Mysore
21
haze

Social Media

ಮಂಗಳವಾರ, 10 ಫೆಬ್ರವರಿ 2026
Light
Dark

ಅಧಿಕಾರ ಹಂಚಿಕೆ ಪ್ರಸ್ತಾವವೇ ನಡೆದಿಲ್ಲ : ಗೃಹ ಸಚಿವ ಪರಮೇಶ್ವರ್‌

Dharmasthala dead bodies burried case

ಮೈಸೂರು : ಪಕ್ಷದೊಳಗೆ ಮುಖ್ಯಮಂತ್ರಿ ಅಥವಾ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಅಧಿಕಾರ ಹಂಚಿಕೆಯ ಪ್ರಸ್ತಾವವೇ ನಡೆದಿಲ್ಲ. ಹೈಕಮಾಂಡ್ ಸುಮ್ಮನಿದೆ ಎಂದರೆ ಅದರಲ್ಲಿ ಬದಲಾವಣೆಗಳು ಇಲ್ಲ ಎಂದರ್ಥ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಹಂಚಿಕೆಯ ಕುರಿತು ನಮಗೆ ಈತನಕ ಯಾವ ವಿಚಾರವೂ ಗೊತ್ತಿಲ್ಲ. ಪಕ್ಷದ ಒಳಗೆ ಅಂತಹ ಪ್ರಸ್ತಾಪವೇ ನಡೆದಿಲ್ಲ ಎಂಬುದನ್ನು ಗಮನಿಸಬೇಕು ಎಂದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಹೈಕಮಾಂಡ್ ಘೋಷಣೆ ಮಾಡಿತ್ತು. ಆದರೆ ಅವರ ಬದಲಾವಣೆ ಬಗ್ಗೆ ಎಲ್ಲಿಯೂ ಕೂಡ ಮಾತನಾಡಿಲ್ಲ. ವರಿಷ್ಠರು ಅಗತ್ಯ ಇದ್ದಾಗ ಮಾತನಾಡುತ್ತಾರೆ. ಹೈಕಮಾಂಡ್ ಏನಾದರೂ ಹೇಳಿದರೆ ಅದನ್ನು ನಾವು ಪಾಲಿಸುತ್ತೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಕುರ್ಚಿಯ ಬಗ್ಗೆ ಗೊಂದಲ ಇದ್ದಿದ್ದರೆ ಶಾಸಕರು ಸಿಎಲ್‌ಪಿ ಸಭೆಯಲ್ಲಿ ಹೇಳುತ್ತಿದ್ದರು. ಅಲ್ಲಿ ಯಾರು ಕೂಡ ಈ ಬಗ್ಗೆ ಮಾತನಾಡಿಲ್ಲ. ಅಲ್ಲಿಗೆ ಯಾವ ಗೊಂದಲವೂ ಇಲ್ಲ ಎಂದರ್ಥ. ಸಿದ್ದರಾಮಯ್ಯ ಸಿಎಂ ಎನ್ನುವುದನ್ನು ಹೈಕಮಾಂಡ್ ಘೋಷಣೆ ಮಾಡಿದೆ. ಹೈಕಮಾಂಡ್ ಎಲ್ಲಾದರೂ ಸಿದ್ದರಾಮಯ್ಯ ಬೇಡ ಎಂದು ಹೇಳಿದೆಯಾ? ಇಲ್ಲ ತಾನೇ, ಹೈಕಮಾಂಡ್‌ಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಗೊಂದಲ ಅಂತ ಅನ್ನಿಸಿಲ್ಲ ಎಂದು ನುಡಿದರು.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಂದುವರಿಯಬಹುದೆಂದು ಡಾ.ಯತೀಂದ್ರ ಅವರು ಹೇಳಿದ್ದಾರೆ. ಯತೀಂದ್ರ ಅವರಿಗೆ ಅವರದೇ ಮಾಹಿತಿ ಇರಬಹುದು. ಅದನ್ನೇ ಹೇಳಿರುತ್ತಾರೆ ಎಂದು ಸಮರ್ಥಿಸಿಕೊಂಡರು.

ಮುಂದಿನ ಸಿಎಂ ಎಂದು ಕಾರ್ಯಕರ್ತರು ಜೈಕಾರ ಕೂಗಿದ ಕೂಡಲೇ ಸಿಎಂ ಆಗಲು ಸಾಧ್ಯನಾ? ನನಗೂ ಬಹಳಷ್ಟು ಜನರು ಮುಂದಿನ ಸಿಎಂ ಎನ್ನುವ ರೀತಿಯಲ್ಲಿ ಕೂಗುತ್ತಾರೆ. ನಾನು ಹೋದ ಮೇಲೆ ಮತ್ತೊಬ್ಬರನ್ನು ಕೂಗುತ್ತಾರೆ. ಹೀಗಾಗಿ ಘೋಷಣೆಗಳಿಗೆ ಹೆಚ್ಚಿನ ಮಹತ್ವ ಕೊಡಬೇಡಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ನೀಡಿದರು.

Tags:
error: Content is protected !!