Snake Shyam
ಮೈಸೂರು : ಹಾವುಗಳ ಬಗ್ಗೆ ಅನಗತ್ಯ ಭಯದಿಂದ ಅವುಗಳನ್ನು ಸಾಯಿಸಲಾಗುತ್ತಿದೆ. ಎಲ್ಲಾ ಹಾವುಗಳು ವಿಷಕಾರಿಯಲ್ಲ ಎಂದು ಉರಗ ರಕ್ಷಕ ಸ್ನೇಕ್ ಶ್ಯಾಮ್ ಹೇಳಿದರು.
ನಗರದ ತ್ಯಾಗರಾಜ ರಸ್ತೆಯಲ್ಲಿರುವ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಹಾವುಗಳ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಹಾವುಗಳ ಬಗ್ಗೆ ಜಾಗೃತಿ ಮೂಡಿಸಿದರು.
ಅರಣ್ಯ ಇಲಾಖೆ ಪರಿಸರ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಮುಂದಾಗಿರುವುದಕ್ಕೆ ಸಾರ್ವಜನಿಕರು ಸಹಕರಿಸಬೇಕು. ನಾಗರಹಾವು, ಕಾಳಿಂಗ ಸರ್ಪ ವಿಷಕಾರಿಯಾಗಿದ್ದು, ಹಪ್ಪಟೆ, ಕೇರೆ ಹಾವು, ಹಸಿರು ಹಾವು ಮುಂತಾದವು ವಿಷಕಾರಿಯಲ್ಲ. ಕೆಲವು ಹಾವುಗಳು ಹೆಚ್ಚು ವಿಷಕಾರಿಯಲ್ಲದಿದ್ದರೂ, ಹಪ್ಪಟೆ ಹಾವು ಕಚ್ಚಿದರೆ ವೈದ್ಯರ ಬಳಿ ತೆರಳಿ ಚಿಕಿತ್ಸೆ ಪಡೆಯಬೇಕು. ಹಾವುಗಳ ಬಗ್ಗೆ ಅನಗತ್ಯ ಭಯ ಬೇಡ ಎಂದು ಸಲಹೆ ನೀಡಿದರು.
ಹಾವು ಕಚ್ಚಿದಾಗ ಬಹುತೇಕ ಜನರು ಭಯದಿಂದ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪುತ್ತಾರೆ. ಹಾವು ಕಚ್ಚಿದಾಗ ವ್ಯಕ್ತಿಗೆ ಧೈರ್ಯ ತುಂಬಬೇಕು ಮತ್ತು ಸಾಧ್ಯವಾದಷ್ಟು ಬೇಗ ಸಮೀಪದ ಆಸ್ಪತ್ರೆಗೆ ಕರೆದೊಯ್ಯಬೇಕು ಎಂದರು.
ಸಮಾಜಸೇವಕ ಕೆ.ರಘುರಾಮ್ ವಾಜಪೇಯಿ ಮಾತನಾಡಿ, ಹಾವನ್ನ ನಾವು ಜೀವಭಯದಿಂದ ಹಿಡಿಯಬಾರದು. ವೈಜ್ಞಾನಿಕವಾಗಿ ಜೀವರಕ್ಷಣೆಯಿಂದ ಹಿಡಿಯಬೇಕು, ಹಬ್ಬ ಹರಿದಿನ ಇತಿಹಾಸದಲ್ಲೂ ಸಹ ಪ್ರತಿಯೊಂದು ಪ್ರಾಣಿ-ಪಕ್ಷಿಗಳಿಗೂ ಸಹ ನಮ್ಮ ಪೂರ್ವಜರು ಪೂಜ್ಯ ಸ್ಥಾನ ನೀಡಿದ್ದಾರೆ, ಮಕ್ಕಳು ಸಣ್ಣ ವಯಸ್ಸಿನಲ್ಲೇ ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ಬೆಳೆಸಿಕೊಳ್ಳಲು ಮುಂದಾಗಬೇಕು ಎಂದರು.
ಕಾಂಗ್ರೆಸ್ ಮುಖಂಡ ಎನ್.ಎಂ. ನವೀನ್ ಕುಮಾರ್ ಮಾತನಾಡಿ, ಕೋವಿಡ್ ನಂತಹ ಕಷ್ಟಕಾಲದಲ್ಲೂ ಮನೆಗಳಿಗೆ ಹಾವು ಬಂದಾಗ ಸ್ನೇಕ್ ಶ್ಯಾಮ್ ಅವರು ಹಾವನ್ನ ಸಂರಕ್ಷಿಸಿದ್ದಾರೆ, ಅಂತಾರಾಷ್ಟ್ರೀಯ ಉರಗತಜ್ಞ ಸ್ನೇಕ್ ಶ್ಯಾಮ್ ರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ, ಅಷ್ಟೇ ಅಲ್ಲದೇ 85 ಸಾವಿರಕ್ಕೂ ಹೆಚ್ಚು ಹಾವನ್ನ ಸಂರಕ್ಷಿಸಿದ್ದಾರೆ. ಪರಿಸರ ಸಂರಕ್ಷಣೆ ಜೊತೆಯಲ್ಲೆ ಧಾರ್ಮಿಕ ಕೇಂದ್ರವನ್ನ ಸ್ಥಾಪಿಸಿರುವುದು ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ 90000 ಸಾವಿರಕ್ಕೂ ಹೆಚ್ಚು ಹಾವುಗಳನ್ನು ಸಂರಕ್ಷಿಸಿದ ಉರಗ ರಕ್ಷಕ ಸ್ನೇಕ್ ಶ್ಯಾಮ್ ಅವರನ್ನು ಅಭಿನಂದಿಸಲಾಯಿತು.
ಇದೆ ಸಂದರ್ಭದಲ್ಲಿ ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ, ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಶಾಲೆಯ ಮುಖ್ಯೋಪಾಧ್ಯಾಯರಾದ ಸುಗುಣಾವತಿ, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಜಿ.ರಾಘವೇಂದ್ರ, ಎಸ್.ಎನ್. ರಾಜೇಶ್, ಶ್ರೀನಿವಾಸ್, ಪ್ರವೀಣ್ ಕುಮಾರ್ ಇನ್ನಿತರರು ಉಪಸ್ಥಿತರಿದ್ದರು.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…