ಮೈಸೂರು

ಸಂವಿಧಾನದಲ್ಲಿ ಸಾಂದರ್ಭಿಕ ಬದಲಾವಣೆ ಅಗತ್ಯ : ಮುಖ್ಯಮಂತ್ರಿ ಚಂದ್ರು ಅಭಿಮತ

ಮೈಸೂರು : ಪ್ರಸ್ತುತ ಸಂದರ್ಭದಲ್ಲಿ ಸಂವಿಧಾನದಲ್ಲಿ ಸಾಂದರ್ಭಿಕ ಬದಲಾವಣೆ ಆಗಬೇಕು ಎಂದು ಆಮ್ ಆದ್ಮಿ ಪಾರ್ಟಿಯ ನಾಯಕರೂ ಆದ ನಟ ಮುಖ್ಯಮಂತ್ರಿ ಚಂದ್ರು ಹೇಳಿದರು.

ನಗರದ ಯುವರಾಜ ಕಾಲೇಜಿನ ಅಮೃತ ಮಹೋತ್ಸವ ಸಭಾಂಗಣದಲ್ಲಿ ಶುಕ್ರವಾರ ನಡೆದ ʼಭವಿಷ್ಯದಲ್ಲಿ ಪ್ರಜಾಪ್ರಭುತ್ವದ ರಕ್ಷಣೆ ಜವಾಬ್ದಾರಿ ಯುವಶಕ್ತಿಯ ಕೈಯಲ್ಲಿ’ ಮುಕ್ತ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಬಸವರಾಜು ಬೊಮ್ಮಾಯಿ, ಶಾಮನೂರು ಶಿವಶಂಕರಪ್ಪ, ಮೈಸೂರಿನ ಮಹಾರಾಜರಿಗೆ ಮೀಸಲಾತಿ ಯಾಕೇ ಬೇಕು. ದಿನಗೂಲಿಯಲ್ಲಿ ಬದುಕುತ್ತಿರುವರಿಗೆ ಮೀಸಲಾತಿ ಬೇಕಿದೆ. ಜಾತಿಯ ಆಧಾರದಲ್ಲಿ ಮೀಸಲಾತಿ ಕೊಡುವುದಾದರೆ ಅಯಾ ಸಮುದಾಯದಲ್ಲಿ ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕಲ್ಪಿಸಬೇಕು. ಮೀಸಲಾತಿ ಅನುಕೂಲ ಪಡೆದು ಉನ್ನತ ಮಟ್ಟಕ್ಕೆ ಏರಿದವರು, ಲಕ್ಷಾಂತರ ರೂಪಾಯಿ ಸಂಬಳ ತೆಗೆದುಕೊಳ್ಳುವವರಿಗೆ ಮೀಸಲಾತಿ ಕೊಡುವುದಾದರೆ ಬೇರೆಯವರ ಗತಿ ಏನಾಗಬೇಕು ಎಂದು ಪ್ರಶ್ನಿಸಿದರು.

ಜೊತೆಗೆ, ೧೦ ವರ್ಷ ಜೈಲು ಶಿಕ್ಷೆ ಅನುಭವಿಸಿದವ ಚುನಾವಣೆಗೆ ಸ್ಪರ್ಧಿಸಲು ಅವಕಾಶವಿದೆ. ಶಿಕ್ಷಣ ಇಲ್ಲದವರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುತ್ತಿದ್ದಾರೆ. ಸಂವಿಧಾನ ಈ ಮಟ್ಟಕ್ಕೆ ಬಂದು ತಲುಪಿದೆ. ಹೀಗಾಗಿ ಸಾಂದರ್ಭಿಕವಾಗಿ ಸಂವಿಧಾನದಲ್ಲಿ ಬದಲಾವಣೆ ತರಬೇಕಿದೆ. ಆಗಿರುವ ಅನಾಹುತಗಳನ್ನು ಸರಿಪಡಿಸಬೇಕಿದೆ ಎಂದು ಹೇಳಿದರು.

ಇದನ್ನು ಓದಿ: ಟ್ರಂಪ್‌ ಕಸರತ್ತು ವ್ಯರ್ಥ ; ಮರಿಯಾ ಕೊರಿನಾ ಮಚಾದೊಗೆ ಒಲಿದ ನೊಬೆಲ್‌ ಶಾಂತಿ ಪ್ರಶಸ್ತಿ..

ಹನ್ನೇರಡನೇ ಶತಮಾನದಲ್ಲಿ ಬಸವಣ್ಣನವರ ಅನುಭವ ಮಂಟಪವೇ ಇಂದಿನ ಸಂಸತ್ತು ಎಂದು ಹೇಳುತ್ತೇವೆ. ಆದರೆ ಬಸವಣ್ಣನವರು ಹೇಳಿದ್ದ ಕಲಬೇಡ, ಕೊಲಬೇಡ,. ಹುಸಿಯ ನುಡಿಯಲು ಬೇಡ.. ಈ ವಚನದ ಎಲ್ಲಾ ಸಾಲುಗಳನ್ನು ಅನುಸರಿಸಿದ್ದರೆ ಯಾವುದೇ ಸಮಸ್ಯೆ ಎದುರಾಗುತ್ತಿರಲಿಲ್ಲ. ಈಗ ಪ್ರಜಾಪ್ರಭುತ್ವದ ಹೆಸರಿನಲ್ಲಿ ಸರ್ವಾಧಿಕಾರಿ ನಡೆಯುತ್ತಿದೆ. ಇಡಿ, ಸಿಬಿಐ, ಚುನಾವಣಾ ಆಯೋಗದ ದುರುಪಯೋಗ ನಡೆಯುತ್ತಿದೆ. ಎಲ್ಲಾ ಪಕ್ಷಗಳಲ್ಲೂ ಕುಟುಂಬ ರಾಜಕಾರಣ ನಡೆಯುತ್ತಿದೆ ಎಂದು ಅವರು ವಿಷಾದಿಸಿದರು.

ಪ್ರಜಾಪ್ರಭುತ್ವ ಉಳಿಯಬೇಕಾದರೆ ಚುನಾವಣೆಗಳಲ್ಲಿ ಯೋಗ್ಯರನ್ನು ಆಯ್ಕೆ ಮಾಡಬೇಕು. ಸ್ಥಳೀಯ ಸಂಸ್ಥೆಗಳಿಂದ ಹಿಡಿದು ವಿಧಾನಸಭೆ, ಲೋಕಸಭೆವರೆಗೆ ಯೋಗ್ಯರೇ ಆಯ್ಕೆಯಾಗಬೇಕು. ಯಾವುದೇ ರಾಜಕೀಯ ಪಕ್ಷದವರು ಯೋಗ್ಯರಿಗೆ ಟಿಕೆಟ್ ನೀಡಲಿಲ್ಲ ಎಂದರೇ ಸ್ಥಳೀಯರೇ ಉತ್ತಮ ಅಭ್ಯರ್ಥಿಯನ್ನು ನಿಲ್ಲಿಸಿ, ಗೆಲ್ಲಿಸಬೇಕು. ಮತದಾನ ಕಡ್ಡಾಯ ಮಾಡಬೇಕು. ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಬೇಕು ಎಂದು ಅವರು ಸಲಹೆ ಮಾಡಿದರು.

ಜಾತಿ ವಿರೋಧಿಸಬಾರದು: ಜಾತಿ ಗಣತಿಗೆ ವಿರೋಧ ಸರಿಯಲ್ಲ. ದೇಶದಲ್ಲಿ ಸಾವಿರಾರು ಜಾತಿಗಳಿವೆ. ಹೀಗಿರುವಾಗ ಸಮಾನತೆ ತರಬೇಕಾದರೆ ಯಾವ್ಯಾವ ಜಾತಿಯವರು ಎಷ್ಟೆಷ್ಟು ಇದ್ದಾರೆ ಎಂಬುದನ್ನು ಪತ್ತೆ ಮಾಡಿ, ಅದರ ಪ್ರಕಾರ ಸೌಲಭ್ಯ ಕಲ್ಪಿಸಬೇಕಾಗಿದೆ. ಇಂದಿಗೂ ಹಲವು ಸಮುದಾಯಗಳಲ್ಲಿ ಒಬ್ಬ ಒಬ್ಬೇ ಶಾಸಕ, ಸಂಸದನಾಗಿಲ್ಲ. ಗ್ರಾಮಪಂಚಾಯಿತಿ ಸದಸ್ಯನೂ ಆಗಿಲ್ಲ. ಸರ್ಕಾರದ ಸೌಲಭ್ಯಗಳು ತಲುಪುತ್ತಿಲ್ಲ. ಇವರಿಗೆ ಸರ್ಕಾರ ಹೀಗಾಗಿ ಜಾತಿ ಗಣತಿಯನ್ನು ವಿರೋಧಿಸುವುದು ಸರಿಯಲ್ಲ ಎಂದು ಅವರು ಹೇಳಿದರು.

ವಕೀಲರು ಹಾಗೂ ನೋಟರಿ ಎಂ.ಎನ್. ಸುಮನಾ ಮಾತನಾಡಿ, ಪ್ರತಿಯೊಬ್ಬರಿಗೂ ಮಹಾತ್ಮಗಾಂಧೀಜಿ ಅವರ ಅಹಿಂಸೆ, ಡಾ.ಬಿ.ಆರ್. ಅಂಬೇಡ್ಕರ್ ಅವರ ಸಮಾನತೆ, ಬಸವಣ್ಣನವರ ಮಾನವ ಧರ್ಮ ಮುಖ್ಯವಾಗಬೇಕು ಎಂದರು.

ಆಂದೋಲನ ಡೆಸ್ಕ್

Recent Posts

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

18 mins ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

53 mins ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

1 hour ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

2 hours ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

18 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

20 hours ago