ಮೈಸೂರು : ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಹಾಗೂ ಇತರ ಸಣ್ಣ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿರುವುದನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸಮರ್ಥಿಸಿಕೊಂಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಕ್ಸ್ಪ್ರೆಸ್ ಹೆದ್ದಾರಿಯ ಅಪಘಾತದಲ್ಲಿ ಮೃತಪಟ್ಟ ಬಹುತೇಕರು ಬೈಕ್ ಸವಾರರು. 150 ಸಿಸಿ ವಾಹನಗಳಲ್ಲಿ ಹೆಚ್ಚು ವೇಗದಲ್ಲಿ ಹೋಗಲು ಸಾಧ್ಯವಿಲ್ಲ. ಆಟೋ ರಿಕ್ಷಾದಂತಹ ವಾಹನಗಳ ವೇಗ ಇನ್ನೂ ಕಡಿಮೆ ಇರುತ್ತದೆ. ಎತ್ತಿನಗಾಡಿ, ಕುದುರೆಗಾಡಿಯಂತಹ ಮೋಟಾರ್ ರಹಿತ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.
ನಿರ್ಬಂಧಕ್ಕೆ ಸಂಬಂಧಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಿಂದೆಯೇ ಅವಕಾಶ ಮಾಡಿಕೊಂಡಿದೆ. ಈ ಸಂಬಂಧ ಜುಲೈ 12ರಂದು ಅಧಿಸೂಚನೆ ಕೂಡ ಹೊರಡಿಸಲಾಗಿದೆ. ಆಗಸ್ಟ್ 1ರಿಂದ ನಿಯಮ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
ಹೆದ್ದಾರಿಯಲ್ಲಿ ಗ್ರಿಲ್, ವಿದ್ಯುತ್ ಕಂಬಗಳ ಕಳ್ಳತನ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಎನ್ಎಚ್ಎಐ ಅಧಿಕಾರಿಗಳು ಒಂದೇ ಒಂದು ದೂರು ಕೊಟ್ಟಿಲ್ಲ. ತಡೆಗೋಡೆ ಕಬ್ಬಿಣ ಕಳ್ಳತನದಿಂದ ಹಸು, ಪಾದಚಾರಿಗಳು ರಸ್ತೆಗೆ ಬರುತ್ತಿದ್ದಾರೆ. ಇದರಿಂದಾಗಿ ಅಪಘಾತ ಆಗುತ್ತಿವೆ ಎಂದು ಹೇಳುತ್ತಿದ್ದಾರೆ. ಆದರೆ ಪೊಲೀಸರಿಗೆ ದೂರು ಕೊಟ್ಟಿಲ್ಲ. ದರೋಡೆ ಪ್ರಕರಣಗಳ ವಿಚಾರವನ್ನೂ ನಮ್ಮ ಗಮನಕ್ಕೆ ತಂದಿಲ್ಲ. ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.
ಹಂಪಿ : ಇಲ್ಲಿಗೆ ಸಮೀಪದ ಸಾಣಾಪುರ ಕೆರೆ ಬಳಿ ಕಳೆದ ವರ್ಷ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಗಾವತಿಯ…
ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ…
ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು…
ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ…
ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ…