ಮೈಸೂರು : ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಹಾಗೂ ಇತರ ಸಣ್ಣ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿರುವುದನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸಮರ್ಥಿಸಿಕೊಂಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಕ್ಸ್ಪ್ರೆಸ್ ಹೆದ್ದಾರಿಯ ಅಪಘಾತದಲ್ಲಿ ಮೃತಪಟ್ಟ ಬಹುತೇಕರು ಬೈಕ್ ಸವಾರರು. 150 ಸಿಸಿ ವಾಹನಗಳಲ್ಲಿ ಹೆಚ್ಚು ವೇಗದಲ್ಲಿ ಹೋಗಲು ಸಾಧ್ಯವಿಲ್ಲ. ಆಟೋ ರಿಕ್ಷಾದಂತಹ ವಾಹನಗಳ ವೇಗ ಇನ್ನೂ ಕಡಿಮೆ ಇರುತ್ತದೆ. ಎತ್ತಿನಗಾಡಿ, ಕುದುರೆಗಾಡಿಯಂತಹ ಮೋಟಾರ್ ರಹಿತ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.
ನಿರ್ಬಂಧಕ್ಕೆ ಸಂಬಂಧಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಿಂದೆಯೇ ಅವಕಾಶ ಮಾಡಿಕೊಂಡಿದೆ. ಈ ಸಂಬಂಧ ಜುಲೈ 12ರಂದು ಅಧಿಸೂಚನೆ ಕೂಡ ಹೊರಡಿಸಲಾಗಿದೆ. ಆಗಸ್ಟ್ 1ರಿಂದ ನಿಯಮ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
ಹೆದ್ದಾರಿಯಲ್ಲಿ ಗ್ರಿಲ್, ವಿದ್ಯುತ್ ಕಂಬಗಳ ಕಳ್ಳತನ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಎನ್ಎಚ್ಎಐ ಅಧಿಕಾರಿಗಳು ಒಂದೇ ಒಂದು ದೂರು ಕೊಟ್ಟಿಲ್ಲ. ತಡೆಗೋಡೆ ಕಬ್ಬಿಣ ಕಳ್ಳತನದಿಂದ ಹಸು, ಪಾದಚಾರಿಗಳು ರಸ್ತೆಗೆ ಬರುತ್ತಿದ್ದಾರೆ. ಇದರಿಂದಾಗಿ ಅಪಘಾತ ಆಗುತ್ತಿವೆ ಎಂದು ಹೇಳುತ್ತಿದ್ದಾರೆ. ಆದರೆ ಪೊಲೀಸರಿಗೆ ದೂರು ಕೊಟ್ಟಿಲ್ಲ. ದರೋಡೆ ಪ್ರಕರಣಗಳ ವಿಚಾರವನ್ನೂ ನಮ್ಮ ಗಮನಕ್ಕೆ ತಂದಿಲ್ಲ. ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…