ಮೈಸೂರು: ನಗರದ ಮುದ್ದುರಾಮ ಪ್ರತಿಷ್ಠಾನವು ಜುಲೈ 23ರಂದು ಸಂಜೆ 4.15ಕ್ಕೆ ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಮುದ್ದುರಾಮ ಪ್ರಶಸ್ತಿ/ಪುರಸ್ಕಾರ ಹಾಗೂ ಕೃತಿಗಳ ಬಿಡುಗಡೆ ಸಮಾರಂಭವನ್ನು ಆಯೋಜಿಸಿದೆ.
2023ನೇ ಸಾಲಿನ ಮುದ್ದುರಾಮ ಪ್ರಶಸ್ತಿಯನ್ನು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಅವರಿಗೆ ನೀಡಲಾಗುವುದು. 50 ಸಾವಿರ ಗೌರವಧನ ಹಾಗೂ ಫಲಕದೊಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಚೌಪದಿ ರಚನೆಕಾರ ಎಂ.ಮುತ್ತುಸ್ವಾಮಿ ಅವರಿಗೆ ಮುದ್ದುರಾಮ ಪುರಸ್ಕಾರ ನೀಡಲಾಗುವುದು. ಇದು 25 ಸಾವಿರ ಗೌರವಧನ ಹಾಗೂ ಫಲಕವನ್ನು ಒಳಗೊಂಡಿರುತ್ತದೆ.
ಇದೇ ಸಮಾರಂಭದಲ್ಲಿ ಹಿರೇಮಗಳೂರು ಕಣ್ಣನ್ ಅವರ ಕವಿ ಕೆ.ಸಿ.ಶಿವಪ್ಪ ಕುರಿತ ‘ಮುದ್ದುರಾಮ ಲಹರಿ’ ಹಾಗೂ ಶ್ವೇತಾ ಪ್ರಕಾಶ್ ಅವರ ಚೌಪದಿಗಳ ಸಂಕಲನ ‘ಪದ್ಮ ಪಲ್ಲವ’ ಕೃತಿಗಳು ಬಿಡುಗಡೆ ಆಗಲಿವೆ.
ಸಮಾರಂಭದ ಸಾನ್ನಿಧ್ಯವನ್ನು ಸುತ್ತೂರಿನ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ವಹಿಸುವರು. ಮುಖ್ಯ ಅತಿಥಿಗಳಾಗಿ ಶಿಕ್ಷಣ ತಜ್ಞ ಡಾ.ಗುರುರಾಜ ಕರಜಗಿ ಹಾಗೂ ವಾಗ್ಮಿ ಎಂ.ಕೃಷ್ಣೇಗೌಡ ಭಾಗವಹಿಸುವರು. ಹಿರಿಯ ಸಾಹಿತಿ ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿಗಳು ಅಧ್ಯಕ್ಷತೆ ವಹಿಸುವರು ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…