ಮೈಸೂರು

ಗ್ರಾಹಕರಿಗೆ ಶೇ.15ರಷ್ಟು ರಿಯಾಯಿತಿ ಘೋಷಿಸಿದ ಮೈಮುಲ್‌

ಮೈಸೂರು: ನಂದಿನಿ ಗ್ರಾಹಕರಿಗೆ ಶೇ.15ರಷ್ಟು ರಿಯಾಯಿತಿಯಡಿಯಲ್ಲಿ ಹಲವು ಉತ್ಪನ್ನಗಳನ್ನು ನೀಡಲಾಗುತ್ತಿದ್ದು, ಇದರ ಸದುಪಯೋಗಪಡಿಸಿಕೊಳ್ಳುವಂತೆ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ( ಮೈಮುಲ್) ಅಧ್ಯಕ್ಷ ಆರ್.ಚೆಲುವರಾಜು‌ ಹೇಳಿದರು.

ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ( ಮೈಮುಲ್)ದಿಂದ ಮೊಟ್ಟ ಮೊದಲ ಬಾರಿಗೆ ಆನೆಯ ಮೆರವಣಿಗೆ ಮೂಲಕ ವಿಶ್ವ ಹಾಲು ದಿನವನ್ನು ಆಚರಿಸಿ ಗಮನ ಸೆಳೆದರು. ಬಳಿಕ ನಡೆದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಶ್ವಸಂಸ್ಥೆ 2001ರಲ್ಲಿ ಆಹಾರ ಮತ್ತು ಕೃಷಿ ಸಂಸ್ಥೆಯಿಂದ ವಿಶ್ವ ಮಟ್ಟದಲ್ಲಿ ಹಾಲು ದಿನ ಆಚರಿಸುತ್ತಿದ್ದೇವೆ. ವಿಶ್ವ ಹಾಗೂ ರಾಜ್ಯದ ಮಟ್ಟದಲ್ಲಿ ಹಾಲಿನ ಉತ್ಪನ್ನಗಳು ತನ್ನದೇ ಆದ ರೀತಿಯಲ್ಲಿ ಪ್ರಚಾರ ಪಡೆದುಕೊಂಡಿವೆ. ನಂದಿನಿಯ 68 ಉತ್ಪನ್ನಗಳ ಜತೆಗೆ ಅನೇಕ ಉತ್ಪನ್ನಗಳನ್ನು ಬಿಡುಗಡೆ ಮಾಡಿದ್ದೇವೆ. ಇಡೀ ದೇಶದಲ್ಲಿ ನಂದಿನಿ ಮಾರಾಟ ಮಾಡುತ್ತಿದ್ದೇವೆ. ದೇಶದಲ್ಲಿ ಎಷ್ಟು ಉತ್ಪನ್ನಗಳಿವೆಯೋ ಅದೆಲ್ಲದಕ್ಕಿಂತಲೂ ಕಡಿಮೆ ದರದಲ್ಲಿ ನಂದಿನಿ ಹಾಲಿನ ದರವಿದೆ. ಯಾವುದೇ ಅತಿಯಾದ ಲಾಭದ ಆಸೆ ಇಲ್ಲದೆ, ಗ್ರಾಹಕರು ಹಾಗೂ ರೈತರ ಹಿತದೃಷ್ಠಿಯಿಂದ ಕೆಎಂಎಫ್‌ ನಿಭಾಯಿಸಿಕೊಂಡು ಹೋಗುತ್ತಿದೆ ಎಂದರು.

ಎಲ್ಲರೂ ನಂದಿನಿ ಉತ್ಪನ್ನಗಳ ಬಳಕೆಗೆ ತಿಳಿಸಬೇಕು. ಇದಕ್ಕಾಗಿಯೇ ಇಂದಿನಿಂದ ಗ್ರಾಹಕರಿಗಾಗಿ ಮ್ಯಾಂಗೋಲಸ್ಸಿ, ರಾಗಿ ಅಂಬಲಿ, ಬಯೋಟಿಕ್‌ ಮಜ್ಜಿಗೆ, ಪ್ರೊ ಬಯೋಟಿಕ್‌ ಮೊಸರು, ಬರ್ಫಿ, ಸಮೃದ್ಧಿ ಹಾಲು, ಸಿಹಿ ಲಸ್ಸಿ, ಗೋಧಿ ಲಡ್ಡು ಇಷ್ಟು ಉತ್ಪನ್ನಗಳ ಮೇಲೆ ಶೇ.15ರಷ್ಟು ರಿಯಾಯಿತಿ ನೀಡುತ್ತಿದ್ದೇವೆ. ಸಾರ್ವಜನಿಕರು ಹಾಗೂ ಗ್ರಾಹಕರು ಇದರ ಸದುಪಯೋಪಡಿಸಿಕೊಂಡು ಬೇರೆ ಉತ್ಪನ್ನಗಳ ಮೇಲೆ ವ್ಯಾಮೋಹ ಆಗದೇ ನಂದಿನಿ ಉತ್ಪನ್ನಗಳನ್ನೇ ಹೆಚ್ಚೆಚ್ಚು ಬಳಸಿ ಎಂದು ಕರೆ ನೀಡಿದರು.

ಜಿಲ್ಲಾ ಹಾಲು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್.ಸುರೇಶ್ ನಾಯ್ಕ್ ಪ್ರಸ್ತಾವಿಕವಾಗಿ ಮಾತನಾಡಿ, ಈಗಾಗಲೇ ಮೈಮುಲ್‌ ರೈತ ಹಾಗೂ ಗ್ರಾಹಕ ಸ್ನೇಹಿಯಾಗಿ ಅನೇಕ ರಿಯಾಯಿತಿಗಳನ್ನು ಘೋಷಣೆ ಮಾಡಿದೆ. ಈಗ ನೂತನ ಉತ್ಪನ್ನಗಳನ್ನು ಸಹ ವಿಶ್ವ ಹಾಲು ದಿನದಂದು ಬಿಡುಗಡೆ ಮಾಡಿದ್ದು, ಗ್ರಾಹಕರು ಇದರ ಸದುಪಯೋಗಪಡಿಸಿಕೊಂಡು ರೈತರನ್ನು ಪ್ರೋತ್ಸಾಹಿಸುವ ಕೆಲಸ ಮಾಡಬೇಕೆಂದು ಹೇಳಿದರು.

ಕೆ.ಆರ್.ನಗರ ಪಶುವೈದ್ಯಾಧಿಕಾರಿ ಡಾ.ಮಂಜುನಾಥ್, ಅಪೊಲೋ ಆಸ್ಪತ್ರೆ ಪ್ರಸೂತಿ ತಜ್ಞೆ ಕವಿತಾ, ಕಾವೇರಿ‌ ಮಲ್ಟಿಸೆಷಾಲಿಟಿ ಆಸ್ಪತ್ರೆಯ ಪೌಷ್ಠಿಕ ತಜ್ಞೆ ಶಶಿಕಲಾ ಹಾಲಿನ ಮಹತ್ವ ಕುರಿತು ಮಾತನಾಡಿದರು. ನಿರ್ದೇಶಕರಾದ ಎ.ಟಿ.ಸೋಮಶೇಖರ್, ಕೆ.ಜಿ.ಮಹೇಶ್, ಕೆ.ಉಮಾಶಂಕರ್, ಸಿ.ಓಂ.ಪ್ರಕಾಶ್, ಕೆ.ಈರೇಗೌಡ, ದ್ರಾಕ್ಷಯಿಣಿ ಬಸವರಾಜಪ್ಪ, ಲೀಲಾ ಬಿ.ಕೆ.ನಾಗರಾಜು, ನೀಲಾಂಬಿಕೆ ಮಹೇಶ್ ಕುರಹಟ್ಟಿ, ಶಿವಗಾಮಿ ಷಣ್ಮುಗಂ, ಗುರುಸ್ವಾಮಿ ಬಿ, ಬಿ.ಎ. ಪ್ರಕಾಶ್, ಎ.ಬಿ. ಮಲ್ಲಿಕಾ ರವಿಕುಮಾರ್, ಪಶುಸಂಗೋಪನಾ ಇಲಾಖೆ ನಿರ್ದೇಶಕ ಮತ್ತು ಮೈಮುಲ್‌ ಪದನಿಮಿತ್ತ ನಿರ್ದೇಶಕ ಡಾ.ನಾಗರಾಜು, ಒಕ್ಕೂಟದ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

1 hour ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

1 hour ago

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

1 hour ago

ಓದುಗರ ಪತ್ರ: ಮರದ ಕೆಳಗಿರುವ ವಿದ್ಯುತ್ ಕೇಬಲ್ ತೆರವುಗೊಳಿಸಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್‌ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…

1 hour ago

ಝೆನ್‌ ಕತೆಗಳು: ಸೀಜೋಳ ನಿಜವಾದ ಆತ್ಮ ಯಾವುದು?

ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ  ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…

1 hour ago

ಎಸ್‌ಐಆರ್: ಶೇ.64.09ರಷ್ಟು ನಮೂನೆಗಳ ವಿತರಣೆ

ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…

2 hours ago