ಮೈಸೂರು

ಪಿಎಚ್‌ಡಿ ಮಾರ್ಗದರ್ಶಕರ ಸಂಖ್ಯೆ ಹೆಚ್ಚಳಕ್ಕಿಲ್ಲ ಮೈಸೂರು ವಿ.ವಿಯ ಒಪ್ಪಿಗೆ

ಮೈಸೂರು : ಪಿಎಚ್.ಡಿ ಪದವಿ ಪ್ರವೇಶ ಪಡೆಯುವ ಆಕಾಂಕ್ಷಿಗಳಿಗೆ ಮಾರ್ಗದರ್ಶಕರ ಕೊರತೆಯಾಗಿದ್ದು, ಮಾರ್ಗದರ್ಶಕರಿಗಿರುವ ಸೀಮಿತಿ ಸಂಖ್ಯೆಯನ್ನು ಹೆಚ್ಚಿಸಬೇಕೆಂಬ ಬೇಡಿಕೆಗೆ ಒಪ್ಪಿಗೆ ನೀಡಲು ಮೈಸೂರು ವಿಶ್ವವಿದ್ಯಾನಿಲಯ ಸಮ್ಮತಿಸಿಲ್ಲ.

ಮೈಸೂರು ವಿವಿ ಕ್ರಾಫರ್ಡ್ ಭವನದಲ್ಲಿ ಮಂಗಳವಾರ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಚಂದ್ರಶೇಖರ್ ಶೆಟ್ಟಿ ನೇತೃತ್ವದ ಸಮಿತಿ ವರದಿಯನ್ನು ಸಭೆಗೆ ಮಂಡಿಸಲಾಯಿತಾದರೂ ಯಾವುದೇ ಚರ್ಚೆ ಕೈಗೆತ್ತಿಕೊಳ್ಳಲಿಲ್ಲ. ಇದರಿಂದಾಗಿ ಹಲವು ದಿನಗಳಿಂದ ಮಾರ್ಗದರ್ಶಕರಿಗೆ ಇರುವ ನಿಗದಿತ ಮಂದಿಗೆ ಸೀಮಿತಗೊಳಿಸಿರುವ ಮಿತಿಯನ್ನು ಹೆಚ್ಚಿಸಬೇಕೆಂಬ ಪಿಎಚ್.ಡಿ ಪದವಿ ಆಕಾಂಕ್ಷಿಗಳ ಬೇಡಿಕೆಗೆ ತಣ್ಣೀರೆರಚಿದೆ.

ಪ್ರೊ.ಚಂದ್ರಶೇಖರ್ ಶೇಟ್ಟಿ ಸಮಿತಿಯ ಶಿಫರಸ್ಸಿನ ವಿಚಾರಗಳನ್ನು ಮುಂದಿನ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ಮಾಡಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲು ಒಪ್ಪಿಗೆ ಸೂಚಿಸಲಾಯಿತು. ಮಾನಸಗಂಗೋತ್ರಿಯ ಜೈವಿಕ ತಂತ್ರಜ್ಞಾನ, ಸಂಖ್ಯಾಶಾಸ, ಭೂಗೋಳಶಾಸ, ಇತಿಹಾಸ ಅಧ್ಯಯನ, ಸಾರ್ವಜನಿಕ ಆಡಳಿತ ವಿಭಾಗಗಳ ಅಧ್ಯಕ್ಷರ ನೇಮಕಕ್ಕೆ ಒಪ್ಪಿಗೆ ನೀಡಲಾಯಿತು. ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ಸ್ಥಾಯಿ ಸಮಿತಿ ಶಿಫರಸ್ಸನ್ನು ಒಪ್ಪಿಕೊಂಡ ಸಭೆಯು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಹೆಸರಿನಲ್ಲಿ ದತ್ತಿ ಸ್ಥಾಪನೆ, ಸಿ.ಎಂ.ನಾರಾಯಣಸ್ವಾಮಿ ಮತ್ತು ಬಿ.ಜೆ.ಶಾಂತಕುಮಾರಿ ದತ್ತಿ ಸ್ಥಾಪನೆಗೆ ಒಪ್ಪಿಗೆ ನೀಡಲಾಯಿತು.

ರಾಜ್ಯ ಗ್ರಂಥಾಲಯ ಪ್ರಾಧಿಕಾರಕ್ಕೆ ಮೈಸೂರು ವಿ.ವಿಯಿಂದ ಚಂದ್ರಶೇಖರ್ ಅವರನ್ನು ನಾಮ ನಿರ್ದೇಶನ ಮಾಡಲು ಸಮ್ಮತಿಸಲಾಯಿತು. ಮೈಸೂರು ವಿ.ವಿಯ ಡಾ.ಎಚ್. ರಾಜಶೇಖರ್ ಅವರ ವಿರುದ್ಧ ಕೇಳಿಬಂದಿರುವ ಆರೋಪದ ಬಗ್ಗೆ ಇಲಾಖಾ ವಿಚಾರಣೆ ನಡೆಸಲು ಒಪ್ಪಿಗೆ ನೀಡಲಾಯಿತು. ಗ್ರಂಥಾಲಯ ಮತ್ತು ಮಾಹಿತಿ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ಶಾಲಿನಿ ಆರ್.ಅರಸು ಬೆಂಗಳೂರಿನ ವಿಜಿಎಸ್‌ಟಿ ವತಿಯಿಂದ ಸಂಶೋಧನೆ ನಡೆಸಲು ಪಡೆದಿದ್ದ ಸಂಶೋಧನಾ ಅನುದಾನಕ್ಕೆ ಬಡ್ಡಿ ಸಮೇತ ಹಿಂತಿರುಗಿಸುವುದಕ್ಕೆ ನೋಟಿಸ್ ನೀಡಲು ಸೂಚಿಸಲಾಯಿತು.

ಮಾನಸಗಂಗೋತ್ರಿಯ ಎಂಬಿಎ ವಿಭಾಗದಲ್ಲಿ ಇರುವ 180 ಸೀಟುಗಳಲ್ಲಿ 60 ಸೀಟುಗಳನ್ನು ಸ್ವಯಂ ಹಣಕಾಸು ನಿಧಿಯಡಿ ಪ್ರವೇಶಾತಿಮಾಡಿಕೊಳ್ಳಲು ತೀರ್ಮಾನಿಸಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದಿಂದ ಅನುಮೋದನೆ ದೊರೆತ ಮೇಲೆ 60 ಸೀಟುಗಳನ್ನು ಸ್ವಯಂ ಹಣಕಾಸು ನಿಧಿಯಡಿ ಪ್ರವೇಶ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಲಾಗಿದೆ. 2025-26ನೇ ಸಾಲಿನ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಸ್ನಾತಕೋತ್ತರ ಕೋರ್ಸ್ ತೆರೆಯಲು ಅನುಮೋದನೆ ನೀಡಲಾಯಿತು.

ಸಭೆಯಲ್ಲಿ ಕುಲಸಚಿವರಾದ ಎಂ.ಕೆ.ಸವಿತಾ, ಪರೀಕ್ಷಾಂಗ ಕುಲಸಚಿವ ಪ್ರೊ.ನಾಗರಾಜು, ಸಿಂಡಿಕೇಟ್ ಸದಸ್ಯರಾದ ಕ್ಯಾತನಹಳ್ಳಿ ನಾಗರಾಜು, ಡಾ.ನಟರಾಜು ಶಿವಣ್ಣ, ಗೋಕುಲ್ ಗೋವರ್ಧನ್, ಡಾ.ಶಿಲ್ಪಾ, ಪ್ರೊ.ಮುಸ್ತಫ, ಚಂದ್ರಶೇಖರ್, ಶಂಕರ್ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

7 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

7 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

7 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

8 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

8 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

10 hours ago