ಮೈಸೂರು

ಮಣ್ಣಿನ ಫಲವತ್ತತೆಗೆ ಎಣ್ಣೆಕಾಳುಗಳು ಬೆಳೆ ಉತ್ತಮ : ಮಮತಾ ಎಸ್.ಬಿ

ಮೈಸೂರು: ರೈತರು ತಾವು ಬೆಳೆಯುವ ಬೆಳೆಗಳ ಜೊತೆಗೆ ಸಮಾಜದ ಆರೋಗ್ಯ ಮತ್ತು ಮಣ್ಣಿನ ಫಲವತ್ತತೆಗಾಗಿ ಎಣ್ಣೆಕಾಳುಗಳನ್ನು ಬೆಳೆಯಬೇಕು ಎಂದು ಸಹಾಯಕ ಕೃಷಿ ನಿರ್ದೇಶಕಿ ಮಮತಾ ಎಸ್.ಬಿ. ತಿಳಿಸಿದರು.

ಜಿಲ್ಲಾ ಕೃಷಿ ತರಬೇತಿ ಕೇಂದ್ರ ನಾಗನಹಳ್ಳಿ ವತಿಯಿಂದ ಶುಕ್ರವಾರ ಮತ್ತು ಶನಿವಾರ ಹಮ್ಮಿಕೊಂಡಿದ್ದ ಎರಡು ದಿನಗಳ ಎಣ್ಣೆಕಾಳು ಬೆಳೆಗಳ ಉತ್ಪಾದನಾ ತಾಂತ್ರಿಕತೆಗಳು ಮತ್ತು ಮೌಲ್ಯವರ್ಧನೆಗೆ ಇರುವ ಅವಕಾಶ ಕುರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬರಗಾಲದ ಸನ್ನಿವೇಶದಲ್ಲಿ ತೇವಾಂಶದ ಕೊರತೆ ನೀಗಿಸುವುದರ ಜೊತೆಗೆ ಉತ್ತಮ ಇಳುವರಿ ಪಡೆಯಲು ರೈತರು ಸಾವಯವ ಕೃಷಿ, ಬೆಳೆ ಪರಿವರ್ತನೆ ಮತ್ತು ಮಿಶ್ರ ಬೆಳೆ ಪದ್ದತಿಗಳನ್ನು ಅಳವಡಿಸಬೇಕೆಂದು ತಿಳಿಸಿದರು.

ಮಂಡ್ಯ ವಲಯ ಕೃಷಿ ಸಂಶೋಧನಾ ಕೇಂದ್ರದ ಸಹಾಯಕ ಪ್ರಾಧ್ಯಾಪಕರಾದ ಡಾ.ಪಿ. ತಿಮ್ಮೇಗೌಡ, ಎರಡು ದಿನಗಳ ಈ ಕಾರ್ಯಾಗಾರದಲ್ಲಿ ವಿವಿಧ ಎಣ್ಣೆಕಾಳು ಬೆಳೆಗಳ ಸುಧಾರಿತ ತಳಿಗಳು ಮತ್ತು ಬೇಸಾಯ ಕ್ರಮಗಳ ಬಗ್ಗೆ ರೈತರಿಗೆ ತಾಂತ್ರಿಕ ಮಾಹಿತಿ ನೀಡಿದರು.

ಮೈಸೂರು ಸಿ.ಎಫ್.ಟಿ.ಆರ್.ಐ. ಹಿರಿಯ ವಿಜ್ಣಾನಿಗಳಾದ ಡಾ.ಗೋವಿಂದರಾಜು ಕೆ, ಪ್ರಾತ್ಯಕ್ಷತೆ ಮೂಲಕ ಎಣ್ಣೆಕಾಳು ಬೆಳೆಗಳಲ್ಲಿ ಮೌಲ್ಯವರ್ಧನೆ ಮತ್ತು ಕಲಬೆರೆಕೆ ಎಣ್ಣೆ ಕಂಡುಹಿಡಿಯುವ ವಿಧಾನಗಳ ಕುರಿತು ರೈತರಿಗೆ ತೋರಿಸಿಕೊಟ್ಟರು. ನಂತರ ರೋಗತಜ್ಞೆ ಡಾ. ಆರ್.ಎನ್. ಪುಷ್ಪ ಬೀಜೋಪಚಾರ, ಸಮಗ್ರ ರೋಗ – ಕೀಟ ನಿರ್ವಹಣೆ ಮತ್ತು ದಾಸ್ತಾನು ಕೀಟಗಳ ನಿರ್ವಹಣೆ ಕುರಿತು ತಾಂತ್ರಿಕ ಉಪನ್ಯಾಸ ನೀಡಿದರು.

ತೆಂಗಿನ ಹಾಲಿನಿಂದ ಐಸ್‌ಕ್ರೀಮ್ ತಯಾರಿಕೆ ಮತ್ತು ಮೌಲ್ಯವರ್ಧನೆ ಕುರಿತು ಪ್ರಗತಿಪರ ರೈತರಾದ ಸುರೇಶ್ ಭಟ್, ಕೂರ್ಗಳ್ಳಿ, ಅನುಭವ ಹಂಚಿಕೊoಡರು. ಸಹಾಯಕ ಕೃಷಿ ನಿರ್ದೇಶಕಿ ಮಧುಲತಾ ಹೆಚ್.ಬಿ. ಜೈವಿಕ ಗೊಬ್ಬರಗಳ ಮಹತ್ವ ಮತ್ತು ಬೆಳೆವಿಮೆ ಮತ್ತು ಬೆಳೆ ಸಮೀಕ್ಷೆ ಬಗ್ಗೆ ಮಾಹಿತಿ ನೀಡಿದರು.

ಸಹಾಯಕ ಕೃಷಿ ನಿರ್ದೇಶಕಿ ವಜ್ರೇಶ್ವರಿ ಎಸ್, ಮಣ್ಣು ಮಾದರಿಗಳ ಸಂಗ್ರಹಣೆ ಮತ್ತು ಫಲಿತಾಂಶ ಆಧಾರಿತ ರಸಗೊಬ್ಬರಗಳ ಬಳಕೆ ಬಗ್ಗೆ ಮಾಹಿತಿ ನೀಡಿದರು. ಉದಯೋನ್ಮೂಖ ಉದ್ಯಮಿ ಮೋಹನ್ ಕುಮಾರ್ ಬಿ.ಸಿ  ಗಾಣದ ಮೂಲಕ ಎಣ್ಣೆ ತೆಗೆದು ಆರೋಗ್ಯ ಯುಕ್ತ ಅಡುಗೆ ಎಣ್ಣೆ ಉತ್ಪಾದನೆ ಮತ್ತು ಮಾರುಕಟ್ಟೆಗಿರುವ ಅವಕಾಶಗಳ ಕುರಿತು ಅನುಭವ ಹಂಚಿಕೊoಡರು.

ತರಬೇತಿ ಸಂಯೋಜಕ ಹಾಗೂ ಕೃಷಿ ಅಧಿಕಾರಿ ಮಂಜುಳ ಅವರು ಪಿ.ಎಂ.ಕಿಸಾನ್ ಯೋಜನೆ ಬಗ್ಗೆ ತಿಳಿಸಿದರು. ತರಬೇತಿ ಮುಕ್ತಾಯದ ನಂತರ 25 ಅಂಕಗಳಿಗೆ ಪರೀಕ್ಷೆ ನೆಡೆಸಲಾಗಿ ತರಬೇತಿಯಲ್ಲಿ ಸಕ್ರೀಯವಾಗಿ ಭಾಗವಹಿಸಿ ಹೆಚ್ಚಿನ ಅಂಕ ಪಡೆದ ರೈತರಾದ ದೇವಮ್ಮ ಕೆ.ಎಂ, ರತ್ನೇಶ್ವರ ಕೆ.ಎನ್. ರವರಿಗೆ ಪುಸ್ತಕಗಳನ್ನು ನೀಡಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜಶೇಖರ ಹೆಚ್.ಆರ್, ಶಿಲ್ಪ ಜಿ.ಕೆ. ಹಾಗೂ ಜಿಲ್ಲೆಯ ವಿವಿಧ ಗ್ರಾಮಗಳ 30 ಜನ ರೈತರು ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

57 mins ago

ಆರೋಗ್ಯ ಇಲಾಖೆಯ ಅಧಿಕಾರಿ ಅಬಕಾರಿ ಡಿಸಿಯಾಗಿ ನಿಯೋಜನೆ : ನಿಯಮ ಉಲ್ಲಂಘನೆ ಆರೋಪ

ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…

2 hours ago

ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯುವ ಆಸೆ ಇದೆ : ಶಾಸಕ ಕೆ.ಹರೀಶ್‌ ಗೌಡ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…

2 hours ago

ಭೀಕರ ಸರಣಿ ಅಪಘಾತ : ಬೆಂಗಳೂರಿನ 6 ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…

3 hours ago

ಓದುಗರ ಪತ್ರ | ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…

3 hours ago

ಶಿವರಾತ್ರಿ ಜಾತ್ರೆ | ಮ.ಬೆಟ್ಟದಲ್ಲಿ ಸಕಲ ಸಿದ್ಧತೆ ; ನಾಳೆಯಿಂದ ಐದು ದಿನ ಸಂಭ್ರಮ

ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…

3 hours ago