ಮೈಸೂರು

ಸಂವಿಧಾನದಲ್ಲಿ ಸಾಂದರ್ಭಿಕ ಬದಲಾವಣೆ ಅಗತ್ಯ : ಮುಖ್ಯಮಂತ್ರಿ ಚಂದ್ರು ಅಭಿಮತ

ಮೈಸೂರು : ಪ್ರಸ್ತುತ ಸಂದರ್ಭದಲ್ಲಿ ಸಂವಿಧಾನದಲ್ಲಿ ಸಾಂದರ್ಭಿಕ ಬದಲಾವಣೆ ಆಗಬೇಕು ಎಂದು ಆಮ್ ಆದ್ಮಿ ಪಾರ್ಟಿಯ ನಾಯಕರೂ ಆದ ನಟ ಮುಖ್ಯಮಂತ್ರಿ ಚಂದ್ರು ಹೇಳಿದರು.

ನಗರದ ಯುವರಾಜ ಕಾಲೇಜಿನ ಅಮೃತ ಮಹೋತ್ಸವ ಸಭಾಂಗಣದಲ್ಲಿ ಶುಕ್ರವಾರ ನಡೆದ ʼಭವಿಷ್ಯದಲ್ಲಿ ಪ್ರಜಾಪ್ರಭುತ್ವದ ರಕ್ಷಣೆ ಜವಾಬ್ದಾರಿ ಯುವಶಕ್ತಿಯ ಕೈಯಲ್ಲಿ’ ಮುಕ್ತ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಬಸವರಾಜು ಬೊಮ್ಮಾಯಿ, ಶಾಮನೂರು ಶಿವಶಂಕರಪ್ಪ, ಮೈಸೂರಿನ ಮಹಾರಾಜರಿಗೆ ಮೀಸಲಾತಿ ಯಾಕೇ ಬೇಕು. ದಿನಗೂಲಿಯಲ್ಲಿ ಬದುಕುತ್ತಿರುವರಿಗೆ ಮೀಸಲಾತಿ ಬೇಕಿದೆ. ಜಾತಿಯ ಆಧಾರದಲ್ಲಿ ಮೀಸಲಾತಿ ಕೊಡುವುದಾದರೆ ಅಯಾ ಸಮುದಾಯದಲ್ಲಿ ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕಲ್ಪಿಸಬೇಕು. ಮೀಸಲಾತಿ ಅನುಕೂಲ ಪಡೆದು ಉನ್ನತ ಮಟ್ಟಕ್ಕೆ ಏರಿದವರು, ಲಕ್ಷಾಂತರ ರೂಪಾಯಿ ಸಂಬಳ ತೆಗೆದುಕೊಳ್ಳುವವರಿಗೆ ಮೀಸಲಾತಿ ಕೊಡುವುದಾದರೆ ಬೇರೆಯವರ ಗತಿ ಏನಾಗಬೇಕು ಎಂದು ಪ್ರಶ್ನಿಸಿದರು.

ಜೊತೆಗೆ, ೧೦ ವರ್ಷ ಜೈಲು ಶಿಕ್ಷೆ ಅನುಭವಿಸಿದವ ಚುನಾವಣೆಗೆ ಸ್ಪರ್ಧಿಸಲು ಅವಕಾಶವಿದೆ. ಶಿಕ್ಷಣ ಇಲ್ಲದವರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುತ್ತಿದ್ದಾರೆ. ಸಂವಿಧಾನ ಈ ಮಟ್ಟಕ್ಕೆ ಬಂದು ತಲುಪಿದೆ. ಹೀಗಾಗಿ ಸಾಂದರ್ಭಿಕವಾಗಿ ಸಂವಿಧಾನದಲ್ಲಿ ಬದಲಾವಣೆ ತರಬೇಕಿದೆ. ಆಗಿರುವ ಅನಾಹುತಗಳನ್ನು ಸರಿಪಡಿಸಬೇಕಿದೆ ಎಂದು ಹೇಳಿದರು.

ಇದನ್ನು ಓದಿ: ಟ್ರಂಪ್‌ ಕಸರತ್ತು ವ್ಯರ್ಥ ; ಮರಿಯಾ ಕೊರಿನಾ ಮಚಾದೊಗೆ ಒಲಿದ ನೊಬೆಲ್‌ ಶಾಂತಿ ಪ್ರಶಸ್ತಿ..

ಹನ್ನೇರಡನೇ ಶತಮಾನದಲ್ಲಿ ಬಸವಣ್ಣನವರ ಅನುಭವ ಮಂಟಪವೇ ಇಂದಿನ ಸಂಸತ್ತು ಎಂದು ಹೇಳುತ್ತೇವೆ. ಆದರೆ ಬಸವಣ್ಣನವರು ಹೇಳಿದ್ದ ಕಲಬೇಡ, ಕೊಲಬೇಡ,. ಹುಸಿಯ ನುಡಿಯಲು ಬೇಡ.. ಈ ವಚನದ ಎಲ್ಲಾ ಸಾಲುಗಳನ್ನು ಅನುಸರಿಸಿದ್ದರೆ ಯಾವುದೇ ಸಮಸ್ಯೆ ಎದುರಾಗುತ್ತಿರಲಿಲ್ಲ. ಈಗ ಪ್ರಜಾಪ್ರಭುತ್ವದ ಹೆಸರಿನಲ್ಲಿ ಸರ್ವಾಧಿಕಾರಿ ನಡೆಯುತ್ತಿದೆ. ಇಡಿ, ಸಿಬಿಐ, ಚುನಾವಣಾ ಆಯೋಗದ ದುರುಪಯೋಗ ನಡೆಯುತ್ತಿದೆ. ಎಲ್ಲಾ ಪಕ್ಷಗಳಲ್ಲೂ ಕುಟುಂಬ ರಾಜಕಾರಣ ನಡೆಯುತ್ತಿದೆ ಎಂದು ಅವರು ವಿಷಾದಿಸಿದರು.

ಪ್ರಜಾಪ್ರಭುತ್ವ ಉಳಿಯಬೇಕಾದರೆ ಚುನಾವಣೆಗಳಲ್ಲಿ ಯೋಗ್ಯರನ್ನು ಆಯ್ಕೆ ಮಾಡಬೇಕು. ಸ್ಥಳೀಯ ಸಂಸ್ಥೆಗಳಿಂದ ಹಿಡಿದು ವಿಧಾನಸಭೆ, ಲೋಕಸಭೆವರೆಗೆ ಯೋಗ್ಯರೇ ಆಯ್ಕೆಯಾಗಬೇಕು. ಯಾವುದೇ ರಾಜಕೀಯ ಪಕ್ಷದವರು ಯೋಗ್ಯರಿಗೆ ಟಿಕೆಟ್ ನೀಡಲಿಲ್ಲ ಎಂದರೇ ಸ್ಥಳೀಯರೇ ಉತ್ತಮ ಅಭ್ಯರ್ಥಿಯನ್ನು ನಿಲ್ಲಿಸಿ, ಗೆಲ್ಲಿಸಬೇಕು. ಮತದಾನ ಕಡ್ಡಾಯ ಮಾಡಬೇಕು. ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಬೇಕು ಎಂದು ಅವರು ಸಲಹೆ ಮಾಡಿದರು.

ಜಾತಿ ವಿರೋಧಿಸಬಾರದು: ಜಾತಿ ಗಣತಿಗೆ ವಿರೋಧ ಸರಿಯಲ್ಲ. ದೇಶದಲ್ಲಿ ಸಾವಿರಾರು ಜಾತಿಗಳಿವೆ. ಹೀಗಿರುವಾಗ ಸಮಾನತೆ ತರಬೇಕಾದರೆ ಯಾವ್ಯಾವ ಜಾತಿಯವರು ಎಷ್ಟೆಷ್ಟು ಇದ್ದಾರೆ ಎಂಬುದನ್ನು ಪತ್ತೆ ಮಾಡಿ, ಅದರ ಪ್ರಕಾರ ಸೌಲಭ್ಯ ಕಲ್ಪಿಸಬೇಕಾಗಿದೆ. ಇಂದಿಗೂ ಹಲವು ಸಮುದಾಯಗಳಲ್ಲಿ ಒಬ್ಬ ಒಬ್ಬೇ ಶಾಸಕ, ಸಂಸದನಾಗಿಲ್ಲ. ಗ್ರಾಮಪಂಚಾಯಿತಿ ಸದಸ್ಯನೂ ಆಗಿಲ್ಲ. ಸರ್ಕಾರದ ಸೌಲಭ್ಯಗಳು ತಲುಪುತ್ತಿಲ್ಲ. ಇವರಿಗೆ ಸರ್ಕಾರ ಹೀಗಾಗಿ ಜಾತಿ ಗಣತಿಯನ್ನು ವಿರೋಧಿಸುವುದು ಸರಿಯಲ್ಲ ಎಂದು ಅವರು ಹೇಳಿದರು.

ವಕೀಲರು ಹಾಗೂ ನೋಟರಿ ಎಂ.ಎನ್. ಸುಮನಾ ಮಾತನಾಡಿ, ಪ್ರತಿಯೊಬ್ಬರಿಗೂ ಮಹಾತ್ಮಗಾಂಧೀಜಿ ಅವರ ಅಹಿಂಸೆ, ಡಾ.ಬಿ.ಆರ್. ಅಂಬೇಡ್ಕರ್ ಅವರ ಸಮಾನತೆ, ಬಸವಣ್ಣನವರ ಮಾನವ ಧರ್ಮ ಮುಖ್ಯವಾಗಬೇಕು ಎಂದರು.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

40 mins ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

2 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

3 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

5 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

8 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

8 hours ago