ನಂಜನಗೂಡು: ಕಾಂಗ್ರೆಸ್ ಗೆ ಓಟ್ ಹಾಕಿಲ್ಲ ನೀವು ಬಿಜೆಪಿಯವರು ಎಂದು ನೆಪವೊಡ್ಡಿ ಹಳೆ ದ್ವೇಷ ತೀರಿಸಿಕೊಳ್ಳಲು ಗುಂಪೊಂದು 5 ಮಂದಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ನಂಜನಗೂಡು ತಾಲೂಕು ಹೊಸಕಡಜಟ್ಟಿ ಗ್ರಾಮದಲ್ಲಿ ನಡೆದಿದೆ.
ಘಟನೆಗೆ ಸಂಭಂಧಿಸಿದಂತೆ 6 ಮಂದಿ ವಿರುದ್ದ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಲ್ಲೆಗೊಳಗಾದ 5 ಮಂದಿಯಲ್ಲಿ ನಾಲ್ವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್, ಸುರೇಶ್, ಮಹೇಶ್, ಪ್ರಕಾಶ್, ಸುದೀಪ್ ಮತ್ತು ಚೇತನ್ ಎಂಬುವರ ಮೇಲೆ ಹುಲ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಗ್ರಾಮ ಪಂಚಾಯ್ತಿ ಚುನಾವಣೆ ವೇಳೆ ಸೋಲು ಗೆಲುವಿನ ವಿಚಾರದಲ್ಲಿ ಇದೇ ಗುಂಪು ಹಲ್ಲೆ ನಡೆಸಿತ್ತು. ಈ ಸಂಬಂಧ ಪ್ರಕರಣ ಅಗಲೂ ದಾಖಲಾಗಿ ವಿಚಾರಣೆ ನಡೆಯುತ್ತಲೆ ಇದೆ. ಏಪ್ರಿಲ್ 26 ರಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿ ಬರುತ್ತಿದ್ದ ಸಿದ್ದೇಗೌಡ, ಬಸವರಾಜು, ಗುರುಮಲ್ಲೇಶ, ಬಸವರಾಜು, ಮಲ್ಲೇಶ ಈ ಐವರನ್ನ ಅಡ್ಡಗಟ್ಟಿ ನೀವು ಬಿಜೆಪಿಯವರು ಕಾಂಗ್ರೆಸ್ ಗೆ ಓಟ್ ಹಾಕಿಲ್ಲ ಎಂದು ಕ್ಯಾತೆ ತೆಗೆದು ಜಗಳ ಶುರುಮಾಡಿ ಹಿಂದೆ ಹಾಕಿರುವ ಪ್ರಕರಣವನ್ನ ರಾಜಿ ಮಾಡಿಕೊಳ್ಳುವಂತೆ ಧಂಕಿ ಹಾಕಿ ಮಾರಕಾಸ್ತ್ರಗಳಿಂದ ಹಿಗ್ಗಾ ಮುಗ್ಗ ಥಳಿಸಿದ್ದಾರೆ.
ಈ ಕುರಿತು ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ಬಂದವರಿಗೆ ಸೂಕ್ತ ನ್ಯಾಯ ದೊರೆತಿಲ್ಲ ಎಂದು ಈಗ ದೂರುದಾರರು ನೇರವಾಗಿ ಜಿಲ್ಲಾ ಪೋಲೀಸ್ ವರಿಷ್ಠಾದಿಕಾರಿಗಳಿಗೆ ನ್ಯಾಯ ಕೋರಿ ದೂರು ದಾಖಲಿಸಿದ್ದಾರೆ. ಈ ಘಟನೆಯಲ್ಲಿ ಇಬ್ಬರಿಗೆ ಕೈ ಮೂಳೆ ಮುರಿದಿದೆ. ಗಾಯಗೊಂಡವರಿಗೆ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…