Mysore
22
clear sky

Social Media

ಶನಿವಾರ, 14 ಮಾರ್ಚ್ 2026
Light
Dark

ಹೊಸ ಮನೆ ಗೃಹಪ್ರವೇಶಕ್ಕೆ ಯಾರಿಗೂ ಆಹ್ವಾನವಿಲ್ಲ ; ನನ್ನ ಅದೃಷ್ಟದ ಮನೆಯೇ ಬೇರೆ : ಸಿಎಂ ಸಿದ್ದರಾಮಯ್ಯ

ಮೈಸೂರು : ತಮ್ಮ ನೂತನ ಮನೆಯ ಗೃಹ ಪ್ರವೇಶದ ಬಗ್ಗೆ ಮೈಸೂರಿನಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಗೃಹಪ್ರವೇಶ ಕಾರ್ಯಕ್ರಮಕ್ಕೆ ಯಾರಿಗೂ ಆಹ್ವಾನವಿಲ್ಲ. ಇದು ಕೇವಲ ಕೌಟುಂಬಿಕ ಸಮಾರಂಭವಾಗಿರಲಿದೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಹೊಸ ಮನೆ ನಿರ್ಮಿಸಿದರೂ ಈಗ ವಾಸವಿರುವ ಮರಿಸ್ವಾಮಿ ಮನೆಯನ್ನು ಹಾಗೆಯೇ ಉಳಿಸಿಕೊಳ್ಳುವ ಆಸಕ್ತಿ ತೋರಿದ್ದಾರೆ. ನಾನು ಈಗ ಇರುವ ಮನೆ ನನ್ನದಲ್ಲ, ಮರಿಸ್ವಾಮಿ ಅವರದ್ದು. ಮರಿಸ್ವಾಮಿಯೇ ನನಗೆ ಹಾಗೂ ನನ್ನ ಮಗನಿಗೆ ಅನ್ನದಾತ. ಹೊಸ ಮನೆಗೆ ಸ್ಥಳಾಂತರಗೊಂಡ ನಂತರವೂ, ಮರಿಸ್ವಾಮಿ ಅವರು ಈ ಮನೆಯನ್ನು ಖಾಲಿ ಇಟ್ಟರೆ, ಅದನ್ನು ಸಾರ್ವಜನಿಕರ ಭೇಟಿಗಾಗಿ ಬಳಸಿಕೊಳ್ಳುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ:-ದಸರಾ ಬಹುಮಾನ ವಿತರಣೆ ವೇಳೆ ತಳ್ಳಾಟ : DYSP ಗೆ ಗಾಯ ; ಆಸ್ಪತ್ರೆಗೆ ದಾಖಲು

ಡಿಸೆಂಬರ್‌ನಲ್ಲಿ ಸಿಎಂ ಸಿದ್ದರಾಮಯ್ಯ ನೂತನ ಮನೆಯ ಗೃಹಪ್ರವೇಶ ನಡೆಯುವ ಸಾಧ್ಯತೆ ಇದೆ. ಮೈಸೂರಿಗೆ ಬಂದರೆ ತಾವು ಮರಿಸ್ವಾಮಿ ಎಂಬುವವರ ಮನೆಯಲ್ಲಿ ಉಳಿದುಕೊಳ್ಳುತ್ತಿದ್ದೆ. ಇದು ನನ್ನ ಅದೃಷ್ಟದ ಮನೆ. ಎರಡು ಬಾರಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸುವ ಅದೃಷ್ಟ ಒದಗಿ ಬಂದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Tags:
error: Content is protected !!