ಮೈಸೂರು : ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಹಾಗೂ ಇತರ ಸಣ್ಣ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿರುವುದನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸಮರ್ಥಿಸಿಕೊಂಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಕ್ಸ್ಪ್ರೆಸ್ ಹೆದ್ದಾರಿಯ ಅಪಘಾತದಲ್ಲಿ ಮೃತಪಟ್ಟ ಬಹುತೇಕರು ಬೈಕ್ ಸವಾರರು. 150 ಸಿಸಿ ವಾಹನಗಳಲ್ಲಿ ಹೆಚ್ಚು ವೇಗದಲ್ಲಿ ಹೋಗಲು ಸಾಧ್ಯವಿಲ್ಲ. ಆಟೋ ರಿಕ್ಷಾದಂತಹ ವಾಹನಗಳ ವೇಗ ಇನ್ನೂ ಕಡಿಮೆ ಇರುತ್ತದೆ. ಎತ್ತಿನಗಾಡಿ, ಕುದುರೆಗಾಡಿಯಂತಹ ಮೋಟಾರ್ ರಹಿತ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.
ನಿರ್ಬಂಧಕ್ಕೆ ಸಂಬಂಧಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಿಂದೆಯೇ ಅವಕಾಶ ಮಾಡಿಕೊಂಡಿದೆ. ಈ ಸಂಬಂಧ ಜುಲೈ 12ರಂದು ಅಧಿಸೂಚನೆ ಕೂಡ ಹೊರಡಿಸಲಾಗಿದೆ. ಆಗಸ್ಟ್ 1ರಿಂದ ನಿಯಮ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
ಹೆದ್ದಾರಿಯಲ್ಲಿ ಗ್ರಿಲ್, ವಿದ್ಯುತ್ ಕಂಬಗಳ ಕಳ್ಳತನ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಎನ್ಎಚ್ಎಐ ಅಧಿಕಾರಿಗಳು ಒಂದೇ ಒಂದು ದೂರು ಕೊಟ್ಟಿಲ್ಲ. ತಡೆಗೋಡೆ ಕಬ್ಬಿಣ ಕಳ್ಳತನದಿಂದ ಹಸು, ಪಾದಚಾರಿಗಳು ರಸ್ತೆಗೆ ಬರುತ್ತಿದ್ದಾರೆ. ಇದರಿಂದಾಗಿ ಅಪಘಾತ ಆಗುತ್ತಿವೆ ಎಂದು ಹೇಳುತ್ತಿದ್ದಾರೆ. ಆದರೆ ಪೊಲೀಸರಿಗೆ ದೂರು ಕೊಟ್ಟಿಲ್ಲ. ದರೋಡೆ ಪ್ರಕರಣಗಳ ವಿಚಾರವನ್ನೂ ನಮ್ಮ ಗಮನಕ್ಕೆ ತಂದಿಲ್ಲ. ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…