ಮೈಸೂರು

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು ತಪ್ಪಿಸುವ ಕೆಲಸ ಮಾಡಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.

ಮೈಸೂರು ಯುನಿಟಿ ಮಾಲ್ ನಿರ್ಮಾಣಕ್ಕೆ ಹೈಕೋರ್ಟ್ ತಡೆ ಕುರಿತು ಮಾತನಾಡಿದ ಅವರು, ಯುನಿಟಿ ಮಾಲ್ ಸ್ಥಳ ನಾನು ಉದ್ಘಾಟಿಸಿರಲಿಲ್ಲ. ಆ ಸ್ಥಳಕ್ಕೆ ನಾನು ಗುದ್ದಲಿ ಪೂಜೆಯನ್ನೂ ಮಾಡಿರಲಿಲ್ಲ. ನಾನು ಆ ಸ್ಥಳದ ಕಾಮಗಾರಿ ಪರಿಶೀಲನೆ ಮಾಡಿದ್ದಷ್ಟೆ. ಕೇಂದ್ರ ಸರ್ಕಾರದ ಯೋಜನೆಗೆ ರಾಜ್ಯಸರ್ಕಾರ ಯಾವುದೇ ಗೊಂದಲವಿಲ್ಲದ ಸ್ಥಳ ನೀಡಬೇಕು. ಆದರೆ, ಸರ್ಕಾರ ದಿಕ್ಕು ತಪ್ಪಿಸುವ ಕೆಲಸ ಮಾಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಮೋದಾದೇವಿ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಈ ವಿಚಾರ ಸದ್ಯ ನ್ಯಾಯಾಲಯದಲ್ಲಿದೆ. ಈ ಹಂತದಲ್ಲಿ ಇದರ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದರು.

ಸರ್ಕಾರ ಹಣದ ಪರಿಹಾರ ನೀಡಿ ಬಿಕ್ಕಟ್ಟು ನಿವಾರಿಸಿದರೆ ಒಪ್ಪಿಗೆ ಇದೆಯಾ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಂಸದ ಯದುವೀರ್, ಈ ಕುರಿತು ಜನಪ್ರತಿನಿಧಿಯಾಗಿ ಪ್ರಮೋದಾದೇವಿ ಅವರ ಜತೆ ಮಾತನಾಡಿರುವೆ. ಮುಂದಿನ ಹಂತದಲ್ಲಿ ಇದರ ಬಗ್ಗೆ ಮತ್ತಷ್ಟು ಚರ್ಚಿಸಿ ಕ್ರಮಕೈಗೊಳ್ಳಲಾಗುವುದು. ಮಾಲ್ ನಿರ್ಮಾಣಕ್ಕೆ ಸೂಕ್ತ ಸ್ಥಳ ನೀಡದೆ ಗೊಂದಲ ಮಾಡಿರುವ ರಾಜ್ಯಸರ್ಕಾರವನ್ನ ಪ್ರಶ್ನಿಸುವೆ. ಈ ರೀತಿಯ ಸರ್ಕಾರದ ಯೋಜನೆಗೆ ಖಾಸಗಿ ಜಮೀನು ನೀಡಲೇಬಾರದು. ಆದರೆ, ಈ ರೀತಿ ರಾಜ್ಯ ಸರ್ಕಾರ ಮಾಡಿದ್ದು ಏಕೆ ಎಂಬುದು ಪ್ರಶ್ನೆ. ನಮ್ಮ ಹಾಗೂ ಅಮ್ಮನ ನಡುವೆ ಗೊಂದಲ ಇದೆಯಾ ಎಂಬುದೇ ಅಪ್ರಸ್ತುತ ವಿಚಾರವಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

39 mins ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

46 mins ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

1 hour ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

2 hours ago

ಬೈಲಕುಪ್ಪೆ ಹಿಟ್‌ ಅಂಡ್‌ ರನ್‌ ಕೇಸ್‌ ; ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸ್ಥಳೀಯರು

ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…

2 hours ago

ಬಹುಭಾಷಾ ನಟ ಪ್ರಕಾಶ್‌ ರಾಜ್‌ ತಾಯಿ ಸುವರ್ಣಲತಾ ನಿಧನ

ಹೈದರಬಾದ್‌ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…

3 hours ago