Mysore
33
overcast clouds

Social Media

ಬುಧವಾರ, 06 ಮೇ 2026
Light
Dark

ಹಳೆ ಜಗಳ: ಲೋಕ ಚುನಾವಣೆ ನೆಪವೊಡ್ಡಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಗುಂಪು!

ನಂಜನಗೂಡು: ಕಾಂಗ್ರೆಸ್ ಗೆ ಓಟ್ ಹಾಕಿಲ್ಲ ನೀವು ಬಿಜೆಪಿಯವರು ಎಂದು ನೆಪವೊಡ್ಡಿ ಹಳೆ ದ್ವೇಷ ತೀರಿಸಿಕೊಳ್ಳಲು ಗುಂಪೊಂದು 5 ಮಂದಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ನಂಜನಗೂಡು ತಾಲೂಕು ಹೊಸಕಡಜಟ್ಟಿ ಗ್ರಾಮದಲ್ಲಿ ನಡೆದಿದೆ.

ಘಟ‌ನೆಗೆ ಸಂಭಂಧಿಸಿದಂತೆ 6 ಮಂದಿ ವಿರುದ್ದ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಲ್ಲೆಗೊಳಗಾದ 5 ಮಂದಿಯಲ್ಲಿ ನಾಲ್ವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್, ಸುರೇಶ್, ಮಹೇಶ್, ಪ್ರಕಾಶ್, ಸುದೀಪ್ ಮತ್ತು ಚೇತನ್ ಎಂಬುವರ ಮೇಲೆ ಹುಲ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಗ್ರಾಮ ಪಂಚಾಯ್ತಿ ಚುನಾವಣೆ ವೇಳೆ ಸೋಲು ಗೆಲುವಿನ ವಿಚಾರದಲ್ಲಿ ಇದೇ ಗುಂಪು ಹಲ್ಲೆ ನಡೆಸಿತ್ತು. ಈ ಸಂಬಂಧ ಪ್ರಕರಣ ಅಗಲೂ ದಾಖಲಾಗಿ ವಿಚಾರಣೆ ನಡೆಯುತ್ತಲೆ ಇದೆ. ಏಪ್ರಿಲ್ 26 ರಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿ ಬರುತ್ತಿದ್ದ ಸಿದ್ದೇಗೌಡ, ಬಸವರಾಜು, ಗುರುಮಲ್ಲೇಶ, ಬಸವರಾಜು, ಮಲ್ಲೇಶ ಈ ಐವರನ್ನ ಅಡ್ಡಗಟ್ಟಿ ನೀವು ಬಿಜೆಪಿಯವರು ಕಾಂಗ್ರೆಸ್ ಗೆ ಓಟ್ ಹಾಕಿಲ್ಲ ಎಂದು ಕ್ಯಾತೆ ತೆಗೆದು ಜಗಳ ಶುರುಮಾಡಿ ಹಿಂದೆ ಹಾಕಿರುವ ಪ್ರಕರಣವನ್ನ ರಾಜಿ ಮಾಡಿಕೊಳ್ಳುವಂತೆ ಧಂಕಿ ಹಾಕಿ ಮಾರಕಾಸ್ತ್ರಗಳಿಂದ ಹಿಗ್ಗಾ ಮುಗ್ಗ ಥಳಿಸಿದ್ದಾರೆ.

ಈ ‌ಕುರಿತು ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ಬಂದವರಿಗೆ ಸೂಕ್ತ ನ್ಯಾಯ ದೊರೆತಿಲ್ಲ ಎಂದು ಈಗ ದೂರುದಾರರು ನೇರವಾಗಿ ಜಿಲ್ಲಾ ಪೋಲೀಸ್ ವರಿಷ್ಠಾದಿಕಾರಿಗಳಿಗೆ ನ್ಯಾಯ ಕೋರಿ ದೂರು ದಾಖಲಿಸಿದ್ದಾರೆ. ಈ ಘಟನೆಯಲ್ಲಿ ಇಬ್ಬರಿಗೆ ಕೈ ಮೂಳೆ ಮುರಿದಿದೆ. ಗಾಯಗೊಂಡವರಿಗೆ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Tags:
error: Content is protected !!