮಶೇಖರ್, ಕೆ.ಜಿ.ಮಹೇಶ್, ಕೆ.ಉಮಾಶಂಕರ್, ಸಿ.ಓಂ.ಪ್ರಕಾಶ್, ಕೆ.ಈರೇಗೌಡ, ದ್ರಾಕ್ಷಯಿಣಿ ಬಸವರಾಜಪ್ಪ, ಲೀಲಾ ಬಿ.ಕೆ.ನಾಗರಾಜು, ನೀಲಾಂಬಿಕೆ ಮಹೇಶ್ ಕುರಹಟ್ಟಿ, ಶಿವಗಾಮಿ ಷಣ್ಮುಗಂ, ಗುರುಸ್ವಾಮಿ ಬಿ, ಬಿ.ಎ. ಪ್ರಕಾಶ್, ಎ.ಬಿ. ಮಲ್ಲಿಕಾ ರವಿಕುಮಾರ್, ಪಶುಸಂಗೋಪನಾ ಇಲಾಖೆ ನಿರ್ದೇಶಕ ಮತ್ತು ಮೈಮುಲ್‌ ಪದನಿಮಿತ್ತ ನಿರ್ದೇಶಕ ಡಾ.ನಾಗರಾಜು, ಒಕ್ಕೂಟದ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

3 mins ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

22 mins ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

28 mins ago

ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಮೋದಿ ಸಭೆ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ…

1 hour ago

ಶೌರ್ಯ ಪ್ರಶಸ್ತಿ ಪಡೆದವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ: ಏನದು ಗೊತ್ತಾ.?

ನವದೆಹಲಿ: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು…

1 hour ago

ರಷ್ಯಾದ 10 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಹೊತ್ತೊಯ್ಯುತ್ತಿದ್ದ ಟರ್ಕಿ ಚಾಲಿತ ಟ್ಯಾಂಕರ್‌ ಮೇಲೆ ದಾಳಿ

ಅಂಕಾರ: ಇಸ್ತಾನ್‌ಬುಲ್‌ ಬಳಿಯ ಕಪ್ಪು ಸಮುದ್ರದಲ್ಲಿ ಟರ್ಕಿ ನಿರ್ವಹಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್‌ ಹಡಗಿನ ಮೇಲೆ ದಾಳಿ ನಡೆದಿದೆ. ಕಪ್ಪು…

2 hours ago