ಮೈಸೂರು

ಪೊಲೀಸ್, ಗೃಹರಕ್ಷಕ, ಅಗ್ನಿಶಾಮಕ ಇಲಾಖೆಗಳೆಲ್ಲಿ ಭಿನ್ನವಿಲ್ಲ, ಒಂದೇ: ನಂದಿನಿ

ಮೈಸೂರು: ಪೊಲೀಸ್, ಗೃಹರಕ್ಷಕ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸದಾಕಾಲ ಸಮಾಜದ ರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುತ್ತಾರೆ. ಈ ಮೂರು ಇಲಾಖೆಗಳೂ ಭಿನ್ನವಲ್ಲ. ಒಂದೆಯಾಗಿವೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಎನ್.ನಂದಿನಿ ತಿಳಿಸಿದರು.

ಜ್ಯೋತಿನಗರದಲ್ಲಿರುವ ಡಿಎಆರ್ ಸಮುದಾಯ ಭವನದಲ್ಲಿ ಶುಕ್ರವಾರ ಜಿಲ್ಲಾ ಗೃಹರಕ್ಷಕ ದಳದಿಂದ ಏರ್ಪಡಿಸಿದ್ದ ೧ನೇ ಬ್ಯಾಚ್‌ನ ಗೃಹರಕ್ಷಕರ ಮೂಲ ತರಬೇತಿ ಶಿಬಿರದ ಸವಾರೋಪ ಹಾಗೂ ೨ನೇ ಬ್ಯಾಚ್‌ನ ಆರಂಭ ಸವಾರಂಭವನ್ನು ಉದ್ಘಾಟಿಸಿ ಅವರು ವಾತನಾಡಿದರು.

ಗೃಹರಕ್ಷಕ ಇಲಾಖೆಯು ಸೇವಾ ಮನೋಭಾವವನ್ನು ಹೊಂದಿದೆ. ಜಿಲ್ಲೆಗೆ ಒಂದು ಸಾವಿರ ಗೃಹರಕ್ಷಕರ ಅಗತ್ಯವಿದೆ. ಗೃಹರಕ್ಷಕ ಇಲಾಖೆ ನಡೆಸುವುದು ಅತ್ಯಂತ ಜವಾಬ್ದಾರಿ ಕೆಲಸ. ಇಲಾಖೆಗೆ ಅಗತ್ಯವಾಗಿ ಬೇಕಾದುದು ತಕ್ಷಣಕ್ಕೇ ಸಿಗುವುದಿಲ್ಲ. ಇಂತಹ ಸಮುಂದಲ್ಲಿ ತಮ್ಮ ಇತಿ ಮಿತಿುಯಲ್ಲಿ ಕಾಂತರಾಜ್ ಅವರು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಾವು, ನೀವೆಲ್ಲರೂ ಖಾಕಿ ತೊಡುತ್ತೇವೆ. ಖಾಕಿ ತೊಟ್ಟ ಮೇಲೆ ನಿಮ್ಮ ಕೆಲಸದಲ್ಲಿ ಶಿಸ್ತು, ಶ್ರದ್ಧೆ ಹಾಗೂ ಬದ್ಧತೆ ಇರಬೇಕು. ಸಮವಸ್ತ್ರ ಇಲ್ಲದಿದ್ದರೆ ನಿಮ್ಮನ್ನು ಯಾರೂ ಗಮನಿಸುವುದಿಲ್ಲ. ಸಮವಸ್ತ್ರ ತೊಟ್ಟಲ್ಲಿ ನೀವು ಎಚ್ಚರಿಕೆಯಿಂದ ಕೆಲಸ ವಾಡಬೇಕು. ಇಲ್ಲವಾದಲ್ಲಿ ಸಾವಾಜಿಕ ಜಾಲತಾಣದಲ್ಲಿ ಬರುವ ಆರೋಪಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ತರಬೇತಿ ಪೂರ್ಣಗೊಳಿಸಿದ ಒಂದನೇ ಬ್ಯಾಚ್‌ನ ೧೪೮ ಮಂದಿಗೆ ಪ್ರವಾಣ ಪತ್ರ ವಿತರಿಸಲಾಯಿತು. ೨ನೇ ಬ್ಯಾಚ್‌ನ ೧೪೨ ಮಂದಿಯನ್ನು ತರಬೇತಿಗೆ ಸ್ವಾಗತಿಸಲಾಯಿತು.

ಜಿಲ್ಲಾ ಗೃಹರಕ್ಷಕ ದಳದ ಗೌರವ ಸವಾದೇಷ್ಟ ಡಾ.ಎಂ.ಕಾಂತರಾಜು ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಾಹಿತಿ ಪ್ರೊ.ಎನ್.ಆರ್.ಶಿವರಾಂ, ಸಹಾಯಕ ಆಡಳಿತಾಧಿಕಾರಿ ಎಂ.ಎನ್.ವಿಶ್ವನಾಥ್, ಬೋಧಕರಾದ ಎಂ.ಆರ್.ಚಂದನ್, ಎಸ್.ಮಂಜುನಾಥ್ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

2 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

5 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರೋದ್ಯಮದತ್ತ ಕೇಂದ್ರದ ಗಮನ, ಅಧ್ಯಯನ ತಂಡ ರಚನೆ

ಭಾರತೀಯ ಚಿತ್ರೋದ್ಯಮದ ಉತ್ತೇಜನಕ್ಕಾಗಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿರುವ ಸುದ್ದಿ. ಚಿತ್ರರಂಗಕ್ಕೆ ಸಂಬಂಧಿಸಿದಂತೆ, ಚಿತ್ರಗಳನ್ನು ವರ್ಗೀಕರಿಸಿ, ಪ್ರಮಾಣಪತ್ರ…

5 hours ago

ಕೊಡಗು ಜಿಲ್ಲೆಯಲ್ಲಿ ನಮೂನೆ ವಿತರಣೆ ಕಾರ್ಯ ಪೂರ್ಣ

ನವೀನ್ ಡಿಸೋಜ ತ್ವರಿತಗತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ; ಒಟ್ಟು ೪,೬೮,೬೫೭ ನಮೂನೆ ವಿತರಣೆ ಮೂಲಕ ಶೇ.೧೦೦ ಪ್ರಗತಿ…

5 hours ago

ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ

ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡುವಿನದೊಡ್ಡಿ ಮತ್ತು ಅರ್ಧನಾರೀಪುರ ಗ್ರಾಮಗಳಿಗೆ ಗುರುವಾರ ಗ್ರಾಮ ಪಂಚಾಯಿತಿ ವತಿಯಿಂದ ಟ್ಯಾಂಕರ್…

5 hours ago