Officials inspected the site of the Meenakshipura backwater tragedy.
ಮೈಸೂರು: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದ ಮೀನಾಕ್ಷಿಪುರದ ಕೆಆರ್ಎಸ್ ಹಿನ್ನೀರಿನ ದುರಂತದ ಸ್ಥಳವನ್ನು ಅಧಿಕಾರಿಗಳು ಪರಿಶೀಲಿಸಿದರು.
ಗುಂಗ್ರಾಲ್ ಛತ್ರ ಗ್ರಾಮ ಸಮೀಪದ ಮೀನಾಕ್ಷಿಪುರದ ಕೆಆರ್ಎಸ್ ಹಿನ್ನೀರಿನ ಪ್ರದೇಶದಲ್ಲಿ ಈಜಲು ನೀರಿಗಿಳಿದಿದ್ದ ಆರು ಮಂದಿ ವಿದ್ಯಾರ್ಥಿಗಳಲ್ಲಿ ಮೂವರು ಮೃತಪಟ್ಟಿದ್ದರು. ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ ಶವಗಳನ್ನು ಹೊರ ತೆಗೆದಿದ್ದರು. ಹೀಗಾಗಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಜಿಲ್ಲಾಽಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಮುಖ್ಯ ಕಾರ್ಯ ನಿರ್ವಹಣಾದಧಿಕಾರಿ ಎಸ್. ಯುಕೇಶ್ ಕುಮಾರ್ ದುರಂತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇಲವಾಲ ಪೊಲೀಸ್ಠಾಣೆಯ ಇನ್ಸ್ಪೆಕ್ಟರ್ ಅವರು ಅಧಿಕಾರಿಗಳಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದರು. ಮೀನಾಕ್ಷಿಪುರದ ಕೆಆರ್ಎಸ್ ಹಿನ್ನೀರಿನ ಪ್ರದೇಶಕ್ಕೆ ನಿತ್ಯ ನೂರಾರು ಜನರು ಬರುತ್ತಿದ್ದಾರೆ. ಪೊಲೀಸರು ಇದನ್ನು ತಡೆದರೂ ಕೆಲವರು ಒಳಗೆ ಬರುತ್ತಿದ್ದಾರೆ. ಹಾಗಾಗಿ, ಇದನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಹೇಳಿದರು. ಈ ಜಾಗದಲ್ಲಿ ಪಾರ್ಟಿ ಮಾಡಲು ಬರುವವರು ಈಜಲು ನೀರಿಗೆ ಧುಮುಕಿ ನೀರಿನ ಸೆಲೆಗೆ ಕೊಚ್ಚಿ ಹೋಗುತ್ತಾರೆ. ಕೆಲವರು ಬೋಟ್ಗಳನ್ನು ಇಟ್ಟುಕೊಂಡು ಪ್ರವಾಸಿಗರನ್ನು ಕರೆದೊಯ್ಯುತ್ತಾರೆ ಎಂದು ವಿವರಿಸಿದರು. ಇದನ್ನು ಪರಿಗಣಿಸಿದ ಉಸ್ತುವಾರಿ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಸ್ಥಳದಲ್ಲಿರುವ ಎಲ್ಲಾ ಬೋಟಿಂಗ್ಗಳನ್ನು ಸೀಜ್ ಮಾಡಬೇಕು. ಮುಂದಿನ ದಿನಗಳಲ್ಲಿ ಈ ಜಾಗಕ್ಕೆ ಯಾರಿಗೂ ಅವಕಾಶ ಕೊಡಬಾರದು ಎಂದು ಸೂಚನೆ ನೀಡಿದರು. ಕಾನೂನು ಬಾಹಿರವಾಗಿ ಹಿನ್ನೀರಿನ ಪ್ರದೇಶಕ್ಕೆ ಬಂದರೆ ಅಂತಹವರ ಮೇಲೆ ಕ್ರಮ ಜರುಗಿಸಬೇಕು. ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದರು.
ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳು ಬಿಡುವಿನ ಸಮಯದಲ್ಲಿ ಸಮಯ ಕಳೆಯಲು ಬರುತ್ತಾರೆ. ಆದರೆ, ದುರಂತದ ಸ್ಥಳವನ್ನು ಗಮನಿಸಬೇಕು. ಮೂವರು ಅಮಾಯಕ ವಿದ್ಯಾರ್ಥಿಗಳ ಸಾವಿನ ವಿಚಾರ ಬೇಸರ ತಂದಿದೆ. ಮುಂದಿನ ದಿನಗಳಲ್ಲಿ ಯಾರೇ ಬಂದರೂ ಅವಕಾಶ ಕೊಡಬಾರದು. ಈ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸುವ ಬಗ್ಗೆ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂದರು.
ತಹಸಿಲ್ದಾರ್ ಮಹೇಶ್ ಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಸ್.ಅರುಣಕುಮಾರ್ ಹಾಜರಿದ್ದರು.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…