ಮೈಸೂರು

ಪೊಲೀಸ್, ಗೃಹರಕ್ಷಕ, ಅಗ್ನಿಶಾಮಕ ಇಲಾಖೆಗಳೆಲ್ಲಿ ಭಿನ್ನವಿಲ್ಲ, ಒಂದೇ: ನಂದಿನಿ

ಮೈಸೂರು: ಪೊಲೀಸ್, ಗೃಹರಕ್ಷಕ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸದಾಕಾಲ ಸಮಾಜದ ರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುತ್ತಾರೆ. ಈ ಮೂರು ಇಲಾಖೆಗಳೂ ಭಿನ್ನವಲ್ಲ. ಒಂದೆಯಾಗಿವೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಎನ್.ನಂದಿನಿ ತಿಳಿಸಿದರು.

ಜ್ಯೋತಿನಗರದಲ್ಲಿರುವ ಡಿಎಆರ್ ಸಮುದಾಯ ಭವನದಲ್ಲಿ ಶುಕ್ರವಾರ ಜಿಲ್ಲಾ ಗೃಹರಕ್ಷಕ ದಳದಿಂದ ಏರ್ಪಡಿಸಿದ್ದ ೧ನೇ ಬ್ಯಾಚ್‌ನ ಗೃಹರಕ್ಷಕರ ಮೂಲ ತರಬೇತಿ ಶಿಬಿರದ ಸವಾರೋಪ ಹಾಗೂ ೨ನೇ ಬ್ಯಾಚ್‌ನ ಆರಂಭ ಸವಾರಂಭವನ್ನು ಉದ್ಘಾಟಿಸಿ ಅವರು ವಾತನಾಡಿದರು.

ಗೃಹರಕ್ಷಕ ಇಲಾಖೆಯು ಸೇವಾ ಮನೋಭಾವವನ್ನು ಹೊಂದಿದೆ. ಜಿಲ್ಲೆಗೆ ಒಂದು ಸಾವಿರ ಗೃಹರಕ್ಷಕರ ಅಗತ್ಯವಿದೆ. ಗೃಹರಕ್ಷಕ ಇಲಾಖೆ ನಡೆಸುವುದು ಅತ್ಯಂತ ಜವಾಬ್ದಾರಿ ಕೆಲಸ. ಇಲಾಖೆಗೆ ಅಗತ್ಯವಾಗಿ ಬೇಕಾದುದು ತಕ್ಷಣಕ್ಕೇ ಸಿಗುವುದಿಲ್ಲ. ಇಂತಹ ಸಮುಂದಲ್ಲಿ ತಮ್ಮ ಇತಿ ಮಿತಿುಯಲ್ಲಿ ಕಾಂತರಾಜ್ ಅವರು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಾವು, ನೀವೆಲ್ಲರೂ ಖಾಕಿ ತೊಡುತ್ತೇವೆ. ಖಾಕಿ ತೊಟ್ಟ ಮೇಲೆ ನಿಮ್ಮ ಕೆಲಸದಲ್ಲಿ ಶಿಸ್ತು, ಶ್ರದ್ಧೆ ಹಾಗೂ ಬದ್ಧತೆ ಇರಬೇಕು. ಸಮವಸ್ತ್ರ ಇಲ್ಲದಿದ್ದರೆ ನಿಮ್ಮನ್ನು ಯಾರೂ ಗಮನಿಸುವುದಿಲ್ಲ. ಸಮವಸ್ತ್ರ ತೊಟ್ಟಲ್ಲಿ ನೀವು ಎಚ್ಚರಿಕೆಯಿಂದ ಕೆಲಸ ವಾಡಬೇಕು. ಇಲ್ಲವಾದಲ್ಲಿ ಸಾವಾಜಿಕ ಜಾಲತಾಣದಲ್ಲಿ ಬರುವ ಆರೋಪಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ತರಬೇತಿ ಪೂರ್ಣಗೊಳಿಸಿದ ಒಂದನೇ ಬ್ಯಾಚ್‌ನ ೧೪೮ ಮಂದಿಗೆ ಪ್ರವಾಣ ಪತ್ರ ವಿತರಿಸಲಾಯಿತು. ೨ನೇ ಬ್ಯಾಚ್‌ನ ೧೪೨ ಮಂದಿಯನ್ನು ತರಬೇತಿಗೆ ಸ್ವಾಗತಿಸಲಾಯಿತು.

ಜಿಲ್ಲಾ ಗೃಹರಕ್ಷಕ ದಳದ ಗೌರವ ಸವಾದೇಷ್ಟ ಡಾ.ಎಂ.ಕಾಂತರಾಜು ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಾಹಿತಿ ಪ್ರೊ.ಎನ್.ಆರ್.ಶಿವರಾಂ, ಸಹಾಯಕ ಆಡಳಿತಾಧಿಕಾರಿ ಎಂ.ಎನ್.ವಿಶ್ವನಾಥ್, ಬೋಧಕರಾದ ಎಂ.ಆರ್.ಚಂದನ್, ಎಸ್.ಮಂಜುನಾಥ್ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

5 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

5 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

7 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

7 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

7 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

15 hours ago