ಮೈಸೂರು : ಜಿಆರ್ಎಸ್ ಫ್ಯಾಂಟಸಿ ಪಾರ್ಕ್ನ ಆಟಗಳಲ್ಲಿ ಲೋಪ ಕಂಡು ಬಂದ ಹಿನ್ನಲೆ ವ್ಯಕ್ತಿಯೊಬ್ಬರ ಕಾಲು ಯಂತ್ರಗಳ ಮಧ್ಯೆ ಸಿಲುಕಿ ಎರಡು ಬೆರಳುಗಳನ್ನ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ.
ದೆಹಲಿ ಮಹಾನಗರ ಪಾಲಿಕೆಯ ಅಸಿಸ್ಟೆಂಟ್ ಅಸೆಸರ್ ವಿಶಾಂತ್ ಯಾದವ್ ಬೆರಳುಗಳನ್ನ ಕಳೆದುಕೊಂಡವರು. ಶಾಶ್ವತ ಅಂಗವಿಕಲರಾದ ಹಿನ್ನಲೆ ಕಾನೂನು ಕ್ರಮ ಕೈಗೊಳ್ಳುವಂತೆ ವಿಶಾಂತ್ ಯಾದವ್ ಅವರು GRS ಫ್ಯಾಂಟಸಿ ಪಾರ್ಕ್ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಜನರಲ್ ಮ್ಯಾನೇಜರ್ ವಿರುದ್ದ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನು ಓದಿ: ಮಡಿಕೇರಿ | ಮನೆಗಳವು ಮಾಡಿದ್ದ ಖದೀಮರು ಬಂಧನ
ಅಕ್ಟೋಬರ್ ನಲ್ಲಿ ಮೈಸೂರಿಗೆ ಬಂದಿದ್ದ ವಿಶಾಂತ್ ಯಾದವ್ ಅವರು ತಮ್ಮ ಸಹೋದರನ ಜೊತೆ GRS ಫ್ಯಾಂಟಸಿ ಪಾರ್ಕ್ ಗೆ ಆಟವಾಡಲು ತೆರಳಿದ್ದಾರೆ. ಈ ವೇಳೆ ಸೂಪರ್ ಡ್ರಾಪರ್ ವಾಟರ್ ಸ್ಲೈಡರ್ ನಲ್ಲಿ ಆಟವಾಡುವ ವೇಳೆ ಯಂತ್ರದ ಮಧ್ಯೆ ಕಾಲುಗಳು ಸಿಲುಕಿವೆ. ತೀವ್ರ ಗಾಯಗೊಂಡ ವಿಶಾಂತ್ ಯಾದವ್ ರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ವಿಶಾಂತ್ ಯಾದವ್ ಎರಡು ಬೆರಳುಗಳನ್ನ ಶಾಶ್ವತವಾಗಿ ಕಳೆದುಕೊಂಡಿದ್ದಾರೆ. ಸುರಕ್ಷಾ ಕ್ರಮ ಅನುಸರಿಸದೆ ದೋಷಪೂರಿತ ಯಂತ್ರದಿಂದಾಗಿ ತಾವು ಶಾಶ್ವತ ಅಂಗವಿಕಲನಾಗಬೇಕಾಯ್ತು ಎಂದು ಆರೋಪಿಸಿ ಕಾನೂನು ಕ್ರಮ ಜರುಗಿಸುವಂತೆ ಎಂಡಿ ಹಾಗೂ ಜಿಎಂ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…