ಮೈಸೂರು

ಮೀನಾಕ್ಷಿಪುರ ಹಿನ್ನೀರಿನ ದುರಂತದ ಸ್ಥಳ ಪರಿಶೀಲಿಸಿದ ಅಧಿಕಾರಿಗಳು

ಮೈಸೂರು: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದ ಮೀನಾಕ್ಷಿಪುರದ ಕೆಆರ್‌ಎಸ್ ಹಿನ್ನೀರಿನ ದುರಂತದ ಸ್ಥಳವನ್ನು ಅಧಿಕಾರಿಗಳು ಪರಿಶೀಲಿಸಿದರು.

ಗುಂಗ್ರಾಲ್ ಛತ್ರ ಗ್ರಾಮ ಸಮೀಪದ ಮೀನಾಕ್ಷಿಪುರದ ಕೆಆರ್‌ಎಸ್ ಹಿನ್ನೀರಿನ ಪ್ರದೇಶದಲ್ಲಿ ಈಜಲು ನೀರಿಗಿಳಿದಿದ್ದ ಆರು ಮಂದಿ ವಿದ್ಯಾರ್ಥಿಗಳಲ್ಲಿ ಮೂವರು ಮೃತಪಟ್ಟಿದ್ದರು. ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ ಶವಗಳನ್ನು ಹೊರ ತೆಗೆದಿದ್ದರು. ಹೀಗಾಗಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಜಿಲ್ಲಾಽಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಮುಖ್ಯ ಕಾರ್ಯ ನಿರ್ವಹಣಾದಧಿಕಾರಿ ಎಸ್. ಯುಕೇಶ್ ಕುಮಾರ್ ದುರಂತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇಲವಾಲ ಪೊಲೀಸ್‌ಠಾಣೆಯ ಇನ್‌ಸ್ಪೆಕ್ಟರ್ ಅವರು ಅಧಿಕಾರಿಗಳಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದರು. ಮೀನಾಕ್ಷಿಪುರದ ಕೆಆರ್‌ಎಸ್ ಹಿನ್ನೀರಿನ ಪ್ರದೇಶಕ್ಕೆ ನಿತ್ಯ ನೂರಾರು ಜನರು ಬರುತ್ತಿದ್ದಾರೆ. ಪೊಲೀಸರು ಇದನ್ನು ತಡೆದರೂ ಕೆಲವರು ಒಳಗೆ ಬರುತ್ತಿದ್ದಾರೆ. ಹಾಗಾಗಿ, ಇದನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಹೇಳಿದರು. ಈ ಜಾಗದಲ್ಲಿ ಪಾರ್ಟಿ ಮಾಡಲು ಬರುವವರು ಈಜಲು ನೀರಿಗೆ ಧುಮುಕಿ ನೀರಿನ ಸೆಲೆಗೆ ಕೊಚ್ಚಿ ಹೋಗುತ್ತಾರೆ. ಕೆಲವರು ಬೋಟ್‌ಗಳನ್ನು ಇಟ್ಟುಕೊಂಡು ಪ್ರವಾಸಿಗರನ್ನು ಕರೆದೊಯ್ಯುತ್ತಾರೆ ಎಂದು ವಿವರಿಸಿದರು. ಇದನ್ನು ಪರಿಗಣಿಸಿದ ಉಸ್ತುವಾರಿ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಸ್ಥಳದಲ್ಲಿರುವ ಎಲ್ಲಾ ಬೋಟಿಂಗ್‌ಗಳನ್ನು ಸೀಜ್ ಮಾಡಬೇಕು. ಮುಂದಿನ ದಿನಗಳಲ್ಲಿ ಈ ಜಾಗಕ್ಕೆ ಯಾರಿಗೂ ಅವಕಾಶ ಕೊಡಬಾರದು ಎಂದು ಸೂಚನೆ ನೀಡಿದರು. ಕಾನೂನು ಬಾಹಿರವಾಗಿ ಹಿನ್ನೀರಿನ ಪ್ರದೇಶಕ್ಕೆ ಬಂದರೆ ಅಂತಹವರ ಮೇಲೆ ಕ್ರಮ ಜರುಗಿಸಬೇಕು. ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳು ಬಿಡುವಿನ ಸಮಯದಲ್ಲಿ ಸಮಯ ಕಳೆಯಲು ಬರುತ್ತಾರೆ. ಆದರೆ, ದುರಂತದ ಸ್ಥಳವನ್ನು ಗಮನಿಸಬೇಕು. ಮೂವರು ಅಮಾಯಕ ವಿದ್ಯಾರ್ಥಿಗಳ ಸಾವಿನ ವಿಚಾರ ಬೇಸರ ತಂದಿದೆ. ಮುಂದಿನ ದಿನಗಳಲ್ಲಿ ಯಾರೇ ಬಂದರೂ ಅವಕಾಶ ಕೊಡಬಾರದು. ಈ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸುವ ಬಗ್ಗೆ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂದರು.

ತಹಸಿಲ್ದಾರ್ ಮಹೇಶ್ ಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಸ್.ಅರುಣಕುಮಾರ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

2 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

3 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

3 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

3 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

3 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

3 hours ago