ಮೈಸೂರು

ಪಿಎಚ್‌ಡಿ ಮಾರ್ಗದರ್ಶಕರ ಸಂಖ್ಯೆ ಹೆಚ್ಚಳಕ್ಕಿಲ್ಲ ಮೈಸೂರು ವಿ.ವಿಯ ಒಪ್ಪಿಗೆ

ಮೈಸೂರು : ಪಿಎಚ್.ಡಿ ಪದವಿ ಪ್ರವೇಶ ಪಡೆಯುವ ಆಕಾಂಕ್ಷಿಗಳಿಗೆ ಮಾರ್ಗದರ್ಶಕರ ಕೊರತೆಯಾಗಿದ್ದು, ಮಾರ್ಗದರ್ಶಕರಿಗಿರುವ ಸೀಮಿತಿ ಸಂಖ್ಯೆಯನ್ನು ಹೆಚ್ಚಿಸಬೇಕೆಂಬ ಬೇಡಿಕೆಗೆ ಒಪ್ಪಿಗೆ ನೀಡಲು ಮೈಸೂರು ವಿಶ್ವವಿದ್ಯಾನಿಲಯ ಸಮ್ಮತಿಸಿಲ್ಲ.

ಮೈಸೂರು ವಿವಿ ಕ್ರಾಫರ್ಡ್ ಭವನದಲ್ಲಿ ಮಂಗಳವಾರ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಚಂದ್ರಶೇಖರ್ ಶೆಟ್ಟಿ ನೇತೃತ್ವದ ಸಮಿತಿ ವರದಿಯನ್ನು ಸಭೆಗೆ ಮಂಡಿಸಲಾಯಿತಾದರೂ ಯಾವುದೇ ಚರ್ಚೆ ಕೈಗೆತ್ತಿಕೊಳ್ಳಲಿಲ್ಲ. ಇದರಿಂದಾಗಿ ಹಲವು ದಿನಗಳಿಂದ ಮಾರ್ಗದರ್ಶಕರಿಗೆ ಇರುವ ನಿಗದಿತ ಮಂದಿಗೆ ಸೀಮಿತಗೊಳಿಸಿರುವ ಮಿತಿಯನ್ನು ಹೆಚ್ಚಿಸಬೇಕೆಂಬ ಪಿಎಚ್.ಡಿ ಪದವಿ ಆಕಾಂಕ್ಷಿಗಳ ಬೇಡಿಕೆಗೆ ತಣ್ಣೀರೆರಚಿದೆ.

ಪ್ರೊ.ಚಂದ್ರಶೇಖರ್ ಶೇಟ್ಟಿ ಸಮಿತಿಯ ಶಿಫರಸ್ಸಿನ ವಿಚಾರಗಳನ್ನು ಮುಂದಿನ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ಮಾಡಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲು ಒಪ್ಪಿಗೆ ಸೂಚಿಸಲಾಯಿತು. ಮಾನಸಗಂಗೋತ್ರಿಯ ಜೈವಿಕ ತಂತ್ರಜ್ಞಾನ, ಸಂಖ್ಯಾಶಾಸ, ಭೂಗೋಳಶಾಸ, ಇತಿಹಾಸ ಅಧ್ಯಯನ, ಸಾರ್ವಜನಿಕ ಆಡಳಿತ ವಿಭಾಗಗಳ ಅಧ್ಯಕ್ಷರ ನೇಮಕಕ್ಕೆ ಒಪ್ಪಿಗೆ ನೀಡಲಾಯಿತು. ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ಸ್ಥಾಯಿ ಸಮಿತಿ ಶಿಫರಸ್ಸನ್ನು ಒಪ್ಪಿಕೊಂಡ ಸಭೆಯು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಹೆಸರಿನಲ್ಲಿ ದತ್ತಿ ಸ್ಥಾಪನೆ, ಸಿ.ಎಂ.ನಾರಾಯಣಸ್ವಾಮಿ ಮತ್ತು ಬಿ.ಜೆ.ಶಾಂತಕುಮಾರಿ ದತ್ತಿ ಸ್ಥಾಪನೆಗೆ ಒಪ್ಪಿಗೆ ನೀಡಲಾಯಿತು.

ರಾಜ್ಯ ಗ್ರಂಥಾಲಯ ಪ್ರಾಧಿಕಾರಕ್ಕೆ ಮೈಸೂರು ವಿ.ವಿಯಿಂದ ಚಂದ್ರಶೇಖರ್ ಅವರನ್ನು ನಾಮ ನಿರ್ದೇಶನ ಮಾಡಲು ಸಮ್ಮತಿಸಲಾಯಿತು. ಮೈಸೂರು ವಿ.ವಿಯ ಡಾ.ಎಚ್. ರಾಜಶೇಖರ್ ಅವರ ವಿರುದ್ಧ ಕೇಳಿಬಂದಿರುವ ಆರೋಪದ ಬಗ್ಗೆ ಇಲಾಖಾ ವಿಚಾರಣೆ ನಡೆಸಲು ಒಪ್ಪಿಗೆ ನೀಡಲಾಯಿತು. ಗ್ರಂಥಾಲಯ ಮತ್ತು ಮಾಹಿತಿ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ಶಾಲಿನಿ ಆರ್.ಅರಸು ಬೆಂಗಳೂರಿನ ವಿಜಿಎಸ್‌ಟಿ ವತಿಯಿಂದ ಸಂಶೋಧನೆ ನಡೆಸಲು ಪಡೆದಿದ್ದ ಸಂಶೋಧನಾ ಅನುದಾನಕ್ಕೆ ಬಡ್ಡಿ ಸಮೇತ ಹಿಂತಿರುಗಿಸುವುದಕ್ಕೆ ನೋಟಿಸ್ ನೀಡಲು ಸೂಚಿಸಲಾಯಿತು.

ಮಾನಸಗಂಗೋತ್ರಿಯ ಎಂಬಿಎ ವಿಭಾಗದಲ್ಲಿ ಇರುವ 180 ಸೀಟುಗಳಲ್ಲಿ 60 ಸೀಟುಗಳನ್ನು ಸ್ವಯಂ ಹಣಕಾಸು ನಿಧಿಯಡಿ ಪ್ರವೇಶಾತಿಮಾಡಿಕೊಳ್ಳಲು ತೀರ್ಮಾನಿಸಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದಿಂದ ಅನುಮೋದನೆ ದೊರೆತ ಮೇಲೆ 60 ಸೀಟುಗಳನ್ನು ಸ್ವಯಂ ಹಣಕಾಸು ನಿಧಿಯಡಿ ಪ್ರವೇಶ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಲಾಗಿದೆ. 2025-26ನೇ ಸಾಲಿನ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಸ್ನಾತಕೋತ್ತರ ಕೋರ್ಸ್ ತೆರೆಯಲು ಅನುಮೋದನೆ ನೀಡಲಾಯಿತು.

ಸಭೆಯಲ್ಲಿ ಕುಲಸಚಿವರಾದ ಎಂ.ಕೆ.ಸವಿತಾ, ಪರೀಕ್ಷಾಂಗ ಕುಲಸಚಿವ ಪ್ರೊ.ನಾಗರಾಜು, ಸಿಂಡಿಕೇಟ್ ಸದಸ್ಯರಾದ ಕ್ಯಾತನಹಳ್ಳಿ ನಾಗರಾಜು, ಡಾ.ನಟರಾಜು ಶಿವಣ್ಣ, ಗೋಕುಲ್ ಗೋವರ್ಧನ್, ಡಾ.ಶಿಲ್ಪಾ, ಪ್ರೊ.ಮುಸ್ತಫ, ಚಂದ್ರಶೇಖರ್, ಶಂಕರ್ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

3 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

5 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

5 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

9 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

14 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

14 hours ago