ಮೈಸೂರು

ನರೇಗಾ | ಮೈಸೂರಲ್ಲೂ ಸ್ತ್ರೀ ಚೇತನ ಅಭಿಯಾನ

ಉದ್ಯೋಗ ಖಾತ್ರಿ ಮತ್ತಷ್ಟು ಮಹಿಳಾ ಸ್ನೇಹಿ, ಜಿಲ್ಲಾ ಪಂಚಾಯಿತಿಯಿಂದ ಮೂರು ತಿಂಗಳ ವಿಶೇಷ ಅಭಿಯಾನ

ಮೈಸೂರು : ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಜಾರಿಗೊಳಿಸಲಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮ-ನರೇಗಾ) ಯೋಜನೆಯಲ್ಲಿ ಮಹಿಳಾ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರವು ಸ್ತ್ರೀ ಚೇತನ ಯೋಜನೆಯನ್ನು ಜಾರಿಗೊಳಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ತವರು ಮೈಸೂರು ಜಿಲ್ಲೆಯಲ್ಲೂ ಅಭಿಯಾನ ಪ್ರಾರಂಭಗೊಂಡಿದೆ.

ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರಿ ಚೇತನಾ ಅಭಿಯಾನದ ಮೂಲಕ ಪ್ರಯತ್ನ ನಡೆಸಿದೆ. ಮ-ನರೇಗಾ ಸಂಪೂರ್ಣವಾಗಿ ಮಹಿಳಾ ಸ್ನೇಹಿ ಎಂಬುದಾಗಿ ಪರಿಚಯಿಸುವ ಉದ್ದೇಶವನ್ನು ಸ್ತ್ರೀ ಚೇತನ ಅಭಿಯಾನ ಒಳಗೊಂಡಿದೆ.

ಮ-ನರೇಗಾದಲ್ಲಿ ಶೇ.50ರಷ್ಟಿರುವ ಮಹಿಳಾ ಕೂಲಿಕಾರ್ಮಿಕರ ಸಂಖ್ಯೆಯನ್ನು ಶೇ.60ಕ್ಕೆ ಹೆಚ್ಚಿಸುವುದು ಅಭಿಯಾನದ ಉದ್ದೇಶವಾಗಿದೆ.
ಮಾತ್ರವಲ್ಲದೆ, ಮೂರು ತಿಂಗಳು ಮಹಿಳಾ ಕೂಲಿಕಾರರಿಗೆ ನಿರಂತರ ಕೆಲಸ ಆದ್ಯತೆ ನೀಡುವುದು. ತಾಯಿ ಮತ್ತು ಮಕ್ಕಳಿಗೆ ಅನುಕೂಲವಾಗುವಂತೆ ಮಕ್ಕಳಿಗಾಗಿ ಕೂಸಿನ ಮನೆ, ವೈಯಕ್ತಿಕ ಕಾಮಗಾರಿಗಳಾದ ಇಂಗುಗುಂಡಿ, ವೈಯಕ್ತಿಕ ಶೌಚಾಲಯ, ಪೌಷ್ಟಿಕ ಕೈತೋಟ, ದನ ಮತ್ತು ಕುರಿ ಕಾಮಗಾರಿಗಳನ್ನು ನೀಡುವುದಾಗಿದೆ. ಮ-ನರೇಗಾ ಯೋಜನೆ ಮೂಲಕ ಮಹಿಳಾ ಸಬಲೀಕರಣ ಕೈಗೊಳ್ಳುವ ಬಹುಮುಖ್ಯ ಉದ್ದೇಶವನ್ನು ಸ್ತ್ರೀ ಚೇತನ ಕಾರ್ಯಕ್ರಮ ಹೊಂದಿದೆ.

ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿಯ ಮಾರ್ಗದರ್ಶನದ ಮೂಲಕ ಸ್ಥಳೀಯ ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಿವೆ. ಮ-ನರೇಗಾ ಕಾಮಗಾರಿಗಳಲ್ಲಿ ಪ್ರಸ್ತುತ ಮಹಿಳಾ ಪಾಲ್ಗೊಳ್ಳುವಿಕೆಯ ಪ್ರಮಾಣವು ರಾಜ್ಯ ಮಟ್ಟದಲ್ಲಿ ಶೇ 53.51ರಷ್ಟಿದ್ದರೆ ಮೈಸೂರು ಶೇ.50ರಷ್ಟಿದ್ದು, ಅದನ್ನು ವೃದ್ಧಿಸುವ ಉದ್ದೇಶವಿದೆ. “ಸ್ತ್ರೀ ಚೇತನ” ಅಭಿಯಾನವು ಮೂರು ತಿಂಗಳವರೆಗೆ ಜಾರಿಯಲ್ಲಿರಲಿದ್ದು, ಈ ಸಂದರ್ಭದಲ್ಲಿ ನರೇಗಾ ಯೋಜನೆಯಲ್ಲಿ ಮಹಿಳೆಯರಿಗೆ ಇರುವ ಸವಲತ್ತು ಮತ್ತು ಸೌಲಭ್ಯಗಳ ಬಗ್ಗೆ ಮನದಟ್ಟು ಮಾಡಿಕೊಡಲಾಗುತ್ತದೆ. ಈ ಮೂಲಕ ಮ-ನರೇಗಾ ಯೋಜನೆಯಲ್ಲಿ ಮತ್ತಷ್ಟು ಮಹಿಳೆಯರು ಪಾಲ್ಗೊಳ್ಳುವಂತೆ ಉತ್ತೇಜಿಸುವ ನೂತನ ಪ್ರಯತ್ನಕ್ಕೆ ಜಿಲ್ಲಾ ಪಂಚಾಯಿತಿ ಮುಂದಾಗಿರುವುದು ವಿಶೇಷ.

ಅರ್ಧಕೂಲಿ, ಪೂರ್ತಿ ಸಂಬಳ
ರಾಷ್ಟ್ರೀಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ಮಾಡುವ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಆಯಾ ದಿನದ ನಿಗದಿತ ಅವಧಿಯಲ್ಲಿ ಅರ್ಧ ಕೆಲಸ ನಿರ್ವಹಿಸಿದರೂ ಪೂರ್ತಿ ಕೂಲಿ ಕೈಸೇರಲಿದೆ. ಅದರಂತೆ ವಿಶೇಷಚೇತನರು ಮತ್ತು ಹಿರಿಯ ನಾಗರಿಕರಿಗೆ ಕೆಲಸದಲ್ಲಿ ಶೇ.50ರಷ್ಟು ರಿಯಾಯಿತಿ ಘೋಷಿಸಿರುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಗರ್ಭಿಣಿಯರು ಹಾಗೂ ಬಾಣಂತಿಯರ ರಿಯಾಯಿತಿ ನೀಡಿದೆ. ನರೇಗಾ ಕೆಲಸ ಮಾಡುವ 6 ತಿಂಗಳು ತುಂಬಿದ ಗರ್ಭಿಣಿಯರಿಗೆ ಮಗುವಿನ ಜನನದವರೆಗೆ ಹಾಗೂ ಬಾಣಂತಿಯರಿಗೆ ಮಗುವಿನ ಜನನದ ನಂತರದ ಆರು ತಿಂಗಳವರೆಗೆ ನಿಗದಿತ ಕೂಲಿ ಪಡೆಯಲು ಕೆಲಸದಲ್ಲಿ ಶೇ.50ರಷ್ಟು ರಿಯಾಯತಿ ಸೌಲಭ್ಯ ನೀಡುತ್ತಿರುವುದು ವಿಶೇಷ.

ಮಹಿಳಾ ಸಬಲೀಕರಣದ ಜತೆಗೆ ಮ-ನರೇಗಾದಡಿ ಮಹಿಳಾ ಕೂಲಿಕಾರರ ಪಾಲ್ಗೊಳ್ಳುವಿಕೆಯನ್ನು ಶೇ.60ಕ್ಕೆ ಹೆಚ್ಚಿಸುವ ಉದ್ದೇಶದಿಂದ “ಸ್ತ್ರೀ ಚೇತನಾ” ಅಭಿಯಾನ ಎಂಬ ಮಹಿಳಾ ಸ್ನೇಹಿ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಅಭಿಯಾನದಲ್ಲಿ ಭಾಗವಹಿಸಿ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು. ಅರ್ಹ ಮಹಿಳೆಯರು ಯೋಜನೆ ಸದುಪಯೋಗಪಡಿಸಿಕೊಳ್ಳುವ ಮೂಲಕ ಮಹಿಳಾ ಸಬಲೀಕರಣಕ್ಕೆ ಕೈ ಜೋಡಿಸಲಿ. –ಎಸ್.ಯುಕೇಶ್ ಕುಮಾರ್, ಮುಖ್ಯಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯಿತಿ, ಮೈಸೂರು

ಗ್ರಾಮೀಣ ಭಾಗದಲ್ಲಿ ಮಹಿಳೆಯರನ್ನು ಹೊರಗೆ ಕಳುಹಿಸಲು ಹಿಂಜರಿಯುತ್ತಾರೆ. ಅಂತಹವರಿಗೆ ಮಹಿಳೆಯರು ತಾವು ಇರುವಲ್ಲಿಯೇ ಬದುಕು ರೂಪಿಸಿಕೊಳ್ಳಲು ನರೇಗಾ ಸ್ತ್ರೀ ಚೇತನ ಅಭಿಯಾನ ಮಹಿಳಾ ಸ್ನೇಹಿಯಾಗಿದೆ. ಈ ಯೋಜನೆಯನ್ನು ಮಹಿಳೆಯರು ಸದ್ಬಳಕೆ ಮಾಡಿಕೊಳ್ಳಬೇಕು. ಈ ಮೂರು ತಿಂಗಳ ಕಾಲ ನರೇಗಾ ಬಗ್ಗೆ ಮಹಿಳೆಯರಿಗೆ ಹೆಚ್ಚಿನ ಮಾಹಿತಿ ನೀಡುವ ಕೆಲಸವು ಆಗಲಿದೆ. ಡಾ.ಎಂ.ಕೃಷ್ಣರಾಜು, ಉಪಕಾರ್ಯದರ್ಶಿ(ಅಭಿವೃದ್ಧಿ), ಜಿಲ್ಲಾ ಪಂಚಾಯಿತಿ, ಮೈಸೂರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

8 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

9 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

10 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

11 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

16 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

18 hours ago