ಮೈಸೂರು

ರಾಜ್ಯ ರಾಜಕಾರಣದಲ್ಲಿ ಯಾವುದೇ ಕ್ರಾಂತಿ ಇಲ್ಲ : ಸಚಿವೆ ಹೆಬ್ಬಾಳಕರ್‌

ಮೈಸೂರು : ರಾಜ್ಯ ರಾಜಕೀಯದಲ್ಲಿ ಸೆಪ್ಟಂಬರ್‌ ಬಳಿಕ ಯಾವುದೇ ಕ್ರಾಂತಿ ಇರುವುದಿಲ್ಲ. ಎಲ್ಲವೂ ಶಾಂತವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಕುಟುಂಬ ಸಮೇತ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಐದು ವರ್ಷಗಳ ಕಾಲ ನಾನೇ ಸಿಎಂ ಎಂದು ಹೇಳಿದ ಮೇಲೆ ಬೇರೆ ರೀತಿಯ ಚರ್ಚೆಗೆ ಅವಕಾಶವೇ ಇಲ್ಲ. ಈ ಬಗ್ಗೆ ಪದೇ ಪದೆ ಮಾತನಾಡುವುದು ಸರಿ ಇಲ್ಲ ಎಂದರು.

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಮಾತನಾಡಿದ್ದು, ಈ ಬಗ್ಗೆ ಮಾತನಾಡುವಷ್ಟು ದೊಡ್ಡವರು ನಾವಲ್ಲ. ನಮ್ಮದು ರಾಷ್ಟ್ರೀಯ ಪಕ್ಷ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.

ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮೀ ಯೋಜನೆಯ ಹಣ ಕೊಡಲಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ನಾವು ಪ್ರತಿ ತಿಂಗಳು ಹಣ ಹಾಕುತ್ತಿದ್ದೇವೆ. ಮೇ ತಿಂಗಳವರೆಗೂ ಹಣ ಹಾಕಲಾಗಿದೆ. ಜೂನ್ ತಿಂಗಳ ಹಣದ ಪ್ರಕ್ರಿಯೆ ನಡೆಯುತ್ತಿದೆ. ನಮಗೆ ಹಣ ಹಾಕಲು ಯಾವ ತೊಡಕುಗಳೂ ಇಲ್ಲ. ಎಚ್.ಎಂ ರೇವಣ್ಣ ಯಾಕೆ ಆ ರೀತಿ ಹೇಳಿದ್ದಾರೆ ಗೊತ್ತಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…

3 mins ago

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…

15 mins ago

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

30 mins ago

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

50 mins ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

2 hours ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

2 hours ago