ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ ಕಚೇರಿ ಮುಂದೆ ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯ ಬುಧವಾರ ನಡೆದಿದೆ.
ಸಾಲಿಗ್ರಾಮ ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದ ರಂಗೇಗೌಡ (70) ಎಂಬುವರು ಆತ್ಮಹತ್ಯೆಗೆ ಯತ್ನಿಸಿದ ರೈತರಾಗಿದ್ದು, ಮೈಸೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ಹೋರಾಟ ಮಾಡುತ್ತಿದ್ದಾರೆ.
ಇವರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳು ಹಾಗೂ ಒರ್ವ ಪುತ್ರಿ ಇದ್ದಾರೆ.
ಚಿಕ್ಕನಾಯಕನಹಳ್ಳಿ ಗ್ರಾಮದ ರೈತ ರಂಗೇಗೌಡ ತಮ್ಮ ಜಮೀನಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ನೀಡಿ ಖಾತೆ ಮಾಡಿ ಕೊಡಿ ಎಂದು ಸಾಲಿಗ್ರಾಮದಲ್ಲಿರುವ ನಾಡಕಚೇರಿಯಲ್ಲಿ ಎರಡು ವರ್ಷಗಳ ಹಿಂದೆ ಅರ್ಜಿ ಸಲ್ಲಿಸಿದ್ದರು. ಸಂಬಂದಪಟ್ಟವರು ಖಾತೆ ಮಾಡದೇ ಸತಾಯಿಸಿ ಅಲೆದಾಡಿಸಿದ್ದಾರೆ. ಈ ಬಗ್ಗೆ ತಹಸೀಲ್ದಾರ್ ಗಮನಕ್ಕೂ ತಂದರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಮನನೊಂದಿದ್ದಾರೆ. ಮನೆಯಲ್ಲಿ ಯಾರಿಗೂ ಹೇಳದ ತಾವೇ ಸ್ವತಃ ನಾಡಕಚೇರಿಗೆ ದಿನ ನಿತ್ಯ ಅಲೆದಾಡಿ ಬೇಸತ್ತಿ ಕೊನೆಗೆ ಗಳಿಗೆಯಲ್ಲಿ ಕ್ರಿಮಿನಾಶಕ ಔಷಧ ಕುಡಿದು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧಾರ ಮಾಡಿ ಸಾಲಿಗ್ರಾಮ ಪಟ್ಟಣದಲ್ಲಿರುವ ನಾಡ ಕಚೇರಿಯ ಮುಂದೆ ಸಾರ್ವಜನಿಕರ ಎದುರಿನಲ್ಲಿ ಕ್ರಿಮಿನಾಶಕ ಔಷಧ ಕುಡಿದಿದ್ದಾರೆ.
ಈ ಘಟನೆಯನ್ನು ಕಂಡ ಮುಖಂಡರೊಬ್ಬರು ಸ್ಥಳೀಯರ ಸಹಕಾರದೊಂದಿಗೆ ರಂಗೇಗೌಡರನ್ನು ಸಾಲಿಗ್ರಾಮ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆಯನ್ನು ಕೊಡಿಸಿದ್ದಾರೆ. ಬಳಿಕ ರಂಗೇಗೌಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸಾವು ಬದುಕಿನ ಹೋರಾಟ ನಡೆಸುತ್ತಿದ್ದಾರೆ.
ಖಂಡನೆ
ಸಾಲಿಗ್ರಾಮ ತಾಲೂಕು ಕೇಂದ್ರವಾದರೂ ರೈತರು ಹಾಗೂ ಸಾರ್ವಜನಿಕರು ಜಮೀನಿನ ದಾಖಲೆಗಾಗಿ ಅಥವಾ ಖಾತೆಗೆ ಮತ್ತು ಜನನ, ಮರಣ ಪ್ರಮಾಣ ಪತ್ರಕ್ಕಾಗಿ ಅಲೆದಾಟ ತಪ್ಪಿಲ್ಲ, ತಾಲೂಕು ಆಡಳಿತ ಸೌಧದ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಸೇರಿದಂತೆ ಎಲ್ಲರೂ ದಾಖಲೆಗಳನ್ನು ನೀಡಲು ಹಿಂದೇಟು ಹಾಕುತ್ತಾರೆ, ಸಾಲಿಗ್ರಾಮ ತಾಲೂಕು ಆಡಳಿತ ವ್ಯವಸ್ಥೆ ಹದಗೆಟ್ಟಿದೆ ಎಷ್ಟೋ ಬಾರಿ ಸಂಬಂದಪಟ್ಟ ಶಾಸಕರು, ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರೂ ಏನೂ ಪ್ರಯೋಜನವಾಗಿಲ್ಲ ಎಂದು ರೈತ ಮುಖಂಡರೊಬ್ಬರು ಆಂದೋಲನಕ್ಕೆ ತಿಳಿಸಿದರು.
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…
ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್ : ದಿ ರೆವೆಂಜ್ನ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ…