ಮೈಸೂರು

ಕೊಳವೆಬಾವಿಗಳಿಗೆ ವಿದ್ಯುದೀಕರಣ ಪೂರ್ಣಗೊಳಿಸದ 20 ಗುತ್ತಿಗೆದಾರರನ್ನ ಕಪ್ಪುಪಟ್ಟಿಗೆ ಸೇರಿಸಿ: ಎನ್‌.ಎಸ್‌ ಭೋಸರಾಜು

ಮೈಸೂರು: ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆ ಅಡಿಯಲ್ಲಿ ಕೊರೆಸಲಾದ ಕೊಳವೆ ಬಾವಿಗಳ ವಿದ್ಯುದೀಕರಣ ಪೂರ್ಣಗೊಳಿಸದೇ ಇರುವಂತಹ 20 ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಙಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು (ಜುಲೈ.5) ಮೈಸೂರಿನ ಜಲದರ್ಶಿನಿ ಸಭಾಂಗಣದಲ್ಲಿ ಸಣ್ಣ ನೀರಾವರಿ ಇಲಾಖೆಯ ಮೈಸೂರು ವೃತ್ತದ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ ಮಾಹಿತಿಯನ್ನು ಪಡೆದುಕೊಂಡರು.

ನಬಾರ್ಡ್‌, ಎಸ್‌ಡಿಆರ್‌ಎಫ್‌ ಮತ್ತು ಆಯವ್ಯಯದಲ್ಲಿ ಘೋಷಣೆ ಮಾಡಲಾದ ಯೋಜನೆಗಳ ಅನುಷ್ಠಾನ ಹಾಗೂ ಅವುಗಳ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದೇನೆ. ಚುನಾವಣೆಯ ಕಾರಣ ನೀಡಿ ಹಲವಾರು ಯೋಜನೆಗಳ ಟೆಂಡರ್‌ ಪ್ರಕ್ರಿಯೆ ನಿಧಾನಗೊಳಿಸಿರುವ ಬಗ್ಗೆ ಸಚಿವರು ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.

ವಿಶೇಷ ಘಟಕ ಯೋಜನೆಯ ಅಡಿಯಲ್ಲಿ ಕೊಳವೆ ಬಾವಿಗಳನ್ನು ಕೊರೆಸಲಾಗಿದೆ. ಆದರೆ, ಹಲವಾರು ಕಡೆಗಳಲ್ಲಿನ ಬೋರ್‌ವೆಲ್‌ಗಳನ್ನು ಗುತ್ತಿಗೆದಾರರು ವಿದ್ಯುದೀಕರಣಗೊಳಿಸುವ ಕಾರ್ಯವನ್ನು ಪೂರ್ಣಗೊಳಿಸಿಲ್ಲ. ಕೆಲವು ಪ್ರಕರಣಗಳಲ್ಲಿ ಮೂರು ವರ್ಷಗಳಿಂದ ಈ ಕಾರ್ಯವನ್ನ ಬಾಕಿ ಉಳಿಸಿಕೊಳ್ಳಲಾಗಿದೆ. ಇದನ್ನು ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ ಕಪ್ಪುಪಟ್ಟಿಗೆ ಸೇರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕೈಗೊಳ್ಳಬೇಕಾಗಿದ್ದ 7 ಕೆರೆ ತುಂಬಿಸುವ ಯೋಜನೆಗೆ ಮಾರ್ಚ 2022 ರಲ್ಲಿ ಟೆಂಡರ್‌ ಪ್ರಕ್ರಿಯೆ ಪೂರೈಸಿ ಕರಾರು ಪತ್ರವನ್ನು ಮಾಡಿಕೊಡಲಾಗಿತ್ತು. ಇದುವರೆಗೂ ಕಾಮಗಾರಿಯನ್ನು ಪ್ರಾರಂಭಿಸಲ್ಲ. ಕಾಮಗಾರಿ ಪ್ರಾರಂಭಿಸುವಂತೆ ಹಲವಾರು ಬಾರಿ ಗುತ್ತಿಗೆದಾರರಿಗೆ ನೋಟೀಸ್‌ ನೀಡಿದ್ದರೂ ಪ್ರಯೋಜನವಾಗಿಲ್ಲ. ಈ ಹಿನ್ನಲೆಯಲ್ಲಿ ಹೈದರಬಾದ್‌ನ ಅಯ್ಯಪ್ಪ ಕನ್ನಷ್ಟ್ರಕ್ಷನ್‌ ಅವರಿಗೆ ನೀಡಿದ್ದ ಗುತ್ತಿಗೆಯನ್ನು ರದ್ದುಗೊಳಿಸಿ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಯಾವುದೇ ಕಾಮಗಾರಿಗಳನ್ನು ಪ್ರಾರಂಭಿಸುವ ಮುನ್ನ ಭೂ ಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬೇಕು. ಇದನ್ನು ಪೂರ್ಣಗೊಳಿಸದೇ ಬೇರೆ ಪ್ರಕ್ರಿಯೆ ಪ್ರಾರಂಭಿಸಿದರೆ ಬಹಳಷ್ಟು ತೊಂದರೆಗಳೂ ಎದುರಾಗುತ್ತವೆ. ಈ ಹಿನ್ನಲೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಆದ್ಯತೆ ನೀಡುವಂತೆ ಸೂಚನೆ ನೀಡಿದರು.

ಕೆರೆಗಳನ್ನ ಸುಸ್ಥಿತಿಯಲ್ಲಿ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಗಮನ ಹರಿಸಬೇಕು. ಮಳೆ ನೀರು ಹೆಚ್ಚಾಗಿ ಸಂಗ್ರಹವಾಗುವಂತೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಅಲ್ಲದೇ, ಮುಗಿದಿರುವ ಕಾಮಗಾರಿಗಳ ವರದಿಯನ್ನು ಸಕಾಲಕ್ಕೆ ಸಲ್ಲಿಸಬೇಕು. ಕಾಮಗಾರಿಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಕೆಲಸಗಳನ್ನ ಚುರುಕುಗೊಳಿಸಿ ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ದಕ್ಷಿಣ ವಲಯದ ಮುಖ್ಯ ಅಭಿಯಂತರರಾದ ರಾಘವನ್‌, ಸೂಪರೀಂಡೆಂಟ್‌ ವಿನಾಯಕ್‌ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

25 mins ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

56 mins ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

1 hour ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

2 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

5 hours ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

6 hours ago