ಮೈಸೂರು

ಅಧಿಕಾರ ಹಂಚಿಕೆ ಪ್ರಸ್ತಾವವೇ ನಡೆದಿಲ್ಲ : ಗೃಹ ಸಚಿವ ಪರಮೇಶ್ವರ್‌

ಮೈಸೂರು : ಪಕ್ಷದೊಳಗೆ ಮುಖ್ಯಮಂತ್ರಿ ಅಥವಾ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಅಧಿಕಾರ ಹಂಚಿಕೆಯ ಪ್ರಸ್ತಾವವೇ ನಡೆದಿಲ್ಲ. ಹೈಕಮಾಂಡ್ ಸುಮ್ಮನಿದೆ ಎಂದರೆ ಅದರಲ್ಲಿ ಬದಲಾವಣೆಗಳು ಇಲ್ಲ ಎಂದರ್ಥ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಹಂಚಿಕೆಯ ಕುರಿತು ನಮಗೆ ಈತನಕ ಯಾವ ವಿಚಾರವೂ ಗೊತ್ತಿಲ್ಲ. ಪಕ್ಷದ ಒಳಗೆ ಅಂತಹ ಪ್ರಸ್ತಾಪವೇ ನಡೆದಿಲ್ಲ ಎಂಬುದನ್ನು ಗಮನಿಸಬೇಕು ಎಂದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಹೈಕಮಾಂಡ್ ಘೋಷಣೆ ಮಾಡಿತ್ತು. ಆದರೆ ಅವರ ಬದಲಾವಣೆ ಬಗ್ಗೆ ಎಲ್ಲಿಯೂ ಕೂಡ ಮಾತನಾಡಿಲ್ಲ. ವರಿಷ್ಠರು ಅಗತ್ಯ ಇದ್ದಾಗ ಮಾತನಾಡುತ್ತಾರೆ. ಹೈಕಮಾಂಡ್ ಏನಾದರೂ ಹೇಳಿದರೆ ಅದನ್ನು ನಾವು ಪಾಲಿಸುತ್ತೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಕುರ್ಚಿಯ ಬಗ್ಗೆ ಗೊಂದಲ ಇದ್ದಿದ್ದರೆ ಶಾಸಕರು ಸಿಎಲ್‌ಪಿ ಸಭೆಯಲ್ಲಿ ಹೇಳುತ್ತಿದ್ದರು. ಅಲ್ಲಿ ಯಾರು ಕೂಡ ಈ ಬಗ್ಗೆ ಮಾತನಾಡಿಲ್ಲ. ಅಲ್ಲಿಗೆ ಯಾವ ಗೊಂದಲವೂ ಇಲ್ಲ ಎಂದರ್ಥ. ಸಿದ್ದರಾಮಯ್ಯ ಸಿಎಂ ಎನ್ನುವುದನ್ನು ಹೈಕಮಾಂಡ್ ಘೋಷಣೆ ಮಾಡಿದೆ. ಹೈಕಮಾಂಡ್ ಎಲ್ಲಾದರೂ ಸಿದ್ದರಾಮಯ್ಯ ಬೇಡ ಎಂದು ಹೇಳಿದೆಯಾ? ಇಲ್ಲ ತಾನೇ, ಹೈಕಮಾಂಡ್‌ಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಗೊಂದಲ ಅಂತ ಅನ್ನಿಸಿಲ್ಲ ಎಂದು ನುಡಿದರು.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಂದುವರಿಯಬಹುದೆಂದು ಡಾ.ಯತೀಂದ್ರ ಅವರು ಹೇಳಿದ್ದಾರೆ. ಯತೀಂದ್ರ ಅವರಿಗೆ ಅವರದೇ ಮಾಹಿತಿ ಇರಬಹುದು. ಅದನ್ನೇ ಹೇಳಿರುತ್ತಾರೆ ಎಂದು ಸಮರ್ಥಿಸಿಕೊಂಡರು.

ಮುಂದಿನ ಸಿಎಂ ಎಂದು ಕಾರ್ಯಕರ್ತರು ಜೈಕಾರ ಕೂಗಿದ ಕೂಡಲೇ ಸಿಎಂ ಆಗಲು ಸಾಧ್ಯನಾ? ನನಗೂ ಬಹಳಷ್ಟು ಜನರು ಮುಂದಿನ ಸಿಎಂ ಎನ್ನುವ ರೀತಿಯಲ್ಲಿ ಕೂಗುತ್ತಾರೆ. ನಾನು ಹೋದ ಮೇಲೆ ಮತ್ತೊಬ್ಬರನ್ನು ಕೂಗುತ್ತಾರೆ. ಹೀಗಾಗಿ ಘೋಷಣೆಗಳಿಗೆ ಹೆಚ್ಚಿನ ಮಹತ್ವ ಕೊಡಬೇಡಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

8 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

9 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

9 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

10 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

10 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

11 hours ago