ಮೈಸೂರು

MYSURU | ಆಷಾಢ ಮಾಸದ ಈ ದಿನಗಳಂದು ಚಾಮುಂಡಿ ಬೆಟ್ಟಕ್ಕೆ ವಾಹನ ನಿಷೇಧ

ಮೈಸೂರು : ಆಷಾಡ ಮಾಸದ ಶುಕ್ರವಾರಗಳ ಆಚರಣೆಗೆ ಮೈಸೂರು ಜಿಲ್ಲಾಡಳಿತ ಈಗಾಗಲೇ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದೆ. ಪ್ರತಿವರ್ಷದಂತೆ ಈ ವರ್ಷವೂ ಆಷಾಢ ಮಾಸದ ವೇಳೆ ಅಸಂಖ್ಯಾತ ಸಾರ್ವಜನಿಕರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಈ ಹಿನ್ನೆಲೆ ಜಿಲ್ಲಾಡಳಿತ ಕೆಲ ಸೂಚನೆಗಳನ್ನು ಹೊರಡಿಸಿದೆ.

ಇಂತಿವೆ ಸೂಚನೆ……
ಆಷಾಢ ಶುಕ್ರವಾರ ಹಾಗೂ ವರ್ಧಂತಿ ದಿನಗಳಂದು ಯಾವುದೇ ಖಾಸಗಿ ವಾಹನಗಳಿಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶವಿರುವುದಿಲ್ಲ.

ಸಾರ್ವಜನಿಕರು ವಾಹನಗಳನ್ನು ಲಲಿತಾ ಮಹಲ್‌ ಹೋಟೆಲ್‌ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿ, ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಬಹುದು.

ಜೂನ್‌ 27, ಜುಲೈ 04, 11 ಮತ್ತು 18 ರಂದು ಆಷಾಢ ಶುಕ್ರವಾರಗಳು ಹಾಗೂ ಜುಲೈ 17 ರಂದು ಚಾಮುಂಡೇಶ್ವರಿಯ ವರ್ಧಂತಿ ನಡೆಯಲಿದೆ.

ಆಷಾಢ ಶುಕ್ರವಾರ ಹಾಗೂ ಆಷಾಢ ಮಾಸದ ಶನಿವಾರ, ಭಾನುವಾರಗಳಂದು ಸಾಮಾನ್ಯ ದರ್ಶನ ಉಚಿತ

ಪ್ರವೇಶ ದರ್ಶನಕ್ಕೆ 50 ರೂ. ಹಾಗೂ ವಿಶೇಷ ದರ್ಶನಕ್ಕೆ 300ರೂ. ನಿಗದಿ ಪಡಿಸಲಾಗಿದೆ.

ಇನ್ನೂ ಪೊಲೀಸ್‌ ಇಲಾಖೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದ್ದು, ಟ್ರಾಫಿಕ್‌ ಪೊಲೀಸರು ಸಂಚಾರ ಸುಗಮಕ್ಕೆ ಅಗತ್ಯ ಕ್ರಮಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ : ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೂ ರಜೆ

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…

38 mins ago

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಒಪ್ಪಂದ : ಎಚ್‌ಡಿಕೆ ನೇತೃತ್ವದಲ್ಲಿ ದ್ವಿಪಕ್ಷೀಯ ಚರ್ಚೆ

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…

1 hour ago

ಮುಡಾ ಕೇಸ್‌ನಲ್ಲಿ ಸಿಎಂʼಗೆ ನಿರಾಳ : ʻಸತ್ಯ ಮೇವ ಜಯತೆʻ ಫ್ಲೇ ಕಾರ್ಡ್‌ ಹಿಡಿದು ಕಾಂಗ್ರೆಸ್‌ ಸಂಭ್ರಮ

ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…

2 hours ago

ಕೆ.ಜೆ.ಜಾರ್ಜ್‌ ರಾಜೀನಾಮೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ನೀಡಿದ್ದರು ಎಂಬ…

4 hours ago

ವಿಕಲಚೇತನರಿಗಾಗಿಯೇ ಬೃಹತ್‌ ಉದ್ಯೋಗ ಮೇಳ ಆಯೋಜನೆ: ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…

4 hours ago

ಕೊಡಗಿನಲ್ಲಿ ಮುಂದುವರೆದ ಆನೆ–ಮಾನವ ಸಂಘರ್ಷ: ಕಾಡಾನೆ ದಾಳಿಗೆ ವ್ಯಕ್ತಿ ದಾರುಣ ಸಾವು

ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…

4 hours ago