ನಂಜನಗೂಡು: ಕಾಂಗ್ರೆಸ್ ಗೆ ಓಟ್ ಹಾಕಿಲ್ಲ ನೀವು ಬಿಜೆಪಿಯವರು ಎಂದು ನೆಪವೊಡ್ಡಿ ಹಳೆ ದ್ವೇಷ ತೀರಿಸಿಕೊಳ್ಳಲು ಗುಂಪೊಂದು 5 ಮಂದಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ನಂಜನಗೂಡು ತಾಲೂಕು ಹೊಸಕಡಜಟ್ಟಿ ಗ್ರಾಮದಲ್ಲಿ ನಡೆದಿದೆ.
ಘಟನೆಗೆ ಸಂಭಂಧಿಸಿದಂತೆ 6 ಮಂದಿ ವಿರುದ್ದ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಲ್ಲೆಗೊಳಗಾದ 5 ಮಂದಿಯಲ್ಲಿ ನಾಲ್ವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್, ಸುರೇಶ್, ಮಹೇಶ್, ಪ್ರಕಾಶ್, ಸುದೀಪ್ ಮತ್ತು ಚೇತನ್ ಎಂಬುವರ ಮೇಲೆ ಹುಲ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಗ್ರಾಮ ಪಂಚಾಯ್ತಿ ಚುನಾವಣೆ ವೇಳೆ ಸೋಲು ಗೆಲುವಿನ ವಿಚಾರದಲ್ಲಿ ಇದೇ ಗುಂಪು ಹಲ್ಲೆ ನಡೆಸಿತ್ತು. ಈ ಸಂಬಂಧ ಪ್ರಕರಣ ಅಗಲೂ ದಾಖಲಾಗಿ ವಿಚಾರಣೆ ನಡೆಯುತ್ತಲೆ ಇದೆ. ಏಪ್ರಿಲ್ 26 ರಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿ ಬರುತ್ತಿದ್ದ ಸಿದ್ದೇಗೌಡ, ಬಸವರಾಜು, ಗುರುಮಲ್ಲೇಶ, ಬಸವರಾಜು, ಮಲ್ಲೇಶ ಈ ಐವರನ್ನ ಅಡ್ಡಗಟ್ಟಿ ನೀವು ಬಿಜೆಪಿಯವರು ಕಾಂಗ್ರೆಸ್ ಗೆ ಓಟ್ ಹಾಕಿಲ್ಲ ಎಂದು ಕ್ಯಾತೆ ತೆಗೆದು ಜಗಳ ಶುರುಮಾಡಿ ಹಿಂದೆ ಹಾಕಿರುವ ಪ್ರಕರಣವನ್ನ ರಾಜಿ ಮಾಡಿಕೊಳ್ಳುವಂತೆ ಧಂಕಿ ಹಾಕಿ ಮಾರಕಾಸ್ತ್ರಗಳಿಂದ ಹಿಗ್ಗಾ ಮುಗ್ಗ ಥಳಿಸಿದ್ದಾರೆ.
ಈ ಕುರಿತು ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ಬಂದವರಿಗೆ ಸೂಕ್ತ ನ್ಯಾಯ ದೊರೆತಿಲ್ಲ ಎಂದು ಈಗ ದೂರುದಾರರು ನೇರವಾಗಿ ಜಿಲ್ಲಾ ಪೋಲೀಸ್ ವರಿಷ್ಠಾದಿಕಾರಿಗಳಿಗೆ ನ್ಯಾಯ ಕೋರಿ ದೂರು ದಾಖಲಿಸಿದ್ದಾರೆ. ಈ ಘಟನೆಯಲ್ಲಿ ಇಬ್ಬರಿಗೆ ಕೈ ಮೂಳೆ ಮುರಿದಿದೆ. ಗಾಯಗೊಂಡವರಿಗೆ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…