yaduveer
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು ತಪ್ಪಿಸುವ ಕೆಲಸ ಮಾಡಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.
ಮೈಸೂರು ಯುನಿಟಿ ಮಾಲ್ ನಿರ್ಮಾಣಕ್ಕೆ ಹೈಕೋರ್ಟ್ ತಡೆ ಕುರಿತು ಮಾತನಾಡಿದ ಅವರು, ಯುನಿಟಿ ಮಾಲ್ ಸ್ಥಳ ನಾನು ಉದ್ಘಾಟಿಸಿರಲಿಲ್ಲ. ಆ ಸ್ಥಳಕ್ಕೆ ನಾನು ಗುದ್ದಲಿ ಪೂಜೆಯನ್ನೂ ಮಾಡಿರಲಿಲ್ಲ. ನಾನು ಆ ಸ್ಥಳದ ಕಾಮಗಾರಿ ಪರಿಶೀಲನೆ ಮಾಡಿದ್ದಷ್ಟೆ. ಕೇಂದ್ರ ಸರ್ಕಾರದ ಯೋಜನೆಗೆ ರಾಜ್ಯಸರ್ಕಾರ ಯಾವುದೇ ಗೊಂದಲವಿಲ್ಲದ ಸ್ಥಳ ನೀಡಬೇಕು. ಆದರೆ, ಸರ್ಕಾರ ದಿಕ್ಕು ತಪ್ಪಿಸುವ ಕೆಲಸ ಮಾಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಮೋದಾದೇವಿ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಈ ವಿಚಾರ ಸದ್ಯ ನ್ಯಾಯಾಲಯದಲ್ಲಿದೆ. ಈ ಹಂತದಲ್ಲಿ ಇದರ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದರು.
ಸರ್ಕಾರ ಹಣದ ಪರಿಹಾರ ನೀಡಿ ಬಿಕ್ಕಟ್ಟು ನಿವಾರಿಸಿದರೆ ಒಪ್ಪಿಗೆ ಇದೆಯಾ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಂಸದ ಯದುವೀರ್, ಈ ಕುರಿತು ಜನಪ್ರತಿನಿಧಿಯಾಗಿ ಪ್ರಮೋದಾದೇವಿ ಅವರ ಜತೆ ಮಾತನಾಡಿರುವೆ. ಮುಂದಿನ ಹಂತದಲ್ಲಿ ಇದರ ಬಗ್ಗೆ ಮತ್ತಷ್ಟು ಚರ್ಚಿಸಿ ಕ್ರಮಕೈಗೊಳ್ಳಲಾಗುವುದು. ಮಾಲ್ ನಿರ್ಮಾಣಕ್ಕೆ ಸೂಕ್ತ ಸ್ಥಳ ನೀಡದೆ ಗೊಂದಲ ಮಾಡಿರುವ ರಾಜ್ಯಸರ್ಕಾರವನ್ನ ಪ್ರಶ್ನಿಸುವೆ. ಈ ರೀತಿಯ ಸರ್ಕಾರದ ಯೋಜನೆಗೆ ಖಾಸಗಿ ಜಮೀನು ನೀಡಲೇಬಾರದು. ಆದರೆ, ಈ ರೀತಿ ರಾಜ್ಯ ಸರ್ಕಾರ ಮಾಡಿದ್ದು ಏಕೆ ಎಂಬುದು ಪ್ರಶ್ನೆ. ನಮ್ಮ ಹಾಗೂ ಅಮ್ಮನ ನಡುವೆ ಗೊಂದಲ ಇದೆಯಾ ಎಂಬುದೇ ಅಪ್ರಸ್ತುತ ವಿಚಾರವಾಗಿದೆ ಎಂದು ಹೇಳಿದರು.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…