ಮೈಸೂರು

ಸಂವಿಧಾನದಲ್ಲಿ ಸಾಂದರ್ಭಿಕ ಬದಲಾವಣೆ ಅಗತ್ಯ : ಮುಖ್ಯಮಂತ್ರಿ ಚಂದ್ರು ಅಭಿಮತ

ಮೈಸೂರು : ಪ್ರಸ್ತುತ ಸಂದರ್ಭದಲ್ಲಿ ಸಂವಿಧಾನದಲ್ಲಿ ಸಾಂದರ್ಭಿಕ ಬದಲಾವಣೆ ಆಗಬೇಕು ಎಂದು ಆಮ್ ಆದ್ಮಿ ಪಾರ್ಟಿಯ ನಾಯಕರೂ ಆದ ನಟ ಮುಖ್ಯಮಂತ್ರಿ ಚಂದ್ರು ಹೇಳಿದರು.

ನಗರದ ಯುವರಾಜ ಕಾಲೇಜಿನ ಅಮೃತ ಮಹೋತ್ಸವ ಸಭಾಂಗಣದಲ್ಲಿ ಶುಕ್ರವಾರ ನಡೆದ ʼಭವಿಷ್ಯದಲ್ಲಿ ಪ್ರಜಾಪ್ರಭುತ್ವದ ರಕ್ಷಣೆ ಜವಾಬ್ದಾರಿ ಯುವಶಕ್ತಿಯ ಕೈಯಲ್ಲಿ’ ಮುಕ್ತ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಬಸವರಾಜು ಬೊಮ್ಮಾಯಿ, ಶಾಮನೂರು ಶಿವಶಂಕರಪ್ಪ, ಮೈಸೂರಿನ ಮಹಾರಾಜರಿಗೆ ಮೀಸಲಾತಿ ಯಾಕೇ ಬೇಕು. ದಿನಗೂಲಿಯಲ್ಲಿ ಬದುಕುತ್ತಿರುವರಿಗೆ ಮೀಸಲಾತಿ ಬೇಕಿದೆ. ಜಾತಿಯ ಆಧಾರದಲ್ಲಿ ಮೀಸಲಾತಿ ಕೊಡುವುದಾದರೆ ಅಯಾ ಸಮುದಾಯದಲ್ಲಿ ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕಲ್ಪಿಸಬೇಕು. ಮೀಸಲಾತಿ ಅನುಕೂಲ ಪಡೆದು ಉನ್ನತ ಮಟ್ಟಕ್ಕೆ ಏರಿದವರು, ಲಕ್ಷಾಂತರ ರೂಪಾಯಿ ಸಂಬಳ ತೆಗೆದುಕೊಳ್ಳುವವರಿಗೆ ಮೀಸಲಾತಿ ಕೊಡುವುದಾದರೆ ಬೇರೆಯವರ ಗತಿ ಏನಾಗಬೇಕು ಎಂದು ಪ್ರಶ್ನಿಸಿದರು.

ಜೊತೆಗೆ, ೧೦ ವರ್ಷ ಜೈಲು ಶಿಕ್ಷೆ ಅನುಭವಿಸಿದವ ಚುನಾವಣೆಗೆ ಸ್ಪರ್ಧಿಸಲು ಅವಕಾಶವಿದೆ. ಶಿಕ್ಷಣ ಇಲ್ಲದವರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುತ್ತಿದ್ದಾರೆ. ಸಂವಿಧಾನ ಈ ಮಟ್ಟಕ್ಕೆ ಬಂದು ತಲುಪಿದೆ. ಹೀಗಾಗಿ ಸಾಂದರ್ಭಿಕವಾಗಿ ಸಂವಿಧಾನದಲ್ಲಿ ಬದಲಾವಣೆ ತರಬೇಕಿದೆ. ಆಗಿರುವ ಅನಾಹುತಗಳನ್ನು ಸರಿಪಡಿಸಬೇಕಿದೆ ಎಂದು ಹೇಳಿದರು.

ಇದನ್ನು ಓದಿ: ಟ್ರಂಪ್‌ ಕಸರತ್ತು ವ್ಯರ್ಥ ; ಮರಿಯಾ ಕೊರಿನಾ ಮಚಾದೊಗೆ ಒಲಿದ ನೊಬೆಲ್‌ ಶಾಂತಿ ಪ್ರಶಸ್ತಿ..

ಹನ್ನೇರಡನೇ ಶತಮಾನದಲ್ಲಿ ಬಸವಣ್ಣನವರ ಅನುಭವ ಮಂಟಪವೇ ಇಂದಿನ ಸಂಸತ್ತು ಎಂದು ಹೇಳುತ್ತೇವೆ. ಆದರೆ ಬಸವಣ್ಣನವರು ಹೇಳಿದ್ದ ಕಲಬೇಡ, ಕೊಲಬೇಡ,. ಹುಸಿಯ ನುಡಿಯಲು ಬೇಡ.. ಈ ವಚನದ ಎಲ್ಲಾ ಸಾಲುಗಳನ್ನು ಅನುಸರಿಸಿದ್ದರೆ ಯಾವುದೇ ಸಮಸ್ಯೆ ಎದುರಾಗುತ್ತಿರಲಿಲ್ಲ. ಈಗ ಪ್ರಜಾಪ್ರಭುತ್ವದ ಹೆಸರಿನಲ್ಲಿ ಸರ್ವಾಧಿಕಾರಿ ನಡೆಯುತ್ತಿದೆ. ಇಡಿ, ಸಿಬಿಐ, ಚುನಾವಣಾ ಆಯೋಗದ ದುರುಪಯೋಗ ನಡೆಯುತ್ತಿದೆ. ಎಲ್ಲಾ ಪಕ್ಷಗಳಲ್ಲೂ ಕುಟುಂಬ ರಾಜಕಾರಣ ನಡೆಯುತ್ತಿದೆ ಎಂದು ಅವರು ವಿಷಾದಿಸಿದರು.

ಪ್ರಜಾಪ್ರಭುತ್ವ ಉಳಿಯಬೇಕಾದರೆ ಚುನಾವಣೆಗಳಲ್ಲಿ ಯೋಗ್ಯರನ್ನು ಆಯ್ಕೆ ಮಾಡಬೇಕು. ಸ್ಥಳೀಯ ಸಂಸ್ಥೆಗಳಿಂದ ಹಿಡಿದು ವಿಧಾನಸಭೆ, ಲೋಕಸಭೆವರೆಗೆ ಯೋಗ್ಯರೇ ಆಯ್ಕೆಯಾಗಬೇಕು. ಯಾವುದೇ ರಾಜಕೀಯ ಪಕ್ಷದವರು ಯೋಗ್ಯರಿಗೆ ಟಿಕೆಟ್ ನೀಡಲಿಲ್ಲ ಎಂದರೇ ಸ್ಥಳೀಯರೇ ಉತ್ತಮ ಅಭ್ಯರ್ಥಿಯನ್ನು ನಿಲ್ಲಿಸಿ, ಗೆಲ್ಲಿಸಬೇಕು. ಮತದಾನ ಕಡ್ಡಾಯ ಮಾಡಬೇಕು. ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಬೇಕು ಎಂದು ಅವರು ಸಲಹೆ ಮಾಡಿದರು.

ಜಾತಿ ವಿರೋಧಿಸಬಾರದು: ಜಾತಿ ಗಣತಿಗೆ ವಿರೋಧ ಸರಿಯಲ್ಲ. ದೇಶದಲ್ಲಿ ಸಾವಿರಾರು ಜಾತಿಗಳಿವೆ. ಹೀಗಿರುವಾಗ ಸಮಾನತೆ ತರಬೇಕಾದರೆ ಯಾವ್ಯಾವ ಜಾತಿಯವರು ಎಷ್ಟೆಷ್ಟು ಇದ್ದಾರೆ ಎಂಬುದನ್ನು ಪತ್ತೆ ಮಾಡಿ, ಅದರ ಪ್ರಕಾರ ಸೌಲಭ್ಯ ಕಲ್ಪಿಸಬೇಕಾಗಿದೆ. ಇಂದಿಗೂ ಹಲವು ಸಮುದಾಯಗಳಲ್ಲಿ ಒಬ್ಬ ಒಬ್ಬೇ ಶಾಸಕ, ಸಂಸದನಾಗಿಲ್ಲ. ಗ್ರಾಮಪಂಚಾಯಿತಿ ಸದಸ್ಯನೂ ಆಗಿಲ್ಲ. ಸರ್ಕಾರದ ಸೌಲಭ್ಯಗಳು ತಲುಪುತ್ತಿಲ್ಲ. ಇವರಿಗೆ ಸರ್ಕಾರ ಹೀಗಾಗಿ ಜಾತಿ ಗಣತಿಯನ್ನು ವಿರೋಧಿಸುವುದು ಸರಿಯಲ್ಲ ಎಂದು ಅವರು ಹೇಳಿದರು.

ವಕೀಲರು ಹಾಗೂ ನೋಟರಿ ಎಂ.ಎನ್. ಸುಮನಾ ಮಾತನಾಡಿ, ಪ್ರತಿಯೊಬ್ಬರಿಗೂ ಮಹಾತ್ಮಗಾಂಧೀಜಿ ಅವರ ಅಹಿಂಸೆ, ಡಾ.ಬಿ.ಆರ್. ಅಂಬೇಡ್ಕರ್ ಅವರ ಸಮಾನತೆ, ಬಸವಣ್ಣನವರ ಮಾನವ ಧರ್ಮ ಮುಖ್ಯವಾಗಬೇಕು ಎಂದರು.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

3 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

4 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

5 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

5 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

5 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

5 hours ago